ಶಹಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ


Team Udayavani, Sep 4, 2018, 11:50 AM IST

yad-2.jpg

ಕೆಂಭಾವಿ: ಜನತೆಯ ಸಂಪೂರ್ಣ ಆಶೀರ್ವಾದದಿಂದ ನಾನು ಈ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಶಹಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಮುಂಭಾಗದ ಕೋಣೆಯಲ್ಲಿ ಸೋಮವಾರ ಶಾಸಕರ ಅಧಿಕೃತ ಕಚೇರಿ ಆರಂಭಿಸಿ ಮಾತನಾಡಿದ ಅವರು, ನನ್ನ ಮತ ಕ್ಷೇತ್ರದಲ್ಲಿ ಅತೀ ಹೆಚ್ಚು ಮತದಾರರನ್ನು ಹೊಂದಿ ದೊಡ್ಡ ಹೋಬಳಿ ಕೇಂದ್ರವಾಗಿರುವ ಪುರಸಭೆಯ ಕೇಂದ್ರ ಸ್ಥಾನವಾದ ಕೆಂಭಾವಿ ಪಟ್ಟಣ ಸೇರಿದಂತೆ ವಲಯದ ಹಲವು ಗ್ರಾಮಸ್ಥರ ಕುಂದು ಕೊರತೆ ಆಲಿಸಲು ಈ ಕಚೇರಿ ಆರಂಭಿಸಲಾಗಿದ್ದು, ಮುಂಬರುವ ಪ್ರತಿ ಸೋಮವಾರ ಕಚೇರಿಗೆ ಆಗಮಿಸಿ ಜನತೆಯ ಮನವಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ನಗರೋತ್ಥಾನ ಯೋಜನೆಯಡಿ ಪಟ್ಟಣದ ರಸ್ತೆ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿಗಳನ್ನು ಉದ್ಘಾಟಿಸಿ ಒಂದು ವಾರ ಕಳೆದರೂ ಇನ್ನೂ ಕಾಮಗಾರಿ ಪ್ರಾರಂಭವಾಗದೆ ಇರುವುದು ನನ್ನ ಗಮನಕ್ಕೆ ಬಂದಿದ್ದು, ಈ ಬಗ್ಗೆ ಶೀಘ್ರದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾಮಗಾರಿ ತ್ವರಿತ ಗತಿಯಲ್ಲಿ ಆರಂಭಿಸುವಂತೆ ಸೂಚಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮರಿಗೌಡ ಹುಲಕಲ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಲಿಂಗನಗೌಡ ಮಾಲಿಪಾಟೀಲ,
ಜಿಪಂ ಮಾಜಿ ಅಧ್ಯಕ್ಷ ಸಿದ್ಧನಗೌಡ ಪೊಲೀಸ್‌ ಪಾಟೀಲ, ಪುರಸಭೆ ಅಧ್ಯಕ್ಷ ದೇವಪ್ಪ ಮ್ಯಾಗೇರಿ, ವಾಮನರಾವ್‌
ದೇಶಪಾಂಡೆ, ಬಸನಗೌಡ ಹೊಸಮನಿ, ರಾಮನಗೌಡ ಹದನೂರ, ನಂದರೆಡ್ಡಿ ಪರಸನಹಳ್ಳಿ, ಅಯ್ಯಪ್ಪಗೌಡ
ವಂದಗನೂರ, ಬಸವರಾಜಪ್ಪಗೌಡ ಬೊಮ್ಮನಹಳ್ಳಿ, ಶಿವರಾಜ ಬೂದೂರ, ಲಾಲಪ್ಪ ಆಲ್ಹಾಳ ಸೇರಿದಂತೆ
ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಇದ್ದರು. ಸೋಮವಾರ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ
ಕಲ್ಯಾಣ ಮಂಟಪದ ಕೋಣೆಯಲ್ಲಿ ಉದ್ಘಾಟನೆಯಾದ ಶಾಸಕರ ಕಚೇರಿಗೆ ಜೆಡಿಎಸ್‌ ಮುಖಂಡ ಅಮೀನರೆಡ್ಡಿ
ಪಾಟೀಲ ಯಾಳಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ದೂರವಾಣಿಯಲ್ಲಿ ಪತ್ರಿಕೆಗೆ ಪ್ರತಿಕ್ರಿಯಿಸಿರುವ
ಅವರು, ಇದು ಖಾಸಗಿ ಕಲ್ಯಾಣ ಮಂಟಪವಾಗಿದ್ದು, ಒಂದು ಸಮಾಜದ ಸ್ವತ್ತಾಗಿದೆ. ಇಲ್ಲಿ ಸಾರ್ವಜನಿಕ ಸಭೆ ಸಮಾರಂಭಗಳು ನಡೆಯುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುವ ಸಾಧ್ಯತೆ ಇದ್ದು, ಕಾರಣ ಈ ಕಚೇರಿಯನ್ನು ಬೇರೆ ಕಡೆ ಸ್ಥಳಾಂತರಿಸಬೇಕೆಂದು ಕಲ್ಯಾಣ ಮಂಟಪದ ಆಡಳಿತ ವರ್ಗಕ್ಕೆ ಅವರು ಕೋರಿದ್ದಾರೆ.

ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ 
ಕೆಂಭಾವಿ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸೋಮವಾರ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಭೇಟಿ ನೀಡಿ ಕಾಲೇಜಿನ ಸ್ಥಿತಿಗತಿ ಬಗ್ಗೆ ಖುದ್ದು ಅವಲೋಕಿಸಿದರು. ಸುಮಾರು ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಅಭ್ಯಾಸ ಮಾಡುತ್ತಿರುವ ಈ ಕಾಲೇಜು ಸಂಪೂರ್ಣ ಮೂಲಭೂತ ಸೌಲಭ್ಯಗಳಿಂದ ವಂಚಿತವಾದ ಬಗ್ಗೆ ಹಲವು ಬಾರಿ ಪತ್ರಿಕೆಗಳು ವರದಿ ಮಾಡಿದ್ದರ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದರು. 

ಸರಿಯಾದ ಪ್ರಯೋಗಾಲಯದ ವ್ಯವಸ್ಥೆ ಇಲ್ಲದಿರುವುದು, ತರಗತಿ ಕೋಣೆಯಲ್ಲಿನ ಕಿಟಕಿ ಬಾಗಿಲುಗಳು ಸರಿಯಾದ
ರೀತಿಯಲ್ಲಿ ಇಲ್ಲದಿರುವುದು, ಕಟ್ಟಡ ಪ್ರಾರಂಭವಾಗಿ ಸುಮಾರು ವರ್ಷ ಗತಿಸಿದರೂ ಅರ್ಧಕ್ಕೆ ನಿಂತಿರುವ ತರಗತಿ ಕೋಣೆಗಳು, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಯಾವುದೇ ಸೌಲಭ್ಯವಿಲ್ಲದೆ ಇರುವುದನ್ನು
ಕಂಡು ಅಧಿಕಾರಿಗಳಿಗೆ ಸರಿಪಡಿಸಲು ದೂರವಾಣಿ ಮೂಲಕ ಸೂಚಿಸಿದರು. ಈ ಸಂದರ್ಭದಲ್ಲಿ ಮರಿಗೌಡ ಹುಲಕಲ್‌, ಪುರಸಭೆ ಸದಸ್ಯ ರಾಘವೇಂದ್ರ ದೇಶಪಾಂಡೆ, ಲಕ್ಷ್ಮಣ ಯಲಗೋಡ, ರಂಗಪ್ಪ ವಡ್ಡರ್‌ ಇದ್ದರು.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.