16 ಅಭ್ಯರ್ಥಿ ಜಯ ಗಳಿಸಿ ಬಿಜೆಪಿ ಶಕ್ತಿ ಪ್ರದರ್ಶನ


Team Udayavani, Sep 4, 2018, 12:08 PM IST

yad-5.jpg

ಸುರಪುರ: ಇಲ್ಲಿಯ ನಗರಸಭೆಗೆ ಪ್ರಪ್ರಥಮ ಬಾರಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ನಗರ ಸಭೆ ಆಡಳಿತ ತನ್ನ ತೆಕ್ಕೆಗೆ ಪಡೆದಿದೆ. ಆಟಕ್ಕುಂಟು ಲೆಕಕ್ಕಿಲ್ಲ ಎನ್ನುವಂತ್ತಿದ್ದ ಜೆಡಿಎಸ್‌ ಕೇವಲ ಮೂರು ವಾರ್ಡ್‌ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಆದರೆ ಒಂದು ಸ್ಥಾನದಲ್ಲಿ ಗೆಲುವು ಸಾಧಿಸದೆ ಮೂರು ಜನ ಅಭ್ಯರ್ಥಿಗಳು ಹೀನಾಯ ಸೋಲು ಅನುಭವಿಸುವ ಮೂಲಕ ಠೇವಣಿ ಕಳೆದು ಕೊಂಡಿದ್ದಾರೆ.

ಇಲ್ಲಿಯ ನಗರಸಭೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, 31 ವಾರ್ಡ್‌ಗಳಲ್ಲಿ ಭಾರತೀಯ ಜನತಾ
ಪಕ್ಷದ ಅಭ್ಯರ್ಥಿಗಳು 16 ವಾರ್ಡ್‌ಗಳಲ್ಲಿ ಜಯಗಳಿಸಿದರೆ, ತೀವ್ರ ಪೈಪೋಟಿ ನೀಡದ್ದ ಕಾಂಗ್ರೆಸ್‌ ಪಕ್ಷ 15 ಸ್ಥಾನಗಳಲ್ಲಿ
ಜಯ ಗಳಿಸಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದರು.

ಇಲ್ಲಿಯ ತಹಶೀಲ್ದಾರ್‌ ಕಾರ್ಯಾಲಯದ ಸಭಾಂಗಣದಲ್ಲಿ ಬೆಳಗ್ಗೆ 8:00 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಪ್ರತಿಯೊಂದು ಸುತ್ತಿನಲ್ಲೂ ಕಾಂಗ್ರೆಸ್‌, ಬಿಜೆಪಿ ನಡುವೆ ಗೆಲುವಿನಲ್ಲಿ ಪೈಪೋಟಿ ಏರ್ಪಟಿತ್ತು. ಎರಡು ಪಕ್ಷಗಳ ಅಭ್ಯರ್ಥಿಗಳು ತಲಾ 15 ವಾರ್ಡಗಳಲ್ಲಿ ಜಯಗಳಿಸಿ, ಸಮಾನ ಫಲಿತಾಂಶ ಕಾಯ್ದು ಕೊಂಡಿದ್ದರು. ಆದರೆ ಕೊನೆ ಸುತ್ತಿನಲ್ಲಿ ಸತ್ಯಂಪೇಟೆಯ ವಾರ್ಡ್‌ ನಂ 31ರ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿ ಅಚ್ಚರಿ ಫಲಿತಾಂಶ ತಂದು ಕೊಟ್ಟಿತು.

ಬಿಜೆಪಿ ಅಭ್ಯರ್ಥಿಗಳು ಒಟ್ಟು 16 ವಾರ್ಡ್‌ಗಳಲ್ಲಿ ಜಯಗಳಿಸಿ ನಗರಸಭೆಯಲ್ಲಿ ಅಧಿಕಾರಕ್ಕೇರುವಲ್ಲಿ ಯಶಸ್ವಿಯಾದರು. ಯಾದಗಿರಿ ಸಹಾಯಕ ಆಯುಕ್ತ ಮಂಜುನಾಥ ಸ್ವಾಮಿ, ತಹಶೀಲ್ದಾರ್‌ ಸುರೇಶ ಅಂಕಲಗಿ, ಪಿಆರ್‌ಒ ಮತ್ತು ಎಪಿಆರ್‌
ಗಳು ಮತ ಎಣಿಕೆ ಪ್ರಕ್ರಿಯೆಯಲ್ಲಿದ್ದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಾಡಾ ಮಾರ್ಟಿನ್‌ ಮಾರ್ಬನ್ಯಾಂಗ್‌
ಚುನಾವಣಾ ಕೇಂದ್ರಕ್ಕೆ ಭೇಟಿ ನೀಡಿದರು.

ಮತ ಎಣಿಕೆ ಮುಂಭಾಗದಲ್ಲಿ ಫಲಿತಾಂಶ ತಿಳಿಯಲು ಪ್ರಮುಖ ಪಕ್ಷಗಳ ನೂರಾರು ಕಾರ್ಯಕರ್ತರು ಸೇರಿದ್ದರು. ಮತ ಎಣಿಕೆ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಎಲ್ಲೆಡೆ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು. 

ಬಿಜೆಪಿ ವಿಜಯೋತ್ಸವ: ಬಿಜೆಪಿ ಕಾರ್ಯಕರ್ತರು ಶಾಸಕ ರಾಜುಗೌಡ ಅವರ ನಿವಾಸದಲ್ಲಿ ವಿಜಯೋತ್ಸವ ಆಚರಿಸಿದರು. 16 ವಾರ್ಡ್‌ಗಲ್ಲಿ ಜಯಗಳಿಸಿದ ಅಭ್ಯರ್ಥಿಗಳು, ಕಾರ್ಯಕರ್ತರು ಪರಸ್ಪರ ಗುಲಾಲ್‌ ಎರಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಪಟ್ಟರು.

ಕಾಂಗ್ರೆಸ್‌ ವಿಜಯೋತ್ಸವ : ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿವಾಸದಲ್ಲಿ ವಿಜಯೋತ್ಸವ ಆಚರಿಸಿದರು. 15 ವಾರ್ಡಗಳಲ್ಲಿ ಜಯ ಗಳಿಸಿದ ಅಭ್ಯರ್ಥಿಗಳು, ಕಾರ್ಯಕರ್ತರು ಪರಸ್ಪರ ಗುಲಾಲ್‌ ಎರಚಿ, ಸಿಹಿ ಹಂಚಿ ಸಂಭ್ರಮಿಸಿದರು.  

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.