ಆ್ಯಸಿಡ್‌ ದಾಳಿ ಪ್ರಕರಣ ಆರೋಪಿಗಳಿಗೆ ಕಠಿಣ ಶಿಕ್ಷೆ


Team Udayavani, Aug 25, 2018, 2:40 PM IST

yad-2.jpg

ಯಾದಗಿರಿ: ಇತ್ತೀಚಿನ ದಿನಗಳಲ್ಲಿ ಅಪರಾದ ವಿಭಾಗದ ವರದಿಗಳ ಪ್ರಕಾರ ಆ್ಯಸಿಡ್‌ ದಾಳಿ ಪ್ರಕರಣ ಹೆಚ್ಚಾಗುತ್ತಿವೆ. ಈ ಅಪರಾಧ ಎಸಗುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಭಾರತೀಯ ದಂಡ ಸಂಹಿತೆಯಲ್ಲಿ ಕಲಂ 326ಎ ಹಾಗೂ 326ಬಿ ಯನ್ನು ಸೇರಿಸಲಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ಗೌರವಾನ್ವಿತ ನಾಮದೇವ ಕೆ. ಸಾಲಮಂಟಪಿ ಹೇಳಿದರು.

ನಗರದ ಪ್ರೇರಣಾ ಪಿಯು ಕಾಲೇಜಿನಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸೌಹಾರ್ದ ಪೌಂಡೇಶನ್‌ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಯೋಜನೆ-2016 ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
 
ಭಾರತ ಸಂವಿಧಾನದ ಅನುಚ್ಛೇದ 21ರನ್ವಯ ಎಲ್ಲ ಪ್ರಜೆಗಳಿಗೂ ಜೀವಿಸುವ ಹಕ್ಕು ಮತ್ತು ಸ್ವಾಭಿಮಾನದಿಂದ ಬಾಳುವ ಹಕ್ಕನ್ನು ದಯ ಪಾಲಿಸಿದೆ. ಆ್ಯಸಿಡ್‌ ದಾಳಿಗೆ ಒಳಗಾದ ಸಂತ್ರಸ್ತರಿಗೂ ಸಹ ಈ ಅನುಚ್ಛೇದ ಅನ್ವಯಿಸುತ್ತದೆ ಎಂದು ತಿಳಿಸಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ
ಅರ್ಜುನ ಬನಸೋಡೆ ಮಾತನಾಡಿ, ಆ್ಯಸಿಡ್‌ ದಾಳಿ ಒಂದು ಕೆಟ್ಟ ಹಿಂಸಾಚಾರವಾಗಿದ್ದು, ಹೆಚ್ಚಾಗಿ ಮಹಿಳೆಯರ ಮೇಲೆ ಆಗುತ್ತಿವೆ. ಇದು ಮುಖ್ಯವಾಗಿ ಒತ್ತಾಯದ ಮದುವೆ, ವರದಕ್ಷಿಣೆ ಅಥವಾ ಲೈಂಗಿಕ ಕಿರುಕುಳ ಹಾಗೂ ಆಸ್ತಿಗಳ ವಿಚಾರಗಳಲ್ಲಿನ ಘರ್ಷಣೆಗಳಲ್ಲಿ ಆ್ಯಸಿಡ್‌ ದಾಳಿಯಂತಹ ಕೃತ್ಯಗಳು ನಡೆಯುತ್ತಿವೆ ಎಂದು ಹೇಳಿದರು.

ಆ್ಯಸಿಡ್‌ ದಾಳಿಗೆ ಒಳಗಾದ ಸಂತ್ರಸ್ತರ ನೆರವಿಗಾಗಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾ ಧಿಕಾರದ ಆ್ಯಸಿಡ್‌ ದಾಳಿಗೆ ಒಳಗಾದ ಸಂತ್ರಸ್ಥರಿಗೆ ಕಾನೂನಿನ ನೆರವು ಯೋಜನೆ-2016 ಜಾರಿಗೆ ಬಂದಿರುತ್ತದೆ. ಈ ಯೋಜನೆ ಮುಖ್ಯ ಉದ್ದೇಶವು ಆ್ಯಸಿಡ್‌ ದಾಳಿಗೆ ಬಲಿಯಾದ ಸಂತ್ರಸ್ತರಿಗೆ ಕಾನೂನಿನ ನೆರವು, ವೈದ್ಯಕೀಯ ಸೌಲಭ್ಯ, ಪುನರ್ವಸತಿ ಸೇವೆ ಹಾಗೂ ಸಂತ್ರಸ್ತರ ಪರಿಹಾರ ನಿಧಿ ಯೋಜನೆ ಅಡಿಯಲ್ಲಿ 3 ಲಕ್ಷ ರೂ. ವರೆಗಿನ ಪರಿಹಾರ ಧನ ಮಂಜೂರು ಮಾಡುವುದಾಗಿದೆ ಎಂದು ಮಾಹಿತಿ ನೀಡಿದ ಅವರು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸುವಂತೆ ತಿಳಿಸಿದರು.

ಸೌಹಾರ್ದ ಫೌಂಡೇಶನ್‌ ಸದಸ್ಯ ಸುದರ್ಶನರೆಡ್ಡಿ ಪಾಟೀಲ ಅಧ್ಯಕ್ಷತೆ ವಹಿಸಿದರು. ವಕೀಲರಾದ ಆರ್‌.ಎಸ್‌.ಪಾಟೀಲ ಉಪನ್ಯಾಸ ನೀಡಿದರು. ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಸುರೇಶ ಬಾಬು ಕಲಾಲ್‌, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಸಿ.ಎಸ್‌.ಮಾಲಿಪಾಟೀಲ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಶಾಂತಪ್ಪ ಎಸ್‌. ಖಾನಹಳ್ಳಿ ಹಾಗೂ ಕಾಲೇಜಿನ ಪ್ರಾಂಶುಪಾಲ ಚಂದ್ರಪ್ಪ ಬಿ.ಬಿ. ಇತರರು ಇದ್ದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.