ಸಂಘಟನೆ ವೇಳೆ ಸಮಸ್ಯೆ ಸಾಮಾನ್ಯ


Team Udayavani, Aug 26, 2018, 4:30 PM IST

yad-2.jpg

ಶಹಾಪುರ: ಯಾವುದೇ ಸಮಾಜ, ಸಂಘ ಸಂಘಟನೆ ಮಾಡುವಾಗ ಹಲವಾರು ಸಮಸ್ಯೆಗಳು ಉದ್ಭವವಾಗುವುದು ಸಹಜ. ಅವುಗಳನ್ನೆಲ್ಲ ಮೆಟ್ಟಿ ನಿಲ್ಲುವ ಮೂಲಕ ಸಮಾಜದ ಅಭಿವೃದ್ಧಿಗೆ ಆತ್ಮಸಾಕ್ಷಿಯೊಂದಿಗೆ ಉತ್ತಮ ಕಾರ್ಯ ಕೈಗೊಂಡಾಗ ಮಾತ್ರ ಸಮಾಜದ ಸಂಘಟನೆ ಸಾಧ್ಯ ಎಂದು
ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು. ನಗರದ ಜೀವೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕು ಸ್ವಕುಳ ಸಾಳಿ ಸಮಾಜ ಜೀವೇಶ್ವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಉತ್ತಮ ಸಂಘಟನೆ ಮಾಡುವಾಗ ಕೆಲವರು ಸಮಸ್ಯೆ ಸೃಷ್ಟಿಸುತ್ತಾರೆ. ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ಸಂಘಟನೆ ಮುಂದುವರಿಸಬೇಕು. ಸಮಾಜದ ಅಭಿವೃದ್ಧಿಗೆ ಯಾರಾದರೂ ಶ್ರಮವಹಿಸಬಹುದು. ಅದು ಒಳ್ಳೆಯ ಕಾರ್ಯಕ್ರಮವಾಗಿದ್ದರೆ ತಾನಾಗಿಯೇ ಎಲ್ಲರೂ ಸಹಕರಿಸಲಿದ್ದಾರೆ.

ತಾಲೂಕಿನಲ್ಲಿ ಸ್ವಕುಳ ಸಾಳಿ ಸಮಾಜ ಕಳೆದ 20-25 ವರ್ಷಗಳಿಂದಲೂ ಸಂಘಟಿತರಾಗಿ ಎಲ್ಲ ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಅಲ್ಲದೆ ಉಳಿದ ಸಮಾಜಗಳಿಗಿಂತ ಉತ್ತಮ ಸಂಘಟನೆ ಹೊಂದಿದ್ದು, ಸಮಾಜದ ಮಕ್ಕಳ ಪ್ರತಿಭೆ ಗುರುತಿಸುವುದು ಸೇರಿದಂತೆ
ಶೆ„ಕ್ಷಣಿಕ ಪ್ರತಿಭೆಗಳಿಗೆ ಮತ್ತು ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳು ನಡೆಸುವ ಮೂಲಕ ಸಮಾಜದ ಯುವ ಸಮುದಾಯಕ್ಕೆ ಸ್ಫೂರ್ತಿ ತುಂಬುವ ಕೆಲಸ ಮಾಡುತ್ತಿರುವುದು ಸಮಾಜದ ಬೆಳವಣಿಗೆಗೆ ಕಾರಣವಾಗಲಿದೆ. ಮನುಷ್ಯನಿಗೆ ಸಮಾಜ ಏನು ಮಾಡಿದೆ ಎಂಬುದಕ್ಕಿಂತ ಸಮಾಜಕ್ಕೆ ತಾನೂ ಯಾವ ಕೊಡುಗೆ ನೀಡಿದ್ದಾನೆ ಎಂಬುದನ್ನು ಅರಿಯಬೇಕಿದೆ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಫಕೀರೇಶ್ವರ ಮಠದ ಗುರುಪಾದ ಸ್ವಾಮೀಜಿ ಮಾತನಾಡಿ, ಸಮಾಜವನ್ನು ಮುನ್ನಡೆಸುವಾಗ ಒಳಿತು ಮಾಡಿದರೂ ಎರಡು ಮಾತು ಬರುವುದು ಸಹಜ. ಅಂತಹ ಟೀಕೆಗಳಿಗೆ ಮಹತ್ವ ನೀಡಬೇಕಿಲ್ಲ. ಅಂದವರು ನಮ್ಮವರೇ ಎಂದು ಎಲ್ಲವನ್ನು ಮರೆತು ತಾವು ಹಾಕಿಕೊಂಡಿರುವ ಕಾರ್ಯಕ್ರಮ ಉತ್ತಮವಾಗಿದ್ದಲ್ಲಿ ಎಡಬಿಡದೆ ಅದನ್ನು ಮುಗಿಸುವ ಧಾವಂತ ಹೊಂದಿರಬೇಕು.

ಉತ್ತಮ ಕಾರ್ಯ ಪೂರ್ಣಗೊಂಡಾಗ ಜನರಿಗೆ ಅದರ ಬಗ್ಗೆ ತಿಳಿಯಲಿದೆ. ಆಗ ಕಾರ್ಯಕ್ರಮದ ಯಶಸ್ಸಿಗೆ ಪೂರಕ ವಾತಾವರಣ ನಿರ್ಮಾಣವಾಗಲಿದೆ. ಸಾಕಷ್ಟು ಸಮಾಜಗಳು ಸಂಘಟನೆ ಮಾಡುತ್ತಿವೆ. ಆದರೆ ನಿರಂತರವಾಗಿ ಸಂಘಟನೆ ಮಾಡಲು ಆಗುತ್ತಿಲ್ಲ. ನಿಮ್ಮದು ಅವೆಲ್ಲಕ್ಕಿಂತ ಮಿಗಿಲಾಗಿದ್ದು,
ಉತ್ತಮ ಸಂಘಟನೆಯೊಂದಿಗೆ ಸಮಾಜದ ಬೆಳವಣಿಗೆ ಸದಾ ಸ್ಪಂದಿಸುವ ಸಮಾಜ ನಿಮ್ಮದಾಗಿದೆ ಎಂದು ಹೇಳಿದರು.
ಸಮಾಜದ ಅಧ್ಯಕ್ಷ ಸಿದ್ಧಣ್ಣ ಮಾಸ್ತರ ಶಿರವಾಳ ಅಧ್ಯಕ್ಷತೆ ವಹಿಸಿದ್ದರು.

ಮುಖಂಡ ಹಣಮಂತ್ರಾಯ ಹಳಿಸಗರ, ಜನಾರ್ಧನ ಮಾನು, ಪತ್ರಕರ್ತ ಮಲ್ಲಿಕಾರ್ಜುನ ಮುದನೂರ, ಯುವ ಮುಖಂಡ ರಾಜಕುಮಾರ ಚಿಲ್ಲಾಳ, ಮುಖಂಡರಾದ ಮಲ್ಲಯ್ಯ ಪಿರಂಗಿ, ರಾಮು ಮಿರ್ಜಿ, ತಿಪ್ಪಣ್ಣ, ಸತೀಶ ಮಿರ್ಜಿ, ನಂದು ಚಿಲ್ಲಾಳ, ಸಂತೋಷ ಮಾನು, ಮಲ್ಲಿಕಾರ್ಜುನ, ಅಶೋಕ ಇದ್ದರು. ಸುರೇಖಾ ಏಕಬೋಟೆ ಮತ್ತು ಲಕ್ಷ್ಮೀಪಿರಂಗಿ  ನಿರೂಪಿಸಿದರು. ಜಯಂತಿ ಅಂಗವಾಗಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಶಸ್ತಿ ಪದಕ, ಕಪ್‌ ವಿತರಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.