ಬಣ್ಣದ ಮಾತುಗಳಿಗೆ ಮೋಸ ಹೋಗಬೇಡಿ


Team Udayavani, Aug 26, 2018, 4:15 PM IST

yad-1.jpg

ಯಾದಗಿರಿ: ಚುನಾವಣೆ ಸಂದರ್ಭದಲ್ಲಿ ಬಣ್ಣ ಬಣ್ಣದ ಮಾತುಗಳನ್ನಾಡಿ ಸಮಾಜದ ಜಾತಿಗಳಲಿ ಒಡಕು ಹುಟ್ಟಿಸುವವರನ್ನು ನಂಬಿ ಮೋಸ ಹೋಗಬೇಡಿ ಎಂದು ಕಾಂಗ್ರೆಸ್‌ ಪಕ್ಷದ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ಥಳೀಯ ಸಂಸ್ಥೆ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಈ ಚುನಾವಣೆ ಯಾದಗಿರಿ ಜನರಿಗೆ ಪ್ರಮುಖವಾಗಿದೆ. ಈ ಭಾಗದಲ್ಲಿ ನಮ್ಮ ಪಕ್ಷ ಸಾಕಷ್ಟು ಕೆಲಸ ಮಾಡಿದ್ದರೂ ಬೇರೆಯವರ ಮಾತು ಕೇಳಿ ದುಡ್ಡು, ಮೋದಿ ಹೆಸರು ಹಾಗೂ ಯಡಿಯೂರಪ್ಪ ಅಳಿಯ ಶಾಸಕನಾಗಬೇಕು ಎಂದು ಜನರು ರಾಜ್ಯದಲ್ಲಿ, ಯಾದಗಿರಿಯಲ್ಲಿ ಮಾಲಕರಡ್ಡಿ ಹಾಗೂ ಗುರುಮಠಕಲ್‌ ಬಾಬುರಾವ ಚಿಂಚನಸೂರಗೆ ಮೋಸ ಮಾಡಿದರು ಎಂದು ವಿಧಾನಸಭೆ ಚುನಾವಣೆಯಲ್ಲಾದ ಸೋಲನ್ನು ನೆನೆಸಿದರು.

ಬಸವಣ್ಣರ ತತ್ವದಂತೆ ನುಡುದಂತೆ ನಡೆದರೆ ಒಳ್ಳೆಯದು. ದೇಶದಲ್ಲಿ ಅವಾಂತರ, ಮೋಸ ಹಾಗೂ ಸಮಾಜಗಳಲ್ಲಿ ಒಡಕು ಹುಟ್ಟಿಸುವುದನ್ನು ದೇಶ ಮತ್ತು ರಾಜ್ಯದ ಜನರು ಸಹಿಸಲ್ಲ ತಿರುಗಿಬೀಳುತ್ತಾರೆ ಎಂದು ಹೇಳಿದರು. ಸಂವಿಧಾನವನ್ನು ಹೊಳಗುವ ಬಿಜೆಪಿ ಸಂವಿಧಾನದ ತತ್ವಗಳಡಿ ಏಕೆ ನಡೆಯಲ್ಲ? ಜನರಿಗೆ ಮೋಸ ಮಾಡುವುದೇ ಮನ್‌ ಕೀ ಬಾತ್‌ ಎಂದು ಟಾಂಗ್‌ ನೀಡಿದರು.

ವಿದೇಶದಲ್ಲಿನ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆ 15 ಲಕ್ಷ ರೂ. ಹಾಕುತ್ತೇವೆ ಎಂದು ಹೇಳಿದ್ದರು. ಅದು ಎಲ್ಲಿದೆ? ದೇಶದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿದ್ದರು. ಈವರೆಗೆ ಒಂದೂವರೆ ಲಕ್ಷ ಉದ್ಯೋಗ ನೀಡಿಲ್ಲ. ಬದಲಿಗೆ ನೀರವ್‌, ಮಲ್ಯ, ಲಲಿತ್‌ಗೆ ಬ್ಯಾಂಕ್‌ಗಳಲ್ಲಿನ 1.68 ಸಾವಿರ ಕೋಟಿ ರೂ. ಲೂಟಿ ಮಾಡಲು ಮೋದಿ ಸರ್ಕಾರ ನೌಕರಿ ನೀಡಿದೆ ಎಂದು ಟಿಕೀಸಿದರು. ಮೋದಿ ಮತ್ತು ಶಾ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದ ಅವರು, ನಮ್ಮ ಹೋರಾಟ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸುವುದಕ್ಕೆ ಹೊರತು ವೈಯಕ್ತಿಕವಲ್ಲ ಎಂದು ಹೇಳಿದರು.

ರಾಯಚೂರು-ಯಾದಗಿರಿ ಸಂಸದ ಬಿ.ವಿ. ನಾಯಕ ಮಾತನಾಡಿ, ರಾಜ್ಯದಲ್ಲಿ ಮತೀಯ ಕೋಮುವಾದಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂದು ಜೆಡಿಎಸ್‌ ಜತೆ ಸೇರಿ ಸರ್ಕಾರ ರಚಿಸಿದೆವು. ಕಳೆದ ಚುನಾವಣೆಯಲ್ಲಿ ಮರಳು ಮಾಡಿ ಬಣ್ಣದ ಮಾತಿನಿಂದ ಮೋದಿ ಅಧಿಕಾರ ಪಡೆದು ದೇಶದಲ್ಲಿ ಪ್ರಜಾತಂತ್ರ ವ್ಯವಸ್ಥೆ ಬುಡಮೇಲು ಮಾಡಿದ್ದಾರೆ ಎಂದು ಟೀಕಿಸಿದರು.

ಹಿಂದುಳಿದ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್‌ ಪಕ್ಷ ಕಲಂ 371(ಜೆ) ಜಾರಿಗೊಳಿಸಿದೆ. ಇನ್ನಷ್ಟು ಪಕ್ಷವನ್ನು ಬಲ ಪಡಿಸಿ ಬಡವರು, ದೀನ ದಲಿತರ ಸೇವೆ ಮಾಡಲು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿಸಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಚನ್ನಾರೆಡ್ಡಿ ತುನ್ನೂರ, ಮರಿಗೌಡ ಹುಲಕಲ್‌, ಭೀಮಣ್ಣಗೌಡ ಸಂಕನೂರ, ಜಗದೇವ ಗುತ್ತೇದಾರ, ಮಂಜುಳಾ ಗೂಳಿ, ರಾಘವೇಂದ್ರ ಮಾನಸಗಲ್‌, ಸಿದ್ದಲಿಂಗರೆಡ್ಡಿ ಉಳ್ಳೇಸೂಗೂರ, ಸುದರ್ಶನ ನಾಯಕ, ಸುರೇಶ ಜೈನ್‌, ವಿಶ್ವನಾಥ ನೀಲಹಳ್ಳಿ, ಮರೆಪ್ಪ ಬಿಳಾರ ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.