ದೇಶಾದ್ಯಂತ 9ರಂದು ಜೈಲ್‌ ಭರೋ ಚಳವಳಿ: ಬಸವರಾಜ


Team Udayavani, Aug 4, 2018, 3:27 PM IST

yad-2.jpg

ಸುರಪುರ: ಕೇಂದ್ರ ಸರಕಾರದ ಕೃಷಿ ಮತ್ತು ಜನವಿರೋಧಿ ಹಾಗೂ ಆರ್ಥಿಕ ನೀತಿ ಖಂಡಿಸಿ ಅತಿವೃಷ್ಟಿ, ಅನಾವೃಷ್ಟಿ ಪರಿಹಾರ ಹಾಗೂ ಸಂಪೂರ್ಣ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಕರ್ನಾಟಕ ಪ್ರಾಂತ ರೈತ ಸಂಘ ಆಗಸ್ಟ 9ರಂದು ದೇಶಾದ್ಯಂತ ಜೈಲ್‌ ಭರೋ ಚಳವಳಿ ಹಮ್ಮಿಕೊಕೊಂಡಿದೆ ಎಂದು ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಸವರಾಜ ಹೇಳಿದರು.

ನಗರದಲ್ಲಿ ಗುರುವಾರ ನಡೆದ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಕಪ್ಪು ಹಣ ತಂದು ಪ್ರತಿ ರೈತನ ಬ್ಯಾಂಕ್‌ ಖಾತೆಗೆ 15 ಲಕ್ಷ ರೂ. ಹಣ ಜಮೆ ಮಾಡುತ್ತೇನೆ. ವಿದ್ಯುತ್‌ ಸಮಸ್ಯೆ ನಿವಾರಿಸಿ ಕೃಷಿ ವಲಯಕ್ಕೆ ಆದ್ಯತೆ ನೀಡುತ್ತೇನೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಅನೇಕ
ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಕೇಂದ್ರ ಸರಕಾರ ನುಡಿದಂತೆ ನಡೆಯುತ್ತಿಲ್ಲ ಎಂದು ಆರೋಪಿಸಿದರು.

ರೈತರ ಆತ್ಮಹತ್ಯೆ, ದಲಿತ, ಅಲ್ಪ ಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚುತ್ತಿವೆ. ಗುಳೆ ವ್ಯಾಪಕವಾಗಿದೆ. ಕಾರ್ಮಿಕರಿಗೆ ಕನಿಷ್ಠ ವೇತನ ನೀಡುತ್ತಿಲ್ಲ. ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದು ಕಾರ್ಮಿಕರನ್ನು ಒಕ್ಕಲೆಬಿಸುವ ಹುನ್ನಾರು ನಡೆದಿದೆ. ಒಟ್ಟಾರೆ ಕೇಂದ್ರ ಸರಕಾರ ಅನುಸರಿಸುತ್ತಿರುವ ಜನವಿರೋಧಿ ನೀತಿಯನ್ನು ಹಿಮ್ಮೆಟಿಸಲು ಚಳವಳಿ ಹಮ್ಮಿಕೊಳ್ಳಲಾಗಿದೆ
ಎಂದು ತಿಳಿಸಿದರು. 

ಸಂಘದ ಜಿಲ್ಲಾ ಪ್ರಮುಖ ಚನ್ನಪ್ಪ ಆನೆಗುಂದಿ ಮಾತನಾಡಿ, ಹೈ.ಕ ಭಾಗದಲ್ಲಿ ಈ ವರ್ಷ ಮಳೆ ಕೈ ಕೊಟ್ಟಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಈ ಭಾಗದ ಸಚಿವರು, ಶಾಸಕರು, ಸಂಸದರಿಗೆ ಈ ವಾಸ್ತವಿಕ ಸತ್ಯ ಅರಿಗೆ ಇದ್ದರೂ ಈ ಬಗ್ಗೆ ಸದನದಲ್ಲಿ ಇವರ್ಯಾರು ಚಕಾರ ಎತ್ತದಿರುವುದು ನಾಚಿಕೆಗೇಡು ಸಂಗತಿ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್‌.ಎಂ. ಸಾಗರ ಮಾತನಾಡಿ, ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಕೇರಳ ಮಾದರಿಯಲ್ಲಿ ಋಣಮುಕ್ತ ಕಾಯ್ದೆ ಜಾರಿಗೆ ತರಬೇಕು. ಭತ್ತಕ್ಕೆ 2,500 ರೂ.
ತೊಗರಿಗೆ 6500 ರೂ. , ಬೆಂಬಲ ಬೆಲೆ ಘೋಷಿಸಬೇಕು. ನಿವೇಶನ ರಹಿತರಿಗೆ ಮನೆ ನೀಡಬೇಕು. ಪಶುಪಾಲನೆ, ಹೈನುಗಾರಿಕೆಗೆ ಅಗತ್ಯ ನೆರವು ನೀಡಬೇಕು. ಬಗರ್‌ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ, ಭೂರಹಿತರಿಗೆ 5 ಎಕರೆ ಭೂಮಿ ನೀಡಬೇಕು. 

ಖಾತ್ರಿ ಯೋಜನೆ ಆರಂಭ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಆಗಸ್ಟ 9ರಂದು ಜೈಲ್‌ ಬರೋ ಚಳವಳಿ ಹಮ್ಮಿಕೊಳ್ಳಲಾಗಿದೆ. ಕಾರಣ ಪ್ರತಿ ತಾಲೂಕಿನಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚಳವಳಿಯಲ್ಲಿ
ಭಾಗವಹಿಸಬೇಕು ಎಂದು ಮನವಿ ಮಾಡಿದರು. ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಚಿನ್ನಾಕರ ಸ್ವಾಗತಿಸಿದರು. ತಾಲೂಕು ಅಧ್ಯಕ್ಷ ಧರ್ಮಣ ದೊರೆ ವಂದಿಸಿದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.