ಜಿಲ್ಲೆಯ ನಿರೀಕ್ಷೆ ಈಡೇರಿಸುವಲ್ಲಿಯೂ ಫೇಲ್‌!


Team Udayavani, Jul 6, 2018, 3:48 PM IST

kumaraswamy-2.jpg

ಯಾದಗಿರಿ: ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್‌ನಲ್ಲಿ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಿಲ್ಲ, ಜತೆಗೆ ಕೈಗಾರಿಕೆಗಳ ಬೆಳವಣಿಗೆಗೂ ಆದ್ಯತೆ ನೀಡಿಲ್ಲ. ಹೀಗಾಗಿ ಈ ಭಾಗದ ಜನರ ನಿರೀಕ್ಷೆಗಳಿಗೆ ತಣ್ಣೀರೆರಚಿದಂತೆ ಆಗಿದೆ. ಈ ಭಾಗದಲ್ಲಿ ಚುನಾವಣೆ ಪ್ರಚಾರಕ್ಕೆ ಬಂದಾಗ ಎಚ್‌.ಡಿ. ಕುಮಾರಸ್ವಾಮಿ ಅವರೇ, ಇಲ್ಲಿ ಆಡಳಿತ ನಡೆಸಿದ ಜನಪ್ರತಿನಿ ಧಿಗಳು ಈ ಭಾಗವನ್ನು ನಿರ್ಲಕ್ಷಿಸಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುತ್ತೇವೆ ಎಂದಿದ್ದರು.ಆದರೆ ಈಗ ಅವರೇ ಈ ಭಾಗವನ್ನು ನಿರ್ಲಕ್ಷಿಸಿದ್ದಾರೆ. 

ಬಹು ವರ್ಷಗಳ ಬೇಡಿಯಾಗಿರುವ ವೈದ್ಯಕೀಯ, ಇಂಜಿನಿಯರಿಂಗ್‌, ನರ್ಸಿಂಗ್‌ ಕಾಲೇಜುಗಳನ್ನು ಈ ಭಾಗದಲ್ಲಿ ಸ್ಥಾಪಿಸಲು ಹಾಗೂ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ದೊರಕಬಹುದು ಎನ್ನುವ ನಿರೀಕ್ಷೆಯಲ್ಲಿದ್ದ ಗಡಿ ಜಿಲ್ಲೆ ಜನರಿಗೆ ಈ ಬಜೆಟ್‌ ಕಹಿಯಾಗಿದೆ. ಸಮ್ಮಿಶ್ರ ಸರ್ಕಾರ ಕೇವಲ ಹಾಸನ, ಮಂಡ್ಯ, ಮೈಸೊರಿಗಾಗಿ ಮಂಡಿಸಿರುವ ಬಜೆಟ್‌ ಎನ್ನುವಂತಾಗಿದೆ. ಉತ್ತರ ಕರ್ನಾಟಕಕ್ಕೆ ವಿಶೇಷ ಯೋಜನೆ ನೀಡದೆ ತಾರತಮ್ಯ ಮಾಡಲಾಗಿದೆ.

ಜಿಲ್ಲೆಯಲ್ಲಿ ತೋಟಗಾರಿಕೆ ಬೇಸಾಯ ಕೇವಲ ಪ್ರತಿಶತ ಎರಡರಷ್ಟಿದ್ದು, ಕಾರವಾರ, ತುಮಕೂರು, ಯಾದಗಿರಿ, ಹಾವೇರಿ ಜಿಲ್ಲೆಯ ತಲಾ ಐದು ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ಇಸ್ರೇಲ್‌ ಮಾದರಿಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು 150 ಕೋಟಿ ರೂ. ಯೋಜನೆ ಘೋಷಿಸಿದ್ದಾರೆ. ಗಡಿ ಜಿಲ್ಲೆಯಲ್ಲಿ ಅತೀ ಕಡಿಮೆ ಎಂದರೆ 6,250 ಹೆಕ್ಟೇರ್‌ ಮಾತ್ರ ತೋಟಗಾರಿಕೆ ಪ್ರದೇಶವಿದೆ. ಇಲ್ಲಿನ ರೈತರು ಎಷ್ಟರ ಮಟ್ಟಿಗೆ ಈ ಯೋಜನೆ ಲಾಭ ಪಡೆಯುತ್ತಾರೋ ಗೊತ್ತಿಲ್ಲ.

 ಶಾಸಕರ ಮಾತಿಗೆ ಮನ್ನಣೆ ಸಿಗಲಿಲ್ಲವೇ?: ಬಜೆಟ್‌ಗೆ ಮುನ್ನ ಜುಲೈ 4ರಂದು “ಉದಯವಾಣಿ’ಯೊಂದಿಗೆ ಮಾತನಾಡಿದ್ದ ಜೆಡಿಎಸ್‌ ಶಾಸಕ ನಾಗನಗೌಡ ಕಂದಕೂರ, ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದರು. ಹೀಗಿದ್ದರೂ ಅವರ ಮಾತಿಗೆ ಮನ್ನಣೆ ದೊರಕಿಲ್ಲ ಎನ್ನುವಂತಾಗಿದೆ.

‌ಮ್ಮಿಶ್ರ ಸರ್ಕಾರದ ಬಜೆಟ್‌ ಕೇವಲ ಹಾಸನ, ರಾಮನಗರ, ಮೈಸೂರಿಗೆ ಸೀಮಿತವಾಗಿದೆ. ರಾಜ್ಯದ ಸರ್ವಾಂಗೀಣ
ಅಭಿವೃದ್ಧಿ ನೋಟ ಇದರಲ್ಲಿ ಕಾಣುತ್ತಿಲ್ಲ. ಯಾದಗಿರಿ ಜಿಲ್ಲೆಯಲ್ಲಿ ತೋಟಗಾರಿಕೆ ತೀರಾ ಕಡಿಮೆ ಇದೆ. ಅದಕ್ಕೆ ಯೋಜನೆ ರೂಪಿಸಿದ್ದಾರೆ. ಬಿಜೆಪಿ ಜನಪ್ರತಿನಿಧಿಗಳು ಆರಿಸಿ ಬಂದಿರುವ ಪ್ರದೇಶಗಳನ್ನು ನಿರ್ಲಕ್ಷಿಸಲಾಗಿದೆ.
 ವೆಂಕಟರೆಡ್ಡಿ ಮುದ್ನಾಳ, ಶಾಸಕ

ರಾಜ್ಯದಲ್ಲಿ ಶೇ. 70ರಷ್ಟು ರೈತರಿದ್ದಾರೆ. ರೈತರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಸಮ್ಮಿಶ್ರ ಸರ್ಕಾರ
ಮಾಡಿದೆ. ಕೇಂದ್ರ ಸರ್ಕಾರ ಮಾಡಬೇಕಿದ್ದ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. 
 ಶರಣಬಸಪ್ಪಗೌಡ, ಶಾಸಕ

ಅಭಿವೃದ್ಧಿಯ ಬಜೆಟ್‌ ಇದು ಅಲ್ಲ. ಜಿಲ್ಲೆಗೆ ಮೊದಲಿ ನಿಂದಲೂ ಅನ್ಯಾಯ ಆಗುತ್ತಿದೆ. ಜಿದ್ದಿನಿಂದ ಎಚ್‌.ಡಿ. ಕುಮಾರಸ್ವಾಮಿ ಅವರು ಬಜೆಟ್‌ ಮಂಡಿಸಿದ್ದಾರೆ. ಅಭಿವೃದ್ಧಿ ದೃಷ್ಟಿ ಇಲ್ಲಿ ಕಾಣುತ್ತಿಲ್ಲ. 
 ರಾಜುಗೌಡ, ಶಾಸಕ

ಬಜೆಟ್‌ಲ್ಲಿ ರೈತರ 34 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿರುವುದು ಸಂತಸದ ವಿಚಾರ. 150 ಕೋಟಿ ರೂ. ವೆಚ್ಚದ 5 ಸಾವಿರ ಹೆಕ್ಟೇರ್‌ ಇಸ್ರೇಲ್‌ ಮಾದರಿ ಕೃಷಿಗಾಗಿ ವಿಶೇಷ ಅನುದಾನದಡಿ ಯಾದಗಿರಿ ಜಿಲ್ಲೆ ಸೇರಿಸಿದ್ದು ಸಂತಸ ತಂದಿದೆ.
 ನಾಗನಗೌಡ, ಶಾಸಕ 

ಸಮ್ಮಿಶ್ರ ಸರ್ಕಾರ ಅವೈಜ್ಞಾನಿಕ ಬಜೆಟ್‌ ಮಂಡಿಸಿದ್ದು, ಜನ ಸಾಮಾನ್ಯರ ಮೇಲೆ ಹೊರೆ ಹಾಕಿದೆ. ನಿತ್ಯ ಉಪಯೋಗಿ ವಸ್ತುಗಳಾದ ಪೆಟ್ರೋಲ್‌, ಡಿಸೇಲ್‌ ಹಾಗೂ ವಿದ್ಯುತ್‌ ದರ ಹೆಚ್ಚಿಸಿದೆ. ಹೀಗಾದರೆ ಬಡವರು ಹಾಗೂ ಮಧ್ಯಮವರ್ಗದವರು ಜೀವನ ಮಾಡುವುದಾದರು ಹೇಗೆ?  ನಾಗರತ್ನಾ ಕುಪ್ಪಿ ರಾಜ್ಯ ಬಿಜೆಪಿ ಉಪಾಧ್ಯಕ್ಷ 
ಈ ಬಜೆಟ್‌ ಅಭಿವೃದ್ಧಿಗೆ ಸಂಬಂಧಿಸಿದಂತೆ ಪರಿಪೂರ್ಣವಾಗಿಲ್ಲ. ಒಂದು ಕಣ್ಣಿಗೆ ಸುಣ್ಣ , ಇನ್ನೊಂದು ಕಣ್ಣಿಗೆ
ಬೆಣ್ಣೆ ಸವರುವ ಕೆಲಸವನ್ನು ಸಮ್ಮಿಶ್ರ ಸರ್ಕಾರ ಮಾಡಿದೆ.
 ಸಿದ್ಧಲಿಂಗರೆಡ್ಡಿ ಪಾಟೀಲ ಕಂದಕೂರ, ಕರವೇ ಜಿಲ್ಲಾಧ್ಯಕ್ಷ

ಸಾಲಮನ್ನಾ ಅವೈಜ್ಞಾನಿಕ ನಿಲುವು, ಆಳುವ ಪಕ್ಷಗಳು ಶ್ರಮ ಜೀವಿ ರೈತರಲ್ಲಿ ಇನ್ನಷ್ಟು ಆಲಸ್ಯತನ ಮೂಡಿಸುವ ಹುನ್ನಾರ ನಡೆಸಿವೆ.  
 ರಾಜಾ ಮದನಗೋಪಾಲ ನಾಯಕ, ಮಾಜಿ ಸಚಿವ

ಹಳೇ ಮೈಸೂರು ಭಾಗಕ್ಕೆ ಒತ್ತು ನೀಡಿದ್ದಾರೆ. ಸಂಪೂರ್ಣ ಸಾಲ ಮನ್ನಾ ಮಾಡದೇ ಮತ್ತೂಮ್ಮೆ ವಚನ ಭ್ರಷ್ಟರಾಗಿದ್ದಾರೆ. ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡದೆ ತೀವ್ರ ನಿರಾಸೆಯಾಗಿದೆ. 
 ಉಮೇಶ ಮುದ್ನಾಳ, ಕೋಲಿ ಸಮಾಜದ ಜಿಲ್ಲಾಧ್ಯಕ್ಷ 

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.