ಸಸಿ ನೆಟ್ಟು ಪೋಷಿಸುವುದು ಅಗತ್ಯ: ಕೂಡ್ಲೂರು
Team Udayavani, Aug 24, 2018, 4:39 PM IST
ಸೈದಾಪುರ: ಕೇವಲ ಸಸಿ ನೆಟ್ಟರೆ ಸಾಲದು, ಅವುಗಳನ್ನು ಪೋಷಿಸಿ ಬೆಳೆಸುವುದು ಪ್ರಮುಖವಾಗಿದೆ ಎಂದು ಸೀತಾರಾಮ ಕೂಡ್ಲೂರು ಹೇಳಿದರು. ಕೂಡ್ಲೂರು ಗ್ರಾಮದ ಅಂಕಲಗಿ ಅಡವಿ ಸಿದ್ಧಲಿಂಗೇಶ್ವರ ಮಠದಲ್ಲಿ ಸಸಿ ನೆಟ್ಟು ಮಾತನಾಡಿದ ಅವರು, ಪ್ರತಿಯೊಬ್ಬರು
ತಮ್ಮ ಸುತ್ತಲಿನ ಪ್ರದೇಶಗಳಲ್ಲಿ ಮರಗಳನ್ನು ಬೆಳೆಸುವುದರ ಮೂಲಕ ಪರಿಸರದಲ್ಲಿ ಸ್ವತ್ಛತೆ ಕಾಪಾಡಬೇಕು. ಶುಚಿ ಪರಿಸರವಿಲ್ಲದೆ ಭೂಮಿ ಮೇಲೆ ಬದುಕಲು ಸಾಧ್ಯವಿಲ್ಲ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ ಎಂದರು.
ಇಂದಿನ ಆಧುನೀಕರಣದ ತಾಂತ್ರಿಕ ವ್ಯವಸ್ಥೆಯಿಂದ ಪರಿಸರ ಕುಲುಷಿತವಾಗಿ ಸ್ವತ್ಛ ಗಾಳಿ, ಮಳೆಯಿಲ್ಲದೆ ಮನುಷ್ಯನು ಅನೇಕ ತೊಂದರೆ ಅನುಭವಿಸುತ್ತಿದ್ದಾನೆ. ಜಾಗತಿಕ ತಾಪಮಾನದಲ್ಲಿ ಏರು ಪೇರು ಉಂಟಾಗಿರುವ ಪ್ರಯುಕ್ತ ಅನೇಕ ಜನ-ಜಾನುವಾರು ಸಾಯುವಂತಹ ದುಸ್ಥಿತಿ ಎದುರಾಗಿದೆ. ಇದಕ್ಕೆಲ್ಲಾ ಮುಖ್ಯ ಕಾರಣ ಮನುಷ್ಯನೇ ಹೊರತು ಬೇರಾರು ಅಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.
ಗಿಡಮರಗಳಿಲ್ಲದೆ ಪರಿಸರ ಸೊರಗಿ ಹೋಗಿದೆ. ಜೀವ ಸಂಕುಲವಿಲ್ಲದೆ ಕಾಡುಗಳು ಸೌಂದರ್ಯವನ್ನು ಕಳೆದು ಕೊಂಡಿವೆ. ಇತ್ತೀಚಿನ ದಿನಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ ಆಗಿರುವುದರಿಂದ ಅವುಗಳಿಂದ ಬಿಡುಗಡೆ ಆಗುವ ವಿಷಾನಿಲ ವಾತಾವರಣವನ್ನು ಸೇರಿ ಗಾಳಿಯನ್ನು ಮಲಿನಗೊಳಿಸುತ್ತಿವೆ.
ಕೈಗಾರಿಕೆಗಳು ಬಿಡುಗಡೆ ಮಾಡುವ ರಾಸಾಯನಿಕ ತಾಜ್ಯ ಅನಿಲಗಳಿಂದ ಜಲಚರ ಪ್ರಾಣಿಗಳು ನಾಶ ಆಗುತ್ತಿವೆ. ಪರಿಸರದಲ್ಲಿ ಪ್ಲಾಸ್ಟಿಕ್ಗಳನ್ನು ಬಿಸಾಡುವುದು, ಗುಟ್ಕಾ ತಿಂದು ಅದರ ಚೀಟಿಗಳನ್ನು ಎಲ್ಲಿಂದರಲ್ಲಿ ಬಿಸಾಡುವುದು, ಕೃಷಿಯಲ್ಲಿ ಯಥೇಚ್ಚವಾಗಿ ರಾಸಾಯನಿಕ ವಸ್ತುಗಳನ್ನು ಬಳುಸುವುದು, ಇವುಗಳಿಂದ ಮಣ್ಣಿನ ಗುಣಮಟ್ಟ ಕುಗ್ಗಿ ಭೂಮಿ ಬರಡಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ಈ ವೇಳೆ ಶ್ರೀಮಠದ ಲಕ್ಷ್ಮಯ್ಯ ತಾತಾ, ಗೋಪಾಲಸ್ವಾಮಿ, ವೆಂಕಟರಾಯ ಗೋಪಾಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ