16 ಅಭ್ಯರ್ಥಿ ಜಯ ಗಳಿಸಿ ಬಿಜೆಪಿ ಶಕ್ತಿ ಪ್ರದರ್ಶನ


Team Udayavani, Sep 4, 2018, 12:08 PM IST

yad-5.jpg

ಸುರಪುರ: ಇಲ್ಲಿಯ ನಗರಸಭೆಗೆ ಪ್ರಪ್ರಥಮ ಬಾರಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ನಗರ ಸಭೆ ಆಡಳಿತ ತನ್ನ ತೆಕ್ಕೆಗೆ ಪಡೆದಿದೆ. ಆಟಕ್ಕುಂಟು ಲೆಕಕ್ಕಿಲ್ಲ ಎನ್ನುವಂತ್ತಿದ್ದ ಜೆಡಿಎಸ್‌ ಕೇವಲ ಮೂರು ವಾರ್ಡ್‌ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಆದರೆ ಒಂದು ಸ್ಥಾನದಲ್ಲಿ ಗೆಲುವು ಸಾಧಿಸದೆ ಮೂರು ಜನ ಅಭ್ಯರ್ಥಿಗಳು ಹೀನಾಯ ಸೋಲು ಅನುಭವಿಸುವ ಮೂಲಕ ಠೇವಣಿ ಕಳೆದು ಕೊಂಡಿದ್ದಾರೆ.

ಇಲ್ಲಿಯ ನಗರಸಭೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, 31 ವಾರ್ಡ್‌ಗಳಲ್ಲಿ ಭಾರತೀಯ ಜನತಾ
ಪಕ್ಷದ ಅಭ್ಯರ್ಥಿಗಳು 16 ವಾರ್ಡ್‌ಗಳಲ್ಲಿ ಜಯಗಳಿಸಿದರೆ, ತೀವ್ರ ಪೈಪೋಟಿ ನೀಡದ್ದ ಕಾಂಗ್ರೆಸ್‌ ಪಕ್ಷ 15 ಸ್ಥಾನಗಳಲ್ಲಿ
ಜಯ ಗಳಿಸಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದರು.

ಇಲ್ಲಿಯ ತಹಶೀಲ್ದಾರ್‌ ಕಾರ್ಯಾಲಯದ ಸಭಾಂಗಣದಲ್ಲಿ ಬೆಳಗ್ಗೆ 8:00 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಪ್ರತಿಯೊಂದು ಸುತ್ತಿನಲ್ಲೂ ಕಾಂಗ್ರೆಸ್‌, ಬಿಜೆಪಿ ನಡುವೆ ಗೆಲುವಿನಲ್ಲಿ ಪೈಪೋಟಿ ಏರ್ಪಟಿತ್ತು. ಎರಡು ಪಕ್ಷಗಳ ಅಭ್ಯರ್ಥಿಗಳು ತಲಾ 15 ವಾರ್ಡಗಳಲ್ಲಿ ಜಯಗಳಿಸಿ, ಸಮಾನ ಫಲಿತಾಂಶ ಕಾಯ್ದು ಕೊಂಡಿದ್ದರು. ಆದರೆ ಕೊನೆ ಸುತ್ತಿನಲ್ಲಿ ಸತ್ಯಂಪೇಟೆಯ ವಾರ್ಡ್‌ ನಂ 31ರ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿ ಅಚ್ಚರಿ ಫಲಿತಾಂಶ ತಂದು ಕೊಟ್ಟಿತು.

ಬಿಜೆಪಿ ಅಭ್ಯರ್ಥಿಗಳು ಒಟ್ಟು 16 ವಾರ್ಡ್‌ಗಳಲ್ಲಿ ಜಯಗಳಿಸಿ ನಗರಸಭೆಯಲ್ಲಿ ಅಧಿಕಾರಕ್ಕೇರುವಲ್ಲಿ ಯಶಸ್ವಿಯಾದರು. ಯಾದಗಿರಿ ಸಹಾಯಕ ಆಯುಕ್ತ ಮಂಜುನಾಥ ಸ್ವಾಮಿ, ತಹಶೀಲ್ದಾರ್‌ ಸುರೇಶ ಅಂಕಲಗಿ, ಪಿಆರ್‌ಒ ಮತ್ತು ಎಪಿಆರ್‌
ಗಳು ಮತ ಎಣಿಕೆ ಪ್ರಕ್ರಿಯೆಯಲ್ಲಿದ್ದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಾಡಾ ಮಾರ್ಟಿನ್‌ ಮಾರ್ಬನ್ಯಾಂಗ್‌
ಚುನಾವಣಾ ಕೇಂದ್ರಕ್ಕೆ ಭೇಟಿ ನೀಡಿದರು.

ಮತ ಎಣಿಕೆ ಮುಂಭಾಗದಲ್ಲಿ ಫಲಿತಾಂಶ ತಿಳಿಯಲು ಪ್ರಮುಖ ಪಕ್ಷಗಳ ನೂರಾರು ಕಾರ್ಯಕರ್ತರು ಸೇರಿದ್ದರು. ಮತ ಎಣಿಕೆ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಎಲ್ಲೆಡೆ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು. 

ಬಿಜೆಪಿ ವಿಜಯೋತ್ಸವ: ಬಿಜೆಪಿ ಕಾರ್ಯಕರ್ತರು ಶಾಸಕ ರಾಜುಗೌಡ ಅವರ ನಿವಾಸದಲ್ಲಿ ವಿಜಯೋತ್ಸವ ಆಚರಿಸಿದರು. 16 ವಾರ್ಡ್‌ಗಲ್ಲಿ ಜಯಗಳಿಸಿದ ಅಭ್ಯರ್ಥಿಗಳು, ಕಾರ್ಯಕರ್ತರು ಪರಸ್ಪರ ಗುಲಾಲ್‌ ಎರಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಪಟ್ಟರು.

ಕಾಂಗ್ರೆಸ್‌ ವಿಜಯೋತ್ಸವ : ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿವಾಸದಲ್ಲಿ ವಿಜಯೋತ್ಸವ ಆಚರಿಸಿದರು. 15 ವಾರ್ಡಗಳಲ್ಲಿ ಜಯ ಗಳಿಸಿದ ಅಭ್ಯರ್ಥಿಗಳು, ಕಾರ್ಯಕರ್ತರು ಪರಸ್ಪರ ಗುಲಾಲ್‌ ಎರಚಿ, ಸಿಹಿ ಹಂಚಿ ಸಂಭ್ರಮಿಸಿದರು.  

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.