ಬಣ್ಣದ ಮಾತುಗಳಿಗೆ ಮೋಸ ಹೋಗಬೇಡಿ


Team Udayavani, Aug 26, 2018, 4:15 PM IST

yad-1.jpg

ಯಾದಗಿರಿ: ಚುನಾವಣೆ ಸಂದರ್ಭದಲ್ಲಿ ಬಣ್ಣ ಬಣ್ಣದ ಮಾತುಗಳನ್ನಾಡಿ ಸಮಾಜದ ಜಾತಿಗಳಲಿ ಒಡಕು ಹುಟ್ಟಿಸುವವರನ್ನು ನಂಬಿ ಮೋಸ ಹೋಗಬೇಡಿ ಎಂದು ಕಾಂಗ್ರೆಸ್‌ ಪಕ್ಷದ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ಥಳೀಯ ಸಂಸ್ಥೆ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಈ ಚುನಾವಣೆ ಯಾದಗಿರಿ ಜನರಿಗೆ ಪ್ರಮುಖವಾಗಿದೆ. ಈ ಭಾಗದಲ್ಲಿ ನಮ್ಮ ಪಕ್ಷ ಸಾಕಷ್ಟು ಕೆಲಸ ಮಾಡಿದ್ದರೂ ಬೇರೆಯವರ ಮಾತು ಕೇಳಿ ದುಡ್ಡು, ಮೋದಿ ಹೆಸರು ಹಾಗೂ ಯಡಿಯೂರಪ್ಪ ಅಳಿಯ ಶಾಸಕನಾಗಬೇಕು ಎಂದು ಜನರು ರಾಜ್ಯದಲ್ಲಿ, ಯಾದಗಿರಿಯಲ್ಲಿ ಮಾಲಕರಡ್ಡಿ ಹಾಗೂ ಗುರುಮಠಕಲ್‌ ಬಾಬುರಾವ ಚಿಂಚನಸೂರಗೆ ಮೋಸ ಮಾಡಿದರು ಎಂದು ವಿಧಾನಸಭೆ ಚುನಾವಣೆಯಲ್ಲಾದ ಸೋಲನ್ನು ನೆನೆಸಿದರು.

ಬಸವಣ್ಣರ ತತ್ವದಂತೆ ನುಡುದಂತೆ ನಡೆದರೆ ಒಳ್ಳೆಯದು. ದೇಶದಲ್ಲಿ ಅವಾಂತರ, ಮೋಸ ಹಾಗೂ ಸಮಾಜಗಳಲ್ಲಿ ಒಡಕು ಹುಟ್ಟಿಸುವುದನ್ನು ದೇಶ ಮತ್ತು ರಾಜ್ಯದ ಜನರು ಸಹಿಸಲ್ಲ ತಿರುಗಿಬೀಳುತ್ತಾರೆ ಎಂದು ಹೇಳಿದರು. ಸಂವಿಧಾನವನ್ನು ಹೊಳಗುವ ಬಿಜೆಪಿ ಸಂವಿಧಾನದ ತತ್ವಗಳಡಿ ಏಕೆ ನಡೆಯಲ್ಲ? ಜನರಿಗೆ ಮೋಸ ಮಾಡುವುದೇ ಮನ್‌ ಕೀ ಬಾತ್‌ ಎಂದು ಟಾಂಗ್‌ ನೀಡಿದರು.

ವಿದೇಶದಲ್ಲಿನ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆ 15 ಲಕ್ಷ ರೂ. ಹಾಕುತ್ತೇವೆ ಎಂದು ಹೇಳಿದ್ದರು. ಅದು ಎಲ್ಲಿದೆ? ದೇಶದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿದ್ದರು. ಈವರೆಗೆ ಒಂದೂವರೆ ಲಕ್ಷ ಉದ್ಯೋಗ ನೀಡಿಲ್ಲ. ಬದಲಿಗೆ ನೀರವ್‌, ಮಲ್ಯ, ಲಲಿತ್‌ಗೆ ಬ್ಯಾಂಕ್‌ಗಳಲ್ಲಿನ 1.68 ಸಾವಿರ ಕೋಟಿ ರೂ. ಲೂಟಿ ಮಾಡಲು ಮೋದಿ ಸರ್ಕಾರ ನೌಕರಿ ನೀಡಿದೆ ಎಂದು ಟಿಕೀಸಿದರು. ಮೋದಿ ಮತ್ತು ಶಾ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದ ಅವರು, ನಮ್ಮ ಹೋರಾಟ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸುವುದಕ್ಕೆ ಹೊರತು ವೈಯಕ್ತಿಕವಲ್ಲ ಎಂದು ಹೇಳಿದರು.

ರಾಯಚೂರು-ಯಾದಗಿರಿ ಸಂಸದ ಬಿ.ವಿ. ನಾಯಕ ಮಾತನಾಡಿ, ರಾಜ್ಯದಲ್ಲಿ ಮತೀಯ ಕೋಮುವಾದಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂದು ಜೆಡಿಎಸ್‌ ಜತೆ ಸೇರಿ ಸರ್ಕಾರ ರಚಿಸಿದೆವು. ಕಳೆದ ಚುನಾವಣೆಯಲ್ಲಿ ಮರಳು ಮಾಡಿ ಬಣ್ಣದ ಮಾತಿನಿಂದ ಮೋದಿ ಅಧಿಕಾರ ಪಡೆದು ದೇಶದಲ್ಲಿ ಪ್ರಜಾತಂತ್ರ ವ್ಯವಸ್ಥೆ ಬುಡಮೇಲು ಮಾಡಿದ್ದಾರೆ ಎಂದು ಟೀಕಿಸಿದರು.

ಹಿಂದುಳಿದ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್‌ ಪಕ್ಷ ಕಲಂ 371(ಜೆ) ಜಾರಿಗೊಳಿಸಿದೆ. ಇನ್ನಷ್ಟು ಪಕ್ಷವನ್ನು ಬಲ ಪಡಿಸಿ ಬಡವರು, ದೀನ ದಲಿತರ ಸೇವೆ ಮಾಡಲು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿಸಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಚನ್ನಾರೆಡ್ಡಿ ತುನ್ನೂರ, ಮರಿಗೌಡ ಹುಲಕಲ್‌, ಭೀಮಣ್ಣಗೌಡ ಸಂಕನೂರ, ಜಗದೇವ ಗುತ್ತೇದಾರ, ಮಂಜುಳಾ ಗೂಳಿ, ರಾಘವೇಂದ್ರ ಮಾನಸಗಲ್‌, ಸಿದ್ದಲಿಂಗರೆಡ್ಡಿ ಉಳ್ಳೇಸೂಗೂರ, ಸುದರ್ಶನ ನಾಯಕ, ಸುರೇಶ ಜೈನ್‌, ವಿಶ್ವನಾಥ ನೀಲಹಳ್ಳಿ, ಮರೆಪ್ಪ ಬಿಳಾರ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.