ಸಗರನಾಡು ವಚನ ಸಾಹಿತ್ಯದ ಉಗಮ ಸ್ಥಾನ: ಕುಲಕರ್ಣಿ


Team Udayavani, Sep 9, 2018, 5:17 PM IST

yad-2.jpg

ಯಾದಗಿರಿ: ಬಸವಾದಿ ಶರಣರಿಗಿಂತ ಮುಂಚಿತವಾಗಿ 11ನೇ ಶತಮಾನದಲ್ಲೇ ವಚನಗಳನ್ನು ರಚಿಸಿ ವಚನ ವಸಂತದ
ಮುಂಗೋಳಿ ಎನಿಸಿದ ಮುದನೂರಿನ ದೇವರದಾಸಿಮಯ್ಯನವರು ಪ್ರಥಮ ವಚನಕಾರರು. ಕಾರಣ ಸಗರನಾಡು ವಚನ ವಸಂತದ ಉಗಮಸ್ಥಾನವಾಗಿದೆ ಎಂದು ಸಾಹಿತಿ ವೆಂಕಟರಾವ್‌ ಕುಲಕರ್ಣಿ ಹೇಳಿದರು.

ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ನಗರದ ಸರ್ವಜ್ಞ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಚನದಿನ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಅವರು ಮಾತನಾಡಿದರು. ವಚನ ಸಾಹಿತ್ಯ ಮತ್ತು ನಮ್ಮ ಭಾಗಕ್ಕೂ ಅವಿನಭಾವ ಸಂಬಂಧ ಇದೆ. ವಚನ ಸಾಹಿತ್ಯ ಕಟ್ಟಿ ಬೆಳೆಸುವಲ್ಲಿ ಬಸವಾದಿ ಶರಣರ ಜತೆಗೆ ಈ ಭಾಗದ ವಚನಕಾರರು, ಸೊಫಿ ಸಂತರು ಜತೆಗೆ ತತ್ವಪದಕಾರರ ಕೊಡುಗೆ ಅತ್ಯಂತ ಅಪಾರವಾಗಿದೆ. ವಚನ ಎಂದರೆ ಮಾತು, ಪ್ರಮಾಣ, ಸತ್ಯ ಎಂದು ಕರೆಯುತ್ತೇವೆ. ಶಿವಶರಣರು ಆಡಿದ  ಮಾತುಗಳೆಲ್ಲವು ವಚನಗಳಾದವು ನಡೆ ನುಡಿ ಒಂದಾಗಿಸಿಕೊಂಡು ಬದುಕಿದ ಅವರ ಬದುಕು ಮಾದರಿ ಎಂದು ಹೇಳಿದರು.

ಉಪನ್ಯಾಸ ನೀಡಿದ ಗಂಗಾಧರ ಬಡಿಗೇರ ಮಾತನಾಡಿ, 12ನೇ ಶತಮಾನವನ್ನು ಇತಿಹಾಸದಲ್ಲಿ ಸುವರ್ಣ ಯುಗ
ಎನ್ನುತ್ತಾರೆ, ಮಹಿಳಾ ಸ್ವಾತಂತ್ರ್ಯ, ಸರ್ವರಸಮಾನತೆ, ಮೌಡ್ಯ ವಿರೋಧಿ ಆಂದೋಲನ, ಸರ್ವರ ಶಿಕ್ಷಣ,
ಅಸ್ಪೃಶತೆ ನಿವಾರಣೆ ಸೇರಿದಂತೆ ಅನೇಕ ಕ್ರಾಂತಿಕಾರಕ ಘಟನೆಗಳಿಗೆ ಹೊಸ ಆಶಯ ಹುಟ್ಟಿಸಿದ ಯುಗವುದು. ಬಸವಾದಿ ಶರಣರು ಈ ನಾಡಿಗೆ ಬಳುವಳಿಯಾಗಿ ನೀಡಿದ ವಚನಸಾಹಿತ್ಯ ನಮ್ಮೆಲ್ಲರಿಗೂ ಆತ್ಮಬಲ ಜತೆಗೆ ನೈತಿಕಬಲ ತಂದುಕೊಡುತ್ತದೆ ಎಂದು ಹೇಳಿದರು.

ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ, ವಚನ ಸಂಶೋಧಕ ಫ.ಗು. ಹಳಕಟ್ಟಿ ಅವರ ಕೊಡುಗೆ ವಚನ ಸಾಹಿತ್ಯ ಲೋಕಕ್ಕೆ ಅಪಾರವಾಗಿದ್ದು, ಅವರ ಸಂಶೋಧನೆ, ಸಂಪಾದನೆ ಮತ್ತು ಸಂಗ್ರಹದಿಂದಲೇ ವಚನ ಸಾಹಿತ್ಯ ಸರ್ವರು ಅಧ್ಯಾಯನಮಾಡಲು ಸಹಕಾರಿಯಾಗಿದೆ ಎಂದು ಹೇಳಿದರು. 

ಜಿಲ್ಲಾ ಶರಣಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಯ್ಯಣ್ಣ ಹುಂಡೇಕಾರ, ಮಹಾದೇವಪ್ಪಗೌಡ ತುಮಕೂರು, ಪ್ರಮುಖರಾದ ಬಸವಂತ್ರಾಯಗೌಡ ಪಾಟೀಲ, ನೂರುಂದಪ್ಪ ಲೇವಡಿ, ಚನ್ನಪ್ಪ ಠಾಣಗುಂಡಿ, ತಮ್ಮಣಗೌಡ ಗೊಡಿಹಾಳ, ಡಾ| ಸಿದ್ರಾಮಪ್ಪ ತುಮಕೂರು, ಬಸವರಾಜ ಜೈನ್‌ ಇದ್ದರು.

ಡಾ| ಭೀಮರಾಯ ಲಿಂಗೇರಿ ಸ್ವಾಗತಿಸಿದರು. ರಿಯಾಜ್‌ ಪಟೇಲ್‌ ನಿರೂಪಿಸಿದರು. ವೆಂಕಟೇಶ ಕಲಕಂಬ ವಂದಿಸಿದರು.  

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.