ಹೇಮರಡ್ಡಿ ಮಲ್ಲಮ್ಮ ಚರಿತ್ರೆ ಕೃತಿ ಲೋಕಾರ್ಪಣೆ


Team Udayavani, Aug 21, 2018, 3:40 PM IST

yad-1.jpg

ಯಾದಗಿರಿ: ಪ್ರಸಕ್ತ ದಿನಗಳಲ್ಲಿ ಯಾವುದೇ ಕ್ಷೇತ್ರದಲ್ಲಿ ತಾವು ಮಾಡಿದ ಸಾಧನೆಯೇ ಚರಿತ್ರೆ ಅಮರವಾಗಿ ಉಳಿಯಲು ಸಾಧ್ಯ ಎಂದು ಶ್ರೀಶೈಲಂನ 1008 ಜಗದ್ಗುರು ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದರು.

ಆಂಧ್ರ ಪ್ರದೇಶದ ಶ್ರೀಶೈಲಂನ ರಡ್ಡಿ ಚೌಲಿó ಕಲ್ಯಾಣ ಮಂಟಪದಲ್ಲಿ ಹೇಮರಡ್ಡಿ ಮಲ್ಲಮ್ಮ ಚಾರಿಟಬಲ್‌ ಚೌಲಿ ಟ್ರಸ್ಟ್‌ ಕರ್ನಾಟಕ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರಡ್ಡಿ ಸಮಾಜದ ಆಯೋಜಿಸಿದ್ದ ತೆಲುಗು ಅನುವಾದದ ಹೇಮರಡ್ಡಿ ಮಲ್ಲಮ್ಮ ಚರಿತ್ರೆ ಕೃತಿ ಲೋಕಾರ್ಪಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಬದುಕಿನಲ್ಲಿ ಸಾಧನೆ ಇದ್ದಲ್ಲಿ ಮಾತ್ರ ಸಮಾಜ, ಸಂಘಟನೆ ಬಲವಾಗುತ್ತದೆ.

ಈ ನಿಟ್ಟಿನಲ್ಲಿ ಮಲ್ಲಮ್ಮ ಬದುಕಿನಲ್ಲಿ ಲೌಕಿಕ ಜೀವನದ ಜೊತೆಗೆ ಆಧ್ಯಾತ್ಮಿಕ ಸಾಧನೆಯಿಂದ ಶ್ರೀಶೈಲ ಮಲ್ಲಿಕಾರ್ಜುನನ ಕೃಪೆಗೆ ಪಾತ್ರರಾಗಿ ಶ್ರೀಶೈಲಂನ ಅವಿಭಾಜ್ಯ ಅಂಗವಾಗಿ ಉಳಿದು ಎಲ್ಲರ ಮನಸ್ಸಿನಲ್ಲಿ ನೆಲೆಸಿದ್ದಾಳೆ. ಅವರ ದೇವಸ್ಥಾನವನ್ನು ಇಲ್ಲಿ ನಿರ್ಮಾಣ ಮಾಡುವ ಮೂಲಕ ಸಮಾಜದ ಮೌಲ್ಯ ಹೆಚ್ಚಿದೆ ಎಂದು ಹೇಳಿದರು. ಸಂಸದ ಜಿ.ಎಂ. ಸಿದ್ದೇಶ್ವರ್‌ ಕೃತಿ ಬಿಡುಗಡೆ
ಮಾಡಿ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ರಡ್ಡಿ ಸಮಾಜದ ಜನತೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಲ್ಲಿರುವ ಪರೋಪಕಾರ ಗುಣವನ್ನು ಕಂಡಿದ್ದೇನೆ.

ದಾವಣಗೇರೆಯಲ್ಲಿ ರಡ್ಡಿ ಸಮಾಜದ ವತಿಯಿಂದ ವಿದ್ಯಾರ್ಥಿಗಳಿಗಾಗಿ ನಿರ್ಮಾಣ ಮಾಡುತ್ತಿರುವ ವಸತಿ ನಿಲಯ ಕಟ್ಟಡಕ್ಕೆ 10 ಲಕ್ಷ ರೂ. ಅನುದಾನ ನೀಡುವುದಾಗಿ ಘೋಷಿಸಿದರು. ಶಾಸಕ ನಾಗನಗೌಡ ಕಂದಕೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿವಶರಣೆ ಮಲ್ಲಮ್ಮಳ ಜೀವನ ಸಂದೇಶ ಮನುಕುಲಕ್ಕೆ ಮಾದರಿಯಾಗಿವೆ. ಅವರ ಆದರ್ಶ ಗುಣಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಂಡು ಜೀವನ ನಡೆಸಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಮಲ್ಲಮ್ಮ ಜೀವನ ಚರಿತ್ರೆ ಪುಸ್ತಕವನ್ನು ತೆಲುಗು ಭಾಷೆಯಲ್ಲಿ ಪ್ರಕಟ ಮಾಡಿರುವುದರಿಂದ ತೆಲಂಗಾಣ, ಆಂಧ್ರ ಪ್ರದೇಶದಲ್ಲಿ ವಾಸಿಸುತ್ತಿರುವ ಮಲ್ಲಮಳ ಅನುಯಾಯಿಗಳಿಗೆ ಅವರ ಜೀವನ, ಸಾಧನೆ ತಿಳಿಯುತ್ತದೆ ಎಂದು ತಿಳಿಸಿದರು.

ಬೀಳಗಿ ಶಾಸಕ ಮುರಗೇಶ ನಿರಾಣಿ ಮತ್ತು ಟ್ರಸ್ಟ್‌ನ ಅಧ್ಯಕ್ಷ ವೈ.ಬಿ. ಆಲೂರ ಮಾತನಾಡಿದರು. ಹೆಡಗಿಮದ್ರಾದ ಶ್ರೀಶಾಂತ ಮಲ್ಲಿಕಾರ್ಜುನ ಪಂಡಿತಾರಾಧ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಪೂಜ್ಯ ಗುರುಪಾದ ಸ್ವಾಮಿ, ಮಾಜಿ ಶಾಸಕ ಗುರುನಾಥರಡ್ಡಿ ಕೊಡಂಗಲ್‌, ಡಾ| ಶೇಖರಗೌಡ ಪಾಟೀಲ, ಶರಣಪ್ಪಗೌಡ ಮಲ್ಹಾರ, ಡಾ| ಶಿವಲಿಂಗ ಮೂರ್ತಿ, ಶಾಂತರಡ್ಡಿ ವನಕೇರಿ, ಅಕ್ಕಮಹಾದೇವಿ ಪಾಟೀಲ, ಗೌರಮ್ಮ ರಡ್ಡಿ ವಿಜಯಪುರ, ವೀರಾರಡ್ಡಿ ಬಟಗೇರಾ, ಜೋಸುಲಾ ಸದಾನಂದ ಶಾಸ್ತ್ರಿ,
ಮೋಹನಮಠ ಕಣವಿ, ಡಾ| ಬಸನಗೌಡ ಪಾಟೀಲ, ಹೇಮಂತಕುಮಾರ ಅಜ್ಜಂಪುರ ವೇದಿಕೆ ಮೇಲಿದ್ದರು. ರಡ್ಡಿ ಸಮಾಜದ ಗಣ್ಯರು, ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.