ಚುನಾವಣಾ ಕಾರ್ಯ ನಿಷ್ಪಕ್ಷಪಾತವಾಗಿ ನಿರ್ವಹಿಸಿ


Team Udayavani, Aug 25, 2018, 2:29 PM IST

yad-1.jpg

ಯಾದಗಿರಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಮತದಾನ ಪ್ರಕ್ರಿಯೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ನಿರ್ವಹಿಸಬೇಕು ಎಂದು ಸಹಾಯಕ ಆಯುಕ್ತ ಡಾ| ಬಿ.ಎಸ್‌. ಮಂಜುನಾಥಸ್ವಾಮಿ ಸೂಚಿಸಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿ, ಮತಗಟ್ಟೆ ಸಹಾಯಕ ಅಧ್ಯಕ್ಷಾಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಮತಗಟ್ಟೆ ಅಧಿಕಾರಿಗಳು ಚುನಾವಣಾ ತರಬೇತಿಯಲ್ಲಿ ಕ್ರಿಯಾಶೀಲರಾಗಿ ಭಾಗವಹಿಸಿ ಚುನಾವಣಾ ಆಯೋಗದ ಸೂಚನೆಗಳನ್ನು ಸರಿಯಾಗಿ ಅಥೈಸಿಕೊಳ್ಳಬೇಕು. ಮತದಾರರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಎಲ್ಲಾ ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳೊಡನೆ ಸಮನಾಗಿ ವ್ಯವಹರಿಸಬೇಕು ಎಂದು ಸಲಹೆ ನೀಡಿದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಹಣಮಂತ ಎಸ್‌. ಪೂಜಾರಿ ಕಾರ್ಯಾಗಾರದಲ್ಲಿ ತರಬೇತಿ ನೀಡಿ, ಚುನಾವಣಾ ಆಯೋಗದ ಸೂಚನೆಯ ಪ್ರಕಾರ ಮತಗಟ್ಟೆ ಒಳಗೆ ಮತ್ತು ಮತಗಟ್ಟೆಯ ಹೊರಗೆ 100 ಮೀಟರ್‌ ವ್ಯಾಪ್ತಿಯಲ್ಲಿ ಸೆಲ್ಯೂಲರ್‌ ಫೋನ್‌ಗಳು, ಕಾರ್ಡ್‌ಲೆಸ್‌ ಫೋನ್‌ಗಳು, ವೈರ್‌ಲೆಸ್‌ ಸೆಟ್‌ಗಳ ಬಳಕೆ ನಿಷೇಧಿ ಸಲಾಗಿದೆ. ಸದರಿ ಚುನಾವಣೆಯಲ್ಲಿ ಮತದಾರರ ಎಡಗೈ ಮಧ್ಯದ ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಚ್ಚಬೇಕು ಎಂದು ತಿಳಿಸಿದರು.

ಆಗಸ್ಟ್‌ 31ರಂದು ಬೆಳಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆವರೆಗೆ ಮತದಾನ ನಡೆಯಲಿದ್ದು, ಮತದಾನ ಆರಂಭದ ಪೂರ್ವದಲ್ಲಿ ಅಣುಕು ಮತದಾನ ನಡೆಸಿ, ವಿದ್ಯುನ್ಮಾನ ಮತಯಂತ್ರಗಳ ಕಾರ್ಯಕ್ಷಮತೆ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಮತದಾನ ಮುಕ್ತಾಯದ ಸಂದರ್ಭದಲ್ಲಿ ಸಂಜೆ 5:00 ಗಂಟೆಯೊಳಗೆ ಸರದಿಯಲ್ಲಿ ನಿಂತಿರುವ ಕೊನೆಯ ಮತದಾರನಿಗೆ 1ನೇ ಅಂಕಿಯ ಚೀಟಿಯಂತೆ ಎಲ್ಲರಿಗೂ ಚೀಟಿಗಳನ್ನು ವಿತರಿಸಬೇಕು. ಕೊನೆಯ 1ನೇ ಅಂಕಿಯ ಮತದಾರನ ಮತದಾನದ ಬಳಿಕ ಮತದಾನವನ್ನು
ಅಧಿಕೃತವಾಗಿ ಮುಕ್ತಾಯಗೊಳಿಸಬೇಕು ಎಂದು ತಿಳಿಸಿದರು. ಚುನಾವಣಾ ವೀಕ್ಷಕರಾದ ಜಿ.ಎಂ. ಪಾಟೀಲ, ಚುನಾವಣಾಧಿಕಾರಿಗಳು ಹಾಗೂ ಚುನಾವಣಾ ಶಾಖೆಯ ಸಿಬ್ಬಂದಿ ಉಪಸಿತರಿ¨

ಅನ್ಯರಿಗೆ ಮತಗಟ್ಟೆ ಪ್ರವೇಶವಿಲ್ಲ ಪೋಲಿಂಗ್‌ ಅಧಿಕಾರಿಗಳು, ಅಭ್ಯರ್ಥಿ/ ಚುನಾವಣಾ ಏಜೆಂಟ್‌/ಪ್ರತಿ ಅಭ್ಯರ್ಥಿಗೆ ಒಬ್ಬ ಏಜೆಂಟ್‌, ಚುನಾವಣಾ ಆಯೋಗ ಅನುಮತಿ ನೀಡಿದ ವ್ಯಕ್ತಿಗಳು, ಕರ್ತವ್ಯನಿರತ ಸರಕಾರಿ ನೌಕರರು, ಸಹಾಯವಿಲ್ಲದೆ ನಡೆದಾಡಲಾಗದ/ಮತಚಲಾಯಿಸಲಾಗದ ನೇತ್ರಹೀನ/ಅಶಕ್ತ ಮತದಾರರ ಜೊತೆಗೆ ಬಂದ ವ್ಯಕ್ತಿ ಮಾತ್ರ ಮತಗಟ್ಟೆಯನ್ನು ಪ್ರವೇಶಿಸಬಹುದು. ಇವರನ್ನು ಹೊರತು ಪಡಿಸಿ ಅನ್ಯರ ಮತಗಟ್ಟೆ ಪ್ರವೇಶವಿಲ್ಲ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.