ವೃತ್ತಿ ಜೀವನದಲ್ಲಿ ಯಾರಿಗೂ ಅನ್ಯಾಯ ಮಾಡಿಲ್ಲ: ಕಡಕೋಳ


Team Udayavani, Aug 31, 2018, 4:10 PM IST

ray-2.jpg

ಯಾದಗಿರಿ: ಸುದೀರ್ಘ‌ ವೃತ್ತಿ ಜೀವನದಲ್ಲಿ ಯಾರಿಗೂ ಅನ್ಯಾಯ ಮಾಡಿಲ್ಲ. ಸಾರ್ವಜನಿಕರಿಗೆ ನ್ಯಾಯ ಒದಗಿಸಲು
ಪ್ರಾಮಾಣಿಕವಾಗಿ ಪ್ರಯತ್ನ ಮಾಡಿರುವುದರಿಂದ ವೃತ್ತಿ ಜೀವನ ತೃಪ್ತಿಕರವಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಯಾದಗಿರಿ ಪೊಲೀಸ್‌ ಅಧಿಧೀಕ್ಷಕರು ಹಾಗೂ ಕಲಬುರಗಿ, ಬೀದರ್‌, ರಾಯಚೂರು, ಕೊಪ್ಪಳ ಪ್ರಭಾರಿ ಪೊಲೀಸ್‌ ಅಧೀಕ್ಷಕ ಬಸವರಾಜ ಬಿ. ಕಡಕೋಳ ಮನದಾಳನ ಮಾತು ಬಿಚ್ಚಿಟ್ಟರು.

ನಗರದ ಎನ್‌ವಿಎಂ ಹೋಟೆಲ್‌ ಸಭಾಂಗಣದಲ್ಲಿ ಗುರುವಾರ ವಯೋನಿವೃತ್ತಿ ಹೊಂದಲಿರುವ ಪ್ರಯುಕ್ತ ತಮಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

1981ರಲ್ಲಿ ಜಿಲ್ಲೆಯ ಸೈದಾಪುರದಲ್ಲಿ ವೃತ್ತಿ ಜೀವನ ಆರಂಭಿಸಿದೆ. ಆಗ ಅಲ್ಲಿ ತಾಂಡಾ ನಿವಾಸಿಗಳ ಸಮಸ್ಯೆ ಹೆಚ್ಚಾಗಿತ್ತು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಗಳನ್ನು ಪರಿಹರಿಸಿದ್ದೇನೆ. 37 ವರ್ಷಗಳಲ್ಲಿ 26 ಬಾರಿ ವರ್ಗಾವಣೆಯಾಗಿದೆ. ಪೊಲೀಸ್‌ ಇಲಾಖೆಯ ಎಲ್ಲಾ ಶಾಖೆಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದೇನೆ. ದ್ವಿತೀಯ
ದರ್ಜೆ ಸಹಾಯಕರಿಂದ ಡಿವೈಎಸ್‌ಪಿ ಅಧಿಕಾರಿಗಳವರೆಗೂ ಎಲ್ಲರೂ ಸಹಕಾರ ನೀಡಿದ್ದಾರೆ.

ಮುಖ್ಯವಾಗಿ ಜನರ ಸಹಕಾರ ಕೂಡ ಇತ್ತು. ವೃತ್ತಿ ಆರಂಭಿಸಿದ ಜಿಲ್ಲೆಯಲ್ಲಿಯೇ ಈಗ ಬೀಳ್ಕೊಡುಗೆ ಸ್ವೀಕರಿಸುತ್ತಿರುವುದು ಖುಷಿ ನೀಡಿದೆ ಎಂದು ತಿಳಿಸಿದರು.

ಕೊಪ್ಪಳ ಲೋಕಾಯುಕ್ತ ಡಿವೈಎಸ್‌ಪಿ ಅಯ್ಯಣಗೌಡ ಪಾಟೀಲ ಮಾತನಾಡಿ, ಲೋಕಾಯುಕ್ತ ಎಸ್‌ಪಿ ಬಸವರಾಜ ಕಡಕೋಳ ಅವರು ಸಾರ್ವಜನಿಕರ ಹಿತಕ್ಕಾಗಿ ವೃತ್ತಿಜೀವನ ಮುಡಿಪಾಗಿಟ್ಟಿದ್ದರು. ಯಾವುದೇ ಕಷ್ಟದ ಸಂದರ್ಭ ಇದ್ದರೂ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಇಲಾಖೆಗೆ ಗೌರವ ತಂದುಕೊಟ್ಟಿದ್ದಾರೆ. ತಮ್ಮ ಅಧೀನ ಅಧಿಕಾರಿಗಳನ್ನು ಸ್ನೇಹಿತರಂತೆ ಕಂಡು ಮಾರ್ಗದರ್ಶನ ನೀಡುತ್ತಿದ್ದರು ಎಂದು ಹೇಳಿದರು.

 ಬೀದರ್‌ ಲೋಕಾಯುಕ್ತ ಡಿವೈಎಸ್‌ಪಿ ತಾಯಪ್ಪ ದೊಡಮನಿ ಮಾತನಾಡಿ, ಬಸವರಾಜ ಕಡಕೋಳ ಅವರು ಜನರ ಹಿತರಕ್ಷಣೆಯ ಕೆಲಸದಲ್ಲಿ ಸದಾ ಪ್ರೋತ್ಸಾಹ ನೀಡುತ್ತಿದ್ದರು. ಅವರ ನಿವೃತ್ತಿ ನಂತರವೂ ನಮಗೆ ಸಲಹೆ, ಸೂಚನೆ ನೀಡಲಿ ಎಂದು ಆಶಿಸಿದರು. 

ಕೊಪ್ಪಳ ಲೋಕಾಯುಕ್ತ ಪೊಲೀಸ್‌ ಇನ್‌ ಸ್ಪೆಕ್ಟರ್‌ ಹುಲಿಗೆಪ್ಪ, ಕಲಬುರಗಿ ಲೋಕಾಯುಕ್ತ ಪೊಲೀಸ್‌ ಇನ್‌ಸ್ಪೆಕ್ಟರ್‌ ರಾಘವೇಂದ್ರ ಭಜಂತ್ರಿ, ನಗರಸಭೆ ಪೌರಾಯುಕ್ತರಾದ ಸಂಗಪ್ಪ ಉಪಾಸೆ, ಮುಖಂಡರಾದ ಮಹೀಂದ್ರಗೌಡ,
ಸಿದ್ರಾಮಪ್ಪಗೌಡ ಮಾಲಿಪಾಟೀಲ, ಬಾಬು ದೋಖಾ ಮುಂತಾದವರು ಅನಿಸಿಕೆ ವ್ಯಕ್ತಪಡಿಸಿದರು. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಸೇರಿದಂತೆ ಅನೇಕರು ಶ್ರೀ ಬಸವರಾಜ ಬಿ. ಕಡಕೋಳ ಹಾಗೂ ಇವರ ಶ್ರೀಮತಿ ರಾಜೇಶ್ವರಿ ಬಿ. ಕಡಕೋಳ ಅವರನ್ನು ಸನ್ಮಾನಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌, ಡಿವೈಎಸ್‌ಪಿ ಪಾಂಡುರಂಗ, ಡಿವೈಎಸ್‌ಪಿ ಶೀಲವಂತ, ಎಸಿಬಿ ಡಿವೈಎಸ್‌ಪಿ ವೀರೇಶ ಕರಡಿಗುಡ್ಡ, ರಾಯಚೂರು ಲೋಕಾಯುಕ್ತ ಪೊಲೀಸ್‌ ಇನ್‌ಸ್ಪೆಕ್ಟರ್‌ ವಿಕಾಸ ಲಮಾಣಿ ಹಾಗೂ ಲೋಕಾಯುಕ್ತ ಪೊಲೀಸ್‌ ಸಿಬ್ಬಂದಿಗಳಾದ ಶಿವಶರಣಪ್ಪ, ಮಹ್ಮದ್‌ಗೌಸ್‌, ವಿಷ್ಣು, ರಾಮನಗೌಡ, ಹಣಮಂತರಾಯ, ನಾಗರಾಜ, ನೀಲಕಂಠ, ಶ್ರೀದೇವಿ, ರಾಜಾಸಾಬ್‌, ಚಂದಪ್ಪಗೌಡ ಇದ್ದರು.

ವಿದ್ಯಾರ್ಥಿನಿ ಪೂಜಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಪೊಲೀಸ್‌ ನಿರೀಕ್ಷಕರಾದ ಶಿವಾನಂದ ಗಾಣಿಗೇರ್‌ ಸ್ವಾಗತಿಸಿದರು. ಶಿಕ್ಷಕ ಉಮೇಶ ನರಗುಂದ ನಿರೂಪಿಸಿದರು. ಬೀದರ್‌ ಲೋಕಾಯುಕ್ತ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂಜುಕುಮಾರ ವಂದಿಸಿದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.