ಪಿಒಪಿ ಬಳಕೆಗೆ ಮೂರ್ತಿ ತಯಾರಕರ ಒಲವು


Team Udayavani, Sep 8, 2018, 3:58 PM IST

yad-1.jpg

ಯಾದಗಿರಿ: ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ಮೂರ್ತಿ ತಯಾರಿಸುವಿಕೆಯನ್ನು ನಿಷೇಧಿಸಿಲಾಗಿದ್ದರೂ ತಯಾರಕರು ಮಾತ್ರ ಪಿಒಪಿ ಬಳಕೆಯಿಂದ ಹಿಂದಕ್ಕೆ ಸರಿದಿಲ್ಲ. ಯಾಕೆ ಹೀಗೆ ಎಂದು ಮೂರ್ತಿ ತಯಾರಿಕೆ ಮಾಡುವರನ್ನು ಪ್ರಶ್ನಿಸಿದರೆ, ಶೇ. 70ರಷ್ಟು ಮಣ್ಣಿನ ಅಂಶದ ಜೊತೆಗೆ ಪಿಒಪಿ ಬಳಕೆ ಅನಿವಾರ್ಯವಾಗಿದೆ. ಆದ್ದರಿಂದ ಬಳಸುತ್ತಿದ್ದೇವೆ. ಮುಂದಿನ ವರ್ಷ ಸಂಪೂರ್ಣ ಮಣ್ಣಿನಲ್ಲೇ ಗಣಪತಿ ಮೂರ್ತಿ ತಯಾರಿಕೆಗೆ ಪ್ರಯತ್ನಿಸುತ್ತೇವೆ ಎನ್ನುತ್ತಿದ್ದಾರೆ. 

ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ತಯಾರಾದ ವಿಗ್ರಹಗಳು ನೀರಿನಲ್ಲಿ ಬೇಗನೇ ಕರಗುವುದಿಲ್ಲ. ಇದರಿಂದ ನೀರಿನ ಗುಣಮಟ್ಟ ಹಾಳಾಗಿ ನಾಗರಿಕರು, ಪ್ರಾಣಿಗಳ ಮೇಲೆ ಅಗಾಧ ಪರಿಣಾಮ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಪಿಒಪಿ ವಿಗ್ರಹ ತಯಾರಿಕೆ, ಮಾರಾಟವನ್ನು ನಿಷೇಧಿಸಿದೆ. ಆದರೆ ಈ ನಿಷೇಧ ಕೇವಲ ಕಾಗದದಲ್ಲಿ ಮಾತ್ರ ಉಳಿದಿದೆ ಎನ್ನುವಂತೆ ಭಾಸವಾಗುತ್ತಿದೆ.

ಈ ಬಾರಿ ಸೊಲ್ಲಾಪುರದ ಗಣೇಶ ವಿಗ್ರಹ ತಯಾರಕರೊಬ್ಬರು ಮುಂಬೈ ಮಣ್ಣಿನಿಂದ ತಯಾರಿಸಿದ, ಹಾನಿಕಾರಕವಲ್ಲದ ಬಣ್ಣ ಹಚ್ಚಿರುವ ಗಣೇಶ ಮೂರ್ತಿಗಳನ್ನು ಯಾದಗಿರಿಗೆ ಮಾರಾಟಕ್ಕೆ ತಂದಿದ್ದಾರೆ. ಸಿಂಡಿಕೇಟ್‌ ಬ್ಯಾಂಕ್‌ ಎದುರಿನ ಕಟ್ಟಡ ಹಾಗೂ ನಗರದ ಹೊಸ್ಸಳ್ಳಿ ಕ್ರಾಸ್‌ ಹತ್ತಿರ ಗಣೇಶ ಮೂರ್ತಿಗಳನ್ನು ಮಾರಾಟಕ್ಕಿರಿಸಲಾಗಿದೆ. 

ಜಿಲ್ಲೆಯ ವಿವಿಧೆಡೆ ಪರಿಸರ ಜಾಗೃತಿ ಮೂಡಿಸದಿರುವುದು ಪಿಒಪಿ ಗಣೇಶ ಮೂರ್ತಿ ಮಾರಾಟಕ್ಕೆ ತಡೆಯಿಲ್ಲದಂತಾಗಿದೆ. ಪ್ರಮುಖವಾಗಿ ಪಿಒಪಿ ಮೂರ್ತಿಗಳು ಕಡಿಮೆ ತೂಕ ಮತ್ತು ಕಡಿಮೆ ಬೆಲೆಗೆ ದೊರೆಯುವುದರಿಂದ ಹೆಚ್ಚಿನ ಜನರು
ಖರೀದಿಸುತ್ತಿದ್ದಾರೆ. 

ಕಡಿಮೆ ತೂಕದ ವಿಗ್ರಹವನ್ನು 2ರಿಂದ 3 ಜನ ಅಡೆತಡೆ ಇಲ್ಲದೆ ಎತ್ತಲು ಸಾಧ್ಯವಾಗುತ್ತದೆ. ಮಣ್ಣಿನಿಂದ ತಯಾರಿಸಿದ ವಿಗ್ರಹಗಳು ಹೆಚ್ಚಿನ ತೂಕ ಹೊಂದಿರುವುದರಿಂದ ವಿಗ್ರಹ ವಿಸರ್ಜನೆ ವೇಳೆ ಸಾಕಷ್ಟು ಜನರು ಬೇಕಾಗುತ್ತದೆ. ಹೀಗಾಗಿ
ಅನಿವಾರ್ಯವಾಗಿ ಪಿಒಪಿ ವಿಗ್ರಹಗಳನ್ನೇ ಅವಲಂಬಿಸುವಂತೆ ಆಗಿದೆ ಎನ್ನುತ್ತಾರೆ ಗಣೇಶ ಪ್ರತಿಷ್ಠಾಪನೆ ಮಂಡಳಿ ಪ್ರಮುಖರು. 

ಪ್ರಸಕ್ತ ವರ್ಷ ಯಾದಗಿರಿಯಲ್ಲಿ ಮುಂಬೈ ಮಣ್ಣಿನಿಂದ ತಯಾರಿಸಿರುವ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುತ್ತಿದ್ದು, ಪಿಒಪಿ ವಿಗ್ರಹಗಳನ್ನು ತಯಾರಿಸುವುದನ್ನು ಕೈ ಬಿಟ್ಟಿದ್ದೇವೆ. ಈ ಮೂರ್ತಿಗಳು ಹೆಚ್ಚಿನ ತೂಕದ್ದಾಗಿವೆ. ನೀರಿನಲ್ಲಿ ವಿಸರ್ಜಿಸಿದ ಬಳಿಕ ಒಂದು ವಾರದಲ್ಲಿ ಕರಗುತ್ತವೆ.
 ರವಿ ಕುಂಬಾರ, ಖಜೂರಿ, ವಿಗ್ರಹ ತಯಾರಕರು.

ಪರಿಸರ ಮಾಲಿನ್ಯವಾಗದಂತ ಮೂರ್ತಿಗಳ ಪ್ರತಿಷ್ಠಾಪನೆಗೆ ನಗರದಲ್ಲಿ ಜಾಗೃತಿ ಮೂಡಿಸಲಾಗಿದೆ. ಪಿಒಪಿ ಬಳಕೆ ಸಂಪೂರ್ಣವಾಗಿ ತಡೆಯಲು ಆಗುತ್ತಿಲ್ಲವಾದರೂ ಇಂತಹ ವಿಗ್ರಹಗಳ ವಿಸರ್ಜನೆಗೆ ದೊಡ್ಡ ಕೆರೆಯ ಹತ್ತಿರ ಪ್ರತ್ಯೇಕ ಕೃತಕ ಹೊಂಡ ನಿರ್ಮಿಸುತ್ತಿದ್ದೇವೆ.
 ಸಂಗಪ್ಪ ಉಪಾಸೆ, ಪೌರಾಯುಕ್ತ ನಗರಸಭೆ

 ಅನೀಲ ಬಸೂದೆ

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.