ಕಾರ್ಮಿಕರಿಗೆ ವರವಾದ ನರೇಗಾ


Team Udayavani, Jul 28, 2018, 5:55 PM IST

Kerekatte-03.jpg

ಯಾದಗಿರಿ: ಜನವರಿಯಿಂದ ಜುಲೈ 26ರ ವರೆಗೆ 223 ಮಿ. ಮೀಟರ್‌ ಜಿಲ್ಲಾದ್ಯಂತ ಮಳೆ ಸುರಿದಿದ್ದು, ವಾಡಿಕೆಗಿಂತ ಶೇ. 25ರಷ್ಟು ಕಡಿಮೆ ಮಳೆಯಾಗಿದೆ. ಮುಂಗಾರು ಹಂಗಾಮಿನಲ್ಲಿ ಶೇ. 56ರಷ್ಟು ಬಿತ್ತನೆ ಕಾರ್ಯ ಕೂಡ ಮುಕ್ತಾಯಗೊಂಡಿದ್ದು, 2,69,224 ಹೆಕ್ಟೇರ್‌ ಪ್ರದೇಶದಲ್ಲಿ 1,51,270 ಹೆಕ್ಟೇರ್‌ ಪ್ರದೇಶ ಮಾತ್ರ ಬಿತ್ತನೆ ಗುರಿ ಸಾಧಿಸಲಾಗಿದೆ.

ಯಾದಗಿರಿಯಲ್ಲಿ 71,700 ಹೆಕ್ಟೇರ್‌ ಬಿತ್ತನೆ ಗುರಿಯಲ್ಲಿ 58,140 ಹೆಕ್ಟೇರ್‌ ಪ್ರದೇಶ ಬಿತ್ತನೆಯಾಗಿದೆ. ಶಹಾಪುರಲ್ಲಿ 99,922 ಹೆಕ್ಟೇರ್‌ ಪ್ರದೇಶ ಬಿತ್ತನೆ ಗುರಿಯಲ್ಲಿ 60,780 ಹೆಕ್ಟೇರ್‌ ಪ್ರದೇಶ ಬಿತ್ತನೆಯಾಗಿದ್ದು, ಇನ್ನು ಸುರಪುರ ತಾಲೂಕಿನಲ್ಲಿ 97,602 ಹೆಕ್ಟೇರ್‌ ಗುರಿಯಲ್ಲಿ 32,350 ಹೆಕ್ಟೇರ್‌ ಪ್ರದೇಶದಲ್ಲಿ ಶೇ. 33.34ರಷ್ಟು ಬಿತ್ತನೆಯಾಗಿದೆ.

ಜಿಲ್ಲೆಯಲ್ಲಿ ಹೆಚ್ಚಾಗಿ ಗುರುಮಠಕಲ್‌, ಯಾದಗಿರಿ ತಾಲೂಕಿನ ರೈತರು ಮಳೆ ಆಶ್ರಿತ ಬೇಸಾಯ ಅವಲಂಭಿಸಿದ್ದು, ಸೂಕ್ತ ನೀರಾವರಿ ಸೌಲಭ್ಯವಿಲ್ಲದೇ ಅತಿವೃಷ್ಟಿ ಅನಾವೃಷ್ಟಿಗೆ ತುತ್ತಾಗುವುದು ಸಾಮಾನ್ಯವಾಗಿದೆ. ಸುರಪುರ ಮತ್ತು ಶಹಾಪುರ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚಾಗಿ ರೈತರು ನೀರಾವರಿ ಅವಲಂಭಿಸಿದ್ದಾರೆ.
 
ನೂತನ ತಾಲೂಕು ಕೇಂದ್ರವಾದ ಗುರುಮಠಕಲ್‌ ಮತ್ತು ಯಾದಗಿರಿ ಜನರು ಸೂಕ್ತ ಕೆಲಸ ಸಿಗದೇ ಬೆಂಗಳೂರು, ಮುಂಬೈ ಇನ್ನಿತರ ನಗರಗಳಿಗೆ ಗುಳೆ ಹೋಗುವುದು ತಪ್ಪಿಲ್ಲ. ಇನ್ನು ನರೇಗಾ ಯೋಜನೆಯಿಂದ ಕೂಲಿ ಕಾರ್ಮಿಕರಿಗೆ ಸ್ವಲ್ಪ ಮಟ್ಟಿಗೆ ಅನುಕೂಲವಾಗಿದೆ. ಎಪ್ರಿಲ್‌ನಿಂದ ಜೂನ್‌ ವರೆಗೆ ಕೆರೆ ಹೂಳೆತ್ತುವುದು, ಕೃಷಿ ಹೊಂಡ ನಿರ್ಮಾಣ, ನಮ್ಮ ಹೊಲ ನಮ್ಮ ರಸ್ತೆ, ತಡೆಗೋಡೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿ ನಿರ್ವಹಿಸಲು ಪ್ರಸಕ್ತ ಸಾಲಿನಲ್ಲಿ 1,39,005 ಕುಟುಂಬಗಳು ಜಾಬ್‌ ಕಾರ್ಡಗಾಗಿ ನೋಂದಣಿಯಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಒಟ್ಟು 1,35,482 ಜಾಬ್‌ ಕಾರ್ಡ್‌ ವಿತರಿಸಲಾಗಿದೆ.

13,473 ಕುಟುಂಬದ 18,722 ಜನರು 2,77,784 ದಿನ ಕೆಲಸ ಮಾಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ
ಅಸಂಖ್ಯಾತ ಸಂಖ್ಯೆಯಲ್ಲಿ ಗುರುಮಠಕಲ್‌ ಮತ್ತು ಯಾದಗಿರಿ ತಾಲೂಕಿನ ಜನರು ಕೆಲಸ ಅರಿಸಿ ಗುಳೆ ಹೋಗುತ್ತಿರುವುದನ್ನು ತಪ್ಪಿಸಲು ನರೇಗಾ ಯೋಜನೆ ಸಾಕಷ್ಟು ಅನುಕೂಲವಾಗಿದ್ದು, ಮಹಾನಗರಗಳಲ್ಲಿ ಕಟ್ಟಡ ಕಾರ್ಮಿಕ ಕೆಲಸ ಮಾಡುವವರಿಗೆ ಹೆಚ್ಚಿನ ಬೇಡಿಕೆ ಮತ್ತು ದುಡಿಮೆಗೆ ತಕ್ಕ ಸಂಬಳ ಸಿಗುವುದರಿಂದ ಕಟ್ಟಡ ಕಾರ್ಮಿಕರು ಮಾತ್ರ ವಲಸೆ ಹೋಗುತ್ತಿರುವುದು ಕಂಡು ಬರುತ್ತಿದೆ.

ಜಿಲ್ಲೆಯಲ್ಲಿ ನರೇಗಾ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಹೆಚ್ಚಿನ ಉದ್ಯೋಗ ದಿನ ಸೃಷ್ಟಿಯಾಗಿರುವುದರಿಂದ ಕೂಲಿ ಕಾರ್ಮಿಕರು ಗುಳೆ ಹೋಗುವುದು ಹೆಚ್ಚಾಗಿ ಕಾಣುತ್ತಿಲ್ಲ. ಕೂಲಿ ಕಾರ್ಮಿಕರಿಗೆ ನರೇರಾ ಯೋಜನೆ ವರದಾನವಾಗಿದೆ. ಸ್ಥಳೀಯವಾಗಿಯೇ ನಿತ್ಯ ಕೆಲಸಕ್ಕೆ 249 ರೂ. ಕೂಲಿ ಪಡೆಯಬಹುದು. 
 ವಸಂತರಾವ್‌ ಕುಲಕರ್ಣಿ, ಜಿಪಂ ಉಪ ಕಾರ್ಯದರ್ಶಿ 

„ಅನೀಲ ಬಸೂದೆ

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.