ಅವಸಾನದತ್ತ ಪ್ರಾಚೀನ ದೇವಸ್ಥಾನ
Team Udayavani, Sep 4, 2018, 11:45 AM IST
ಬಸವಕಲ್ಯಾಣ: ಪ್ರವಾಸಿಗರ ತಾಣವಾಗಬೇಕಾಗಿದ್ದ ಮೊರಖಂಡಿ ಗ್ರಾಮದ ಸೋಮಲಿಂಗೇಶ್ವರ ದೇವಸ್ಥಾನ ನಿರ್ಲಕ್ಷ್ಯಕ್ಕೆ ಒಳಗಾಗಿ ಅವಸನದತ್ತ ಸಾಗುತ್ತಿದೆ. ನಗರದಿಂದ ಸ್ವಲ್ಪ ದೂರದಲ್ಲೇ ಇರುವ ಮೊರಖಂಡಿ ಗ್ರಾಮದ ಕೆರೆ ದಡದ ಎತ್ತರ ಸ್ಥಳದಲ್ಲಿ ದೇವಸ್ಥಾನ ನಿರ್ಮಿಸಲಾಗಿದೆ.
ಹಿಂದಿನ ಕಾಲದಲ್ಲಿ ಮಯೂರಖಂಡಿ ಎಂದು ಕರೆಯುವ ಗ್ರಾಮವೇ ಇಂದು ಮೊರಖಂಡಿಯಾಗಿ ಬದಲಾಗಿದೆ. ಚಾಲುಕ್ಯರ ಕಾಲದ ಮಾದರಿಯಲ್ಲಿ ದೇವಸ್ಥಾನ ನಿರ್ಮಿಸಲಾಗಿದೆ ಎಂಬುದಕ್ಕೆ ಹಿಂಬದಿಯ ಭಾಗಕ್ಕೆ ಕಲಾಕೃತಿಯುಳ್ಳ ಕಲ್ಲುಗಳನ್ನು ಅಳವಡಿಸಿರುವುದು ನಿದರ್ಶನವಾಗಿದೆ.
ಆದರೆ ಸಂರಕ್ಷಣೆ ಇಲ್ಲದೆ ದೇವಸ್ಥಾನ ಇಂದು ನಿರ್ಲಕ್ಷ್ಯಕ್ಕೆ ಒಳಗಾಗಿ ಹಾಳು ಕೊಂಪೆಯಾದ್ದು, ಪ್ರವಾಸಿಗರಿಗೆ ಮತ್ತು ಗ್ರಾಮಸ್ಥರಿಗೆ ನಿರಾಶೆ ಆಗುವಂತೆ ಮಾಡಿದೆ. ದೇವಸ್ಥಾನದ ಹಿಂದಿನ ಭಾಗ ಸಂಪೂರ್ಣ ಹಾಳಾಗಿದೆ. ಕಲಾಕೃತಿ
ಇರುವ ಕಲ್ಲುಗಳು ಚಲ್ಲಾಪಿಲ್ಲಿಯಾಗಿ ಕೆಳಗೆ ಬಿದ್ದಿವೆ. ಮತ್ತು ದೇವಸ್ಥಾನದ ಗೋಡೆಗಳ ಮೇಲೆ ಮುಳ್ಳಿನ ಗಿಡ-ಗಂಟಿಗಳು ಬೆಳೆದಿವೆ.
ಈ ಹಿಂದಿನ ಶಾಸಕರಿಗೆ ಬಸವಕಲ್ಯಾಣ ಅಭಿವೃದ್ಧಿ ಯೋಜನೆಯಡಿ ದೇವಸ್ಥಾನ ಅಭಿವೃದ್ಧಿ ಪಡಿಸಬೇಕು ಎಂದು ಲಿಖೀತ ಮತ್ತು ಮೌಖೀಕವಾಗಿ ಮನವಿ ಮಾಡಲಾಗಿತ್ತು. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ.
ಒಟ್ಟಿನಲ್ಲಿ ಪ್ರವಾಸಿಗರ ತಾಣವಾಗಬೇಕಾಗಿದ್ದ ಸೋಮಲಿಂಗೇಶ್ವರ ದೇವಸ್ಥಾನ ಸ್ವಲ್ಪ ದಿನಗಳಲ್ಲಿಯೇ ಸಂಪೂರ್ಣ ಹಾಳಾಗುವುದರಲ್ಲಿ ಅನುಮಾನವಿಲ್ಲ. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ಮುಂದಿನ ಪೀಳಿಗಾಗಿ ಸಂರಕ್ಷಣೆ ಮಾಡಲು ಮುಂದಾಗಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.
ಐತಿಹಾಸಿಕ ಹಿನ್ನೆಲೆ ಹೊಂದಿದ ಈ ದೇವಸ್ಥಾನ ಅಭಿವೃದ್ಧಿಗಾಗಿ ಗ್ರಾಮಸ್ಥರು ಸೇರಿದಂತೆ ಪ್ರತಿಯೊಬ್ಬರು ಸಾಕಷ್ಟು ಪ್ರಯತ್ನ ಮಾಡಲಾಗಿದೆ. ಅಭಿವೃದ್ಧಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿ ಗಳಿಗೆ ಮನವಿ ಕೂಡ ಸಲ್ಲಿಸಲಾಗಿದೆ. ಆದರೂ ಯಾವುದೇ ಪ್ರಯೋಜವಾಗಿಲ್ಲ.
ಬಸವರಾಜ ಉಸ್ತುರೆ, ಗ್ರಾಮದ ನಿವಾಸಿ
ವೀರಾರೆಡ್ಡಿ ಆರ್.ಎಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ