ರೈತರ ಸಮಗ್ರ ಅಭಿವೃದ್ಧಿಗೆ ಸಮ್ಮಿಶ್ರ ಸರ್ಕಾರ ಬದ್ಧ
Team Udayavani, Aug 19, 2018, 12:32 PM IST
ಸುರಪುರ: ರೈತರ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ರೈತರಿಗಾಗಿ ಬಜೆಟ್ನಲ್ಲಿ ಕೂಡ ಸಾಕಷ್ಟು ಅನುದಾನ ಮೀಸಲಿರಿಸಲಾಗಿದೆ ಎಂದು ಕೃಷಿ ಸಚಿವ ಎನ್.ಎಚ್. ಶಿವಶಂಕರೆಡ್ಡಿ ಹೇಳಿದರು. ತಾಲೂಕಿನ ಚಂದಲಾಪುರ ಗ್ರಾಮದಲ್ಲಿ ಕೃಷಿ ಹೊಂಡ ಪರಿಶೀಲಿಸಿ ನಂತರ ರೈತರೊಂದಿಗೆ ಸಂವಾದ ನಡೆಸಿದ ಅವರು, ರೈತರು ಕೃಷಿ ಇಲಾಖೆಯ ಕೃಷಿ ಭಾಗ್ಯ ಯೋಜನೆಡಿಯಲ್ಲಿ ಕೃಷಿ ಹೊಂಡವನ್ನು ನಿರ್ಮಿಸಿಕೊಂಡು, ಅದರಿಂದ ಜಮೀನುಗಳಿಗೆ ನೀರಾವರಿ ಮಾಡಿಕೊಳ್ಳುವುದರ ಮೂಲಕ ಬೆಳೆಗಳನ್ನು ಬೆಳೆಯಬೇಕು ಎಂದರು.
ರೈತರು ಪರ್ಯಾಯ ಬೆಳೆ ಬೆಳೆಯುವತ್ತ ಗಮನ ಹರಿಸಬೇಕು. ನಿರಂತರ ಆದಾಯ ಬರುವಂತೆ ನೂತನ ಕೃಷಿಯತ್ತ ಹೆಜ್ಜೆ ಇಡಬೇಕು ಎಂದು ಸಲಹೆ ನೀಡಿದ ಅವರು, ಚಂದಲಾಪುರ ಗ್ರಾಮದ ರೈತರೊಬ್ಬರು 9 ಎಕರೆ ಜಮೀನಿನಲ್ಲಿ 40 ಲಕ್ಷ ರೂ. ಆದಾಯ ಪಡೆದುಕೊಂಡಿರುವುದು ಸಂತೋಷದ ಸಂಗತಿ. ಜೇನು ಸಾಗಾಣಿಕೆ, ಹೈನುಗಾರಿಕೆ, ಬೆಲೆ ಬಾಳುವ ದೀರ್ಘಾವಧಿ ಗಿಡಗಳಾದ ಸಾಗವಾನಿ, ರಕ್ತ ಚಂದನ ಸೇರಿದಂತೆ ಇತರೆ ಎಲ್ಲ ತೋಟಗಾರಿಕೆ ಬೆಳೆಗಳನ್ನು ಬೆಳೆದಿರುವುದು ಮೆಚ್ಚುಗೆ ವಿಷಯವಾಗಿದೆ.
ಇವರೊಬ್ಬ ಮಾದರಿ ರೈತ ಎಂದ ಸಂತಸ ವ್ಯಕ್ತಪಡಿಸಿದ ಅವರು, ಇದೇ ರೀತಿ ಸುತ್ತಮುತ್ತಲಿನ ರೈತರು ಕೃಷಿ ಹೊಂಡ ನಿರ್ಮಿಸಿಕೊಂಡು ಉತ್ತಮ ಬೆಳೆಗಳನ್ನು ಬೆಳೆಯಬೇಕು ಎಂದು ಹೇಳಿದರು.
ಶಾಸಕ ಶರಣಬಸಪಗೌಡ ದರ್ಶನಾಪುರ, ಜಿಪಂ ವಿಪ ನಾಯಕ ಮರಿಲಿಂಗಪ್ಪ ನಾಯಕ ಕರ್ನಾಳ, ತಹಶೀಲ್ದಾರ್ ಸುರೇಶ ಅಂಕಲಗಿ, ಸಹಾಯಕ ಕೃಷಿ ನಿರ್ದೇಶಕ ಮಹಾದೇವಪ್ಪ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಮರಿಗೌಡ ಹುಲಕಲ್, ಮುಖಂಡರಾದ ದೊಡ್ಡ ದೇಸಾಯಿ ದೇವರಗೋನಾಲ, ವಿರುಪಾಕ್ಷಿ ಕರ್ನಾಳ, ದೇವರಾಜ್ ಮಕಾಶಿ, ಕೃಷಿ ಅಧಿಕಾರಿಗಳಾದ ಸುರೇಶ, ರಾಜೇಂದ್ರ, ಚನ್ನಪ್ಪಗೌಡ, ವೆಂಕಟೇಶ ದೇಸಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ