ಸಂಘಟನೆ ವೇಳೆ ಸಮಸ್ಯೆ ಸಾಮಾನ್ಯ


Team Udayavani, Aug 26, 2018, 4:30 PM IST

yad-2.jpg

ಶಹಾಪುರ: ಯಾವುದೇ ಸಮಾಜ, ಸಂಘ ಸಂಘಟನೆ ಮಾಡುವಾಗ ಹಲವಾರು ಸಮಸ್ಯೆಗಳು ಉದ್ಭವವಾಗುವುದು ಸಹಜ. ಅವುಗಳನ್ನೆಲ್ಲ ಮೆಟ್ಟಿ ನಿಲ್ಲುವ ಮೂಲಕ ಸಮಾಜದ ಅಭಿವೃದ್ಧಿಗೆ ಆತ್ಮಸಾಕ್ಷಿಯೊಂದಿಗೆ ಉತ್ತಮ ಕಾರ್ಯ ಕೈಗೊಂಡಾಗ ಮಾತ್ರ ಸಮಾಜದ ಸಂಘಟನೆ ಸಾಧ್ಯ ಎಂದು
ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು. ನಗರದ ಜೀವೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕು ಸ್ವಕುಳ ಸಾಳಿ ಸಮಾಜ ಜೀವೇಶ್ವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಉತ್ತಮ ಸಂಘಟನೆ ಮಾಡುವಾಗ ಕೆಲವರು ಸಮಸ್ಯೆ ಸೃಷ್ಟಿಸುತ್ತಾರೆ. ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ಸಂಘಟನೆ ಮುಂದುವರಿಸಬೇಕು. ಸಮಾಜದ ಅಭಿವೃದ್ಧಿಗೆ ಯಾರಾದರೂ ಶ್ರಮವಹಿಸಬಹುದು. ಅದು ಒಳ್ಳೆಯ ಕಾರ್ಯಕ್ರಮವಾಗಿದ್ದರೆ ತಾನಾಗಿಯೇ ಎಲ್ಲರೂ ಸಹಕರಿಸಲಿದ್ದಾರೆ.

ತಾಲೂಕಿನಲ್ಲಿ ಸ್ವಕುಳ ಸಾಳಿ ಸಮಾಜ ಕಳೆದ 20-25 ವರ್ಷಗಳಿಂದಲೂ ಸಂಘಟಿತರಾಗಿ ಎಲ್ಲ ಸಮಾಜದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಅಲ್ಲದೆ ಉಳಿದ ಸಮಾಜಗಳಿಗಿಂತ ಉತ್ತಮ ಸಂಘಟನೆ ಹೊಂದಿದ್ದು, ಸಮಾಜದ ಮಕ್ಕಳ ಪ್ರತಿಭೆ ಗುರುತಿಸುವುದು ಸೇರಿದಂತೆ
ಶೆ„ಕ್ಷಣಿಕ ಪ್ರತಿಭೆಗಳಿಗೆ ಮತ್ತು ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳು ನಡೆಸುವ ಮೂಲಕ ಸಮಾಜದ ಯುವ ಸಮುದಾಯಕ್ಕೆ ಸ್ಫೂರ್ತಿ ತುಂಬುವ ಕೆಲಸ ಮಾಡುತ್ತಿರುವುದು ಸಮಾಜದ ಬೆಳವಣಿಗೆಗೆ ಕಾರಣವಾಗಲಿದೆ. ಮನುಷ್ಯನಿಗೆ ಸಮಾಜ ಏನು ಮಾಡಿದೆ ಎಂಬುದಕ್ಕಿಂತ ಸಮಾಜಕ್ಕೆ ತಾನೂ ಯಾವ ಕೊಡುಗೆ ನೀಡಿದ್ದಾನೆ ಎಂಬುದನ್ನು ಅರಿಯಬೇಕಿದೆ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಫಕೀರೇಶ್ವರ ಮಠದ ಗುರುಪಾದ ಸ್ವಾಮೀಜಿ ಮಾತನಾಡಿ, ಸಮಾಜವನ್ನು ಮುನ್ನಡೆಸುವಾಗ ಒಳಿತು ಮಾಡಿದರೂ ಎರಡು ಮಾತು ಬರುವುದು ಸಹಜ. ಅಂತಹ ಟೀಕೆಗಳಿಗೆ ಮಹತ್ವ ನೀಡಬೇಕಿಲ್ಲ. ಅಂದವರು ನಮ್ಮವರೇ ಎಂದು ಎಲ್ಲವನ್ನು ಮರೆತು ತಾವು ಹಾಕಿಕೊಂಡಿರುವ ಕಾರ್ಯಕ್ರಮ ಉತ್ತಮವಾಗಿದ್ದಲ್ಲಿ ಎಡಬಿಡದೆ ಅದನ್ನು ಮುಗಿಸುವ ಧಾವಂತ ಹೊಂದಿರಬೇಕು.

ಉತ್ತಮ ಕಾರ್ಯ ಪೂರ್ಣಗೊಂಡಾಗ ಜನರಿಗೆ ಅದರ ಬಗ್ಗೆ ತಿಳಿಯಲಿದೆ. ಆಗ ಕಾರ್ಯಕ್ರಮದ ಯಶಸ್ಸಿಗೆ ಪೂರಕ ವಾತಾವರಣ ನಿರ್ಮಾಣವಾಗಲಿದೆ. ಸಾಕಷ್ಟು ಸಮಾಜಗಳು ಸಂಘಟನೆ ಮಾಡುತ್ತಿವೆ. ಆದರೆ ನಿರಂತರವಾಗಿ ಸಂಘಟನೆ ಮಾಡಲು ಆಗುತ್ತಿಲ್ಲ. ನಿಮ್ಮದು ಅವೆಲ್ಲಕ್ಕಿಂತ ಮಿಗಿಲಾಗಿದ್ದು,
ಉತ್ತಮ ಸಂಘಟನೆಯೊಂದಿಗೆ ಸಮಾಜದ ಬೆಳವಣಿಗೆ ಸದಾ ಸ್ಪಂದಿಸುವ ಸಮಾಜ ನಿಮ್ಮದಾಗಿದೆ ಎಂದು ಹೇಳಿದರು.
ಸಮಾಜದ ಅಧ್ಯಕ್ಷ ಸಿದ್ಧಣ್ಣ ಮಾಸ್ತರ ಶಿರವಾಳ ಅಧ್ಯಕ್ಷತೆ ವಹಿಸಿದ್ದರು.

ಮುಖಂಡ ಹಣಮಂತ್ರಾಯ ಹಳಿಸಗರ, ಜನಾರ್ಧನ ಮಾನು, ಪತ್ರಕರ್ತ ಮಲ್ಲಿಕಾರ್ಜುನ ಮುದನೂರ, ಯುವ ಮುಖಂಡ ರಾಜಕುಮಾರ ಚಿಲ್ಲಾಳ, ಮುಖಂಡರಾದ ಮಲ್ಲಯ್ಯ ಪಿರಂಗಿ, ರಾಮು ಮಿರ್ಜಿ, ತಿಪ್ಪಣ್ಣ, ಸತೀಶ ಮಿರ್ಜಿ, ನಂದು ಚಿಲ್ಲಾಳ, ಸಂತೋಷ ಮಾನು, ಮಲ್ಲಿಕಾರ್ಜುನ, ಅಶೋಕ ಇದ್ದರು. ಸುರೇಖಾ ಏಕಬೋಟೆ ಮತ್ತು ಲಕ್ಷ್ಮೀಪಿರಂಗಿ  ನಿರೂಪಿಸಿದರು. ಜಯಂತಿ ಅಂಗವಾಗಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಶಸ್ತಿ ಪದಕ, ಕಪ್‌ ವಿತರಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.