ಹೇಮರಡ್ಡಿ ಮಲ್ಲಮ್ಮ ಚರಿತ್ರೆ ಕೃತಿ ಲೋಕಾರ್ಪಣೆ


Team Udayavani, Aug 21, 2018, 3:40 PM IST

yad-1.jpg

ಯಾದಗಿರಿ: ಪ್ರಸಕ್ತ ದಿನಗಳಲ್ಲಿ ಯಾವುದೇ ಕ್ಷೇತ್ರದಲ್ಲಿ ತಾವು ಮಾಡಿದ ಸಾಧನೆಯೇ ಚರಿತ್ರೆ ಅಮರವಾಗಿ ಉಳಿಯಲು ಸಾಧ್ಯ ಎಂದು ಶ್ರೀಶೈಲಂನ 1008 ಜಗದ್ಗುರು ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದರು.

ಆಂಧ್ರ ಪ್ರದೇಶದ ಶ್ರೀಶೈಲಂನ ರಡ್ಡಿ ಚೌಲಿó ಕಲ್ಯಾಣ ಮಂಟಪದಲ್ಲಿ ಹೇಮರಡ್ಡಿ ಮಲ್ಲಮ್ಮ ಚಾರಿಟಬಲ್‌ ಚೌಲಿ ಟ್ರಸ್ಟ್‌ ಕರ್ನಾಟಕ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರಡ್ಡಿ ಸಮಾಜದ ಆಯೋಜಿಸಿದ್ದ ತೆಲುಗು ಅನುವಾದದ ಹೇಮರಡ್ಡಿ ಮಲ್ಲಮ್ಮ ಚರಿತ್ರೆ ಕೃತಿ ಲೋಕಾರ್ಪಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಬದುಕಿನಲ್ಲಿ ಸಾಧನೆ ಇದ್ದಲ್ಲಿ ಮಾತ್ರ ಸಮಾಜ, ಸಂಘಟನೆ ಬಲವಾಗುತ್ತದೆ.

ಈ ನಿಟ್ಟಿನಲ್ಲಿ ಮಲ್ಲಮ್ಮ ಬದುಕಿನಲ್ಲಿ ಲೌಕಿಕ ಜೀವನದ ಜೊತೆಗೆ ಆಧ್ಯಾತ್ಮಿಕ ಸಾಧನೆಯಿಂದ ಶ್ರೀಶೈಲ ಮಲ್ಲಿಕಾರ್ಜುನನ ಕೃಪೆಗೆ ಪಾತ್ರರಾಗಿ ಶ್ರೀಶೈಲಂನ ಅವಿಭಾಜ್ಯ ಅಂಗವಾಗಿ ಉಳಿದು ಎಲ್ಲರ ಮನಸ್ಸಿನಲ್ಲಿ ನೆಲೆಸಿದ್ದಾಳೆ. ಅವರ ದೇವಸ್ಥಾನವನ್ನು ಇಲ್ಲಿ ನಿರ್ಮಾಣ ಮಾಡುವ ಮೂಲಕ ಸಮಾಜದ ಮೌಲ್ಯ ಹೆಚ್ಚಿದೆ ಎಂದು ಹೇಳಿದರು. ಸಂಸದ ಜಿ.ಎಂ. ಸಿದ್ದೇಶ್ವರ್‌ ಕೃತಿ ಬಿಡುಗಡೆ
ಮಾಡಿ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ರಡ್ಡಿ ಸಮಾಜದ ಜನತೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಲ್ಲಿರುವ ಪರೋಪಕಾರ ಗುಣವನ್ನು ಕಂಡಿದ್ದೇನೆ.

ದಾವಣಗೇರೆಯಲ್ಲಿ ರಡ್ಡಿ ಸಮಾಜದ ವತಿಯಿಂದ ವಿದ್ಯಾರ್ಥಿಗಳಿಗಾಗಿ ನಿರ್ಮಾಣ ಮಾಡುತ್ತಿರುವ ವಸತಿ ನಿಲಯ ಕಟ್ಟಡಕ್ಕೆ 10 ಲಕ್ಷ ರೂ. ಅನುದಾನ ನೀಡುವುದಾಗಿ ಘೋಷಿಸಿದರು. ಶಾಸಕ ನಾಗನಗೌಡ ಕಂದಕೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿವಶರಣೆ ಮಲ್ಲಮ್ಮಳ ಜೀವನ ಸಂದೇಶ ಮನುಕುಲಕ್ಕೆ ಮಾದರಿಯಾಗಿವೆ. ಅವರ ಆದರ್ಶ ಗುಣಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಂಡು ಜೀವನ ನಡೆಸಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಮಲ್ಲಮ್ಮ ಜೀವನ ಚರಿತ್ರೆ ಪುಸ್ತಕವನ್ನು ತೆಲುಗು ಭಾಷೆಯಲ್ಲಿ ಪ್ರಕಟ ಮಾಡಿರುವುದರಿಂದ ತೆಲಂಗಾಣ, ಆಂಧ್ರ ಪ್ರದೇಶದಲ್ಲಿ ವಾಸಿಸುತ್ತಿರುವ ಮಲ್ಲಮಳ ಅನುಯಾಯಿಗಳಿಗೆ ಅವರ ಜೀವನ, ಸಾಧನೆ ತಿಳಿಯುತ್ತದೆ ಎಂದು ತಿಳಿಸಿದರು.

ಬೀಳಗಿ ಶಾಸಕ ಮುರಗೇಶ ನಿರಾಣಿ ಮತ್ತು ಟ್ರಸ್ಟ್‌ನ ಅಧ್ಯಕ್ಷ ವೈ.ಬಿ. ಆಲೂರ ಮಾತನಾಡಿದರು. ಹೆಡಗಿಮದ್ರಾದ ಶ್ರೀಶಾಂತ ಮಲ್ಲಿಕಾರ್ಜುನ ಪಂಡಿತಾರಾಧ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಪೂಜ್ಯ ಗುರುಪಾದ ಸ್ವಾಮಿ, ಮಾಜಿ ಶಾಸಕ ಗುರುನಾಥರಡ್ಡಿ ಕೊಡಂಗಲ್‌, ಡಾ| ಶೇಖರಗೌಡ ಪಾಟೀಲ, ಶರಣಪ್ಪಗೌಡ ಮಲ್ಹಾರ, ಡಾ| ಶಿವಲಿಂಗ ಮೂರ್ತಿ, ಶಾಂತರಡ್ಡಿ ವನಕೇರಿ, ಅಕ್ಕಮಹಾದೇವಿ ಪಾಟೀಲ, ಗೌರಮ್ಮ ರಡ್ಡಿ ವಿಜಯಪುರ, ವೀರಾರಡ್ಡಿ ಬಟಗೇರಾ, ಜೋಸುಲಾ ಸದಾನಂದ ಶಾಸ್ತ್ರಿ,
ಮೋಹನಮಠ ಕಣವಿ, ಡಾ| ಬಸನಗೌಡ ಪಾಟೀಲ, ಹೇಮಂತಕುಮಾರ ಅಜ್ಜಂಪುರ ವೇದಿಕೆ ಮೇಲಿದ್ದರು. ರಡ್ಡಿ ಸಮಾಜದ ಗಣ್ಯರು, ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.