ಶಹಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ


Team Udayavani, Sep 4, 2018, 11:50 AM IST

yad-2.jpg

ಕೆಂಭಾವಿ: ಜನತೆಯ ಸಂಪೂರ್ಣ ಆಶೀರ್ವಾದದಿಂದ ನಾನು ಈ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಶಹಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಮುಂಭಾಗದ ಕೋಣೆಯಲ್ಲಿ ಸೋಮವಾರ ಶಾಸಕರ ಅಧಿಕೃತ ಕಚೇರಿ ಆರಂಭಿಸಿ ಮಾತನಾಡಿದ ಅವರು, ನನ್ನ ಮತ ಕ್ಷೇತ್ರದಲ್ಲಿ ಅತೀ ಹೆಚ್ಚು ಮತದಾರರನ್ನು ಹೊಂದಿ ದೊಡ್ಡ ಹೋಬಳಿ ಕೇಂದ್ರವಾಗಿರುವ ಪುರಸಭೆಯ ಕೇಂದ್ರ ಸ್ಥಾನವಾದ ಕೆಂಭಾವಿ ಪಟ್ಟಣ ಸೇರಿದಂತೆ ವಲಯದ ಹಲವು ಗ್ರಾಮಸ್ಥರ ಕುಂದು ಕೊರತೆ ಆಲಿಸಲು ಈ ಕಚೇರಿ ಆರಂಭಿಸಲಾಗಿದ್ದು, ಮುಂಬರುವ ಪ್ರತಿ ಸೋಮವಾರ ಕಚೇರಿಗೆ ಆಗಮಿಸಿ ಜನತೆಯ ಮನವಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ನಗರೋತ್ಥಾನ ಯೋಜನೆಯಡಿ ಪಟ್ಟಣದ ರಸ್ತೆ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿಗಳನ್ನು ಉದ್ಘಾಟಿಸಿ ಒಂದು ವಾರ ಕಳೆದರೂ ಇನ್ನೂ ಕಾಮಗಾರಿ ಪ್ರಾರಂಭವಾಗದೆ ಇರುವುದು ನನ್ನ ಗಮನಕ್ಕೆ ಬಂದಿದ್ದು, ಈ ಬಗ್ಗೆ ಶೀಘ್ರದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾಮಗಾರಿ ತ್ವರಿತ ಗತಿಯಲ್ಲಿ ಆರಂಭಿಸುವಂತೆ ಸೂಚಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮರಿಗೌಡ ಹುಲಕಲ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಲಿಂಗನಗೌಡ ಮಾಲಿಪಾಟೀಲ,
ಜಿಪಂ ಮಾಜಿ ಅಧ್ಯಕ್ಷ ಸಿದ್ಧನಗೌಡ ಪೊಲೀಸ್‌ ಪಾಟೀಲ, ಪುರಸಭೆ ಅಧ್ಯಕ್ಷ ದೇವಪ್ಪ ಮ್ಯಾಗೇರಿ, ವಾಮನರಾವ್‌
ದೇಶಪಾಂಡೆ, ಬಸನಗೌಡ ಹೊಸಮನಿ, ರಾಮನಗೌಡ ಹದನೂರ, ನಂದರೆಡ್ಡಿ ಪರಸನಹಳ್ಳಿ, ಅಯ್ಯಪ್ಪಗೌಡ
ವಂದಗನೂರ, ಬಸವರಾಜಪ್ಪಗೌಡ ಬೊಮ್ಮನಹಳ್ಳಿ, ಶಿವರಾಜ ಬೂದೂರ, ಲಾಲಪ್ಪ ಆಲ್ಹಾಳ ಸೇರಿದಂತೆ
ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಇದ್ದರು. ಸೋಮವಾರ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ
ಕಲ್ಯಾಣ ಮಂಟಪದ ಕೋಣೆಯಲ್ಲಿ ಉದ್ಘಾಟನೆಯಾದ ಶಾಸಕರ ಕಚೇರಿಗೆ ಜೆಡಿಎಸ್‌ ಮುಖಂಡ ಅಮೀನರೆಡ್ಡಿ
ಪಾಟೀಲ ಯಾಳಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ದೂರವಾಣಿಯಲ್ಲಿ ಪತ್ರಿಕೆಗೆ ಪ್ರತಿಕ್ರಿಯಿಸಿರುವ
ಅವರು, ಇದು ಖಾಸಗಿ ಕಲ್ಯಾಣ ಮಂಟಪವಾಗಿದ್ದು, ಒಂದು ಸಮಾಜದ ಸ್ವತ್ತಾಗಿದೆ. ಇಲ್ಲಿ ಸಾರ್ವಜನಿಕ ಸಭೆ ಸಮಾರಂಭಗಳು ನಡೆಯುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುವ ಸಾಧ್ಯತೆ ಇದ್ದು, ಕಾರಣ ಈ ಕಚೇರಿಯನ್ನು ಬೇರೆ ಕಡೆ ಸ್ಥಳಾಂತರಿಸಬೇಕೆಂದು ಕಲ್ಯಾಣ ಮಂಟಪದ ಆಡಳಿತ ವರ್ಗಕ್ಕೆ ಅವರು ಕೋರಿದ್ದಾರೆ.

ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ 
ಕೆಂಭಾವಿ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸೋಮವಾರ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಭೇಟಿ ನೀಡಿ ಕಾಲೇಜಿನ ಸ್ಥಿತಿಗತಿ ಬಗ್ಗೆ ಖುದ್ದು ಅವಲೋಕಿಸಿದರು. ಸುಮಾರು ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಅಭ್ಯಾಸ ಮಾಡುತ್ತಿರುವ ಈ ಕಾಲೇಜು ಸಂಪೂರ್ಣ ಮೂಲಭೂತ ಸೌಲಭ್ಯಗಳಿಂದ ವಂಚಿತವಾದ ಬಗ್ಗೆ ಹಲವು ಬಾರಿ ಪತ್ರಿಕೆಗಳು ವರದಿ ಮಾಡಿದ್ದರ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದರು. 

ಸರಿಯಾದ ಪ್ರಯೋಗಾಲಯದ ವ್ಯವಸ್ಥೆ ಇಲ್ಲದಿರುವುದು, ತರಗತಿ ಕೋಣೆಯಲ್ಲಿನ ಕಿಟಕಿ ಬಾಗಿಲುಗಳು ಸರಿಯಾದ
ರೀತಿಯಲ್ಲಿ ಇಲ್ಲದಿರುವುದು, ಕಟ್ಟಡ ಪ್ರಾರಂಭವಾಗಿ ಸುಮಾರು ವರ್ಷ ಗತಿಸಿದರೂ ಅರ್ಧಕ್ಕೆ ನಿಂತಿರುವ ತರಗತಿ ಕೋಣೆಗಳು, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಯಾವುದೇ ಸೌಲಭ್ಯವಿಲ್ಲದೆ ಇರುವುದನ್ನು
ಕಂಡು ಅಧಿಕಾರಿಗಳಿಗೆ ಸರಿಪಡಿಸಲು ದೂರವಾಣಿ ಮೂಲಕ ಸೂಚಿಸಿದರು. ಈ ಸಂದರ್ಭದಲ್ಲಿ ಮರಿಗೌಡ ಹುಲಕಲ್‌, ಪುರಸಭೆ ಸದಸ್ಯ ರಾಘವೇಂದ್ರ ದೇಶಪಾಂಡೆ, ಲಕ್ಷ್ಮಣ ಯಲಗೋಡ, ರಂಗಪ್ಪ ವಡ್ಡರ್‌ ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.