ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ
Team Udayavani, Sep 10, 2018, 4:59 PM IST
ಯಾದಗಿರಿ: ಗುರುಮಠಕಲ್ ಮತಕ್ಷೇತ್ರದ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಲು ನಗರದ ತಾಪಂ ಕಚೇರಿಯ ಸಾಮರ್ಥ್ಯ ಸೌಧದಲ್ಲಿ ಜನಸಂಪರ್ಕ ಕಚೇರಿ ತೆರೆಯಲಾಗಿದೆ ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ
ಹೇಳಿದರು.
ಕಚೇರಿ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತಿಕುಣಿ, ಯರಗೋಳ, ಬಳಿಚಕ್ರ ಸೇರಿದಂತೆ ಮತಕ್ಷೇತ್ರದ ಜನರಿಗೆ ಗುರುಮಠಕಲ್ ಬಹಳ ದೂರ ಆಗುವುದರಿಂದ ಅವರಿಗೆ ಅನುಕೂಲ ಆಗುವ ದೃಷ್ಟಿಯಿಂದ ಯಾದಗಿರಿಯಲ್ಲಿ ಕಚೇರಿ ಆರಂಭಿಸಲಾಗಿದೆ ಎಂದರು.
ಮತಕ್ಷೇತ್ರದ ಅಭಿವೃದ್ಧಿಗಾಗಿ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಅಭಿವೃದ್ಧಿಗೆ
ಎಲ್ಲಾ ಕ್ರಮ ಕೈಗೊಳ್ಳಲಾಗುತ್ತಿದೆ. ಕೈಗಾರಿಕಾ ಪ್ರದೇಶಕ್ಕೆ ರೈತರು ಭೂಮಿ ನೀಡಿದ್ದು, ಇನ್ನೂ ಕೆಲ ರೈತರಿಗೆ ಪರಿಹಾರ
ದೊರೆತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲಾಗಿದ್ದು, ಆದಷ್ಟು ಬೇಗ
ರೈತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಗುರುಮಠಕಲ್ ಮತಕ್ಷೇತ್ರದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 6 ಎಕರೆ ಜಮೀನು ಬೇಕಾಗಿದ್ದು,
ಖಾಸಗಿಯವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದರು. ಪುರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಅದು ಸಹಜ ಪ್ರಕ್ರಿಯೆಯಾಗಿದೆ ಎಂದರು.
ಕಂದಕೂರ ಮನೆತನದ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರಿಗೆ
ಗೊತ್ತಿದೆ. ಅದಕ್ಕಾಗಿ ಅವರಿಗೆ ಯಾವುದೇ ಮಂತ್ರಿ ಸ್ಥಾನದ ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಯುವ ಉಪಾಧ್ಯಕ್ಷ ಶರಣಗೌಡ ಕಂದಕೂರು, ನ್ಯಾಯವಾದಿ ಎಸ್.ಬಿ.
ಪಾಟೀಲ, ಲಕ್ಷ್ಮರೆಡ್ಡಿ ಅನಪುರ. ನಿತ್ಯಾನಂದ ಸ್ವಾಮಿ ಹಂದ್ರಿಕಿ, ಅಜಯರೆಡ್ಡಿ ಎಲೇರಿ, ಬಾಲಪ್ಪ ನಿರೇಟಿ, ರಾಜಶೇಖರಗೌಡ ವಡಗೇರಾ, ಶಂಕ್ರಪ್ಪ ದಿಬ್ಟಾ, ಬಸವಂತರಾಯಗೌಡ ಸೈದಾಪುರ, ಸಿರಾಜ್ ಚಿಂತಕುಂಟಾ, ಕಿಷ್ಟಾರೆಡ್ಡಿ ಪೊಲೀಸ್ ಪಾಟೀಲ, ಸುರೇಶ ಅಲ್ಲಿಪುರ, ಸೂಗಪ್ಪ ಸಾಹು ಕಡೇಚೂರು, ತಾಯಪ್ಪ ಬದ್ದೆಪಲ್ಲಿ, ನರಸಪ್ಪ ಬದ್ದೆಪಲ್ಲಿ, ಜಿ. ತಮ್ಮಣ್ಣ, ಶರಣು ಅವಂಟಿ, ಪ್ರಕಾಶ ನಿರೇಟಿ, ಅಂಬ್ರೇಶ್ ರಾಠೊಡ ಸೇರಿದಂತೆ ಜೆಡಿಎಸ್ನ ಪ್ರಮುಖರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು