ವಾರ್ಡ್ ಜನರ ವಿಶ್ವಾಸದೊಂದಿಗೆ ಉತ್ತಮ ಕಾರ್ಯ ಕೈಗೊಳ್ಳಿ
Team Udayavani, Sep 21, 2018, 4:55 PM IST
ಯಾದಗಿರಿ: ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಆಯ್ಕೆಯಾಗಿರುವ ನೂತನ ನಗರಸಭೆ ಸದಸ್ಯರು ವಾರ್ಡ್ ಜನರ ವಿಶ್ವಾಸಗಳಿಸಿ ಉತ್ತಮ ಕಾರ್ಯಕೈಗೊಳ್ಳಬೇಕು ಎಂದು ಮಾಜಿ ಶಾಸಕ ಡಾ| ಎ.ಬಿ. ಮಾಲಕರೆಡ್ಡಿ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಗರಸಭೆ ಕಾಂಗ್ರೆಸ್ನ 11 ಸದಸ್ಯರಿಗೆ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಮೊದಲ ಬಾರಿಗೆ ಆರಿಸಿ ಬಂದವರು, ಸಾಕಷ್ಟು ಜವಾಬ್ದಾರಿಗಳನ್ನು ಅರಿಯಬೇಕಿದೆ. ಮೊದಲು ನಿಮ್ಮ ವಾರ್ಡ್ಗಳಲ್ಲಿ ಸಾರ್ವಜನಿಕರಿಗೆ ಬೇಕಿರುವ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪಗೌಡ ಮಲ್ಹಾರ ಮಾತನಾಡಿ, ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಇನ್ನೂ ಹೆಚ್ಚಿನ ಸ್ಥಾನ ಬರಬೇಕಿತ್ತು ಎಂದರು.
ಈ ವೇಳೆ ಕಾಂಗ್ರೆಸ್ ಸದಸ್ಯರಾದ ಗೌಸಿಯಾ ಬೇಗಂ, ಸವಿತಾ, ಚನ್ನಕೇಶವ ಗೌಡ, ವೆಂಕಟರೆಡ್ಡಿ, ಹುಜಮ ಫಾತೀಮಾ, ಶಾಂತಮ್ಮ, ಮಹಬೂಬ ಅಲಿ, ಗಣೇಶ ದುಪ್ಪಲ್ಲಿ, ಮನ್ಸೂರ ಅಹ್ಮದ, ಹಣಮಂತ ನಾಟೇಕರ್ ಹಾಗೂ ನಿರ್ಮಲಾ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀನಿವಾಸರೆಡ್ಡಿ ಕಂದಕೂರ, ಚನ್ನಾರೆಡ್ಡಿ ತುನ್ನೂರ, ಮರಿಗೌಡ ಪಾಟೀಲ ಹುಲಕಲ್, ಮಂಜುಳಾ ಗೂಳಿ, ಸುರೇಶ ಜೈನ್, ಮರೆಪ್ಪ ಬಿಳಾರ, ರವಿ ಮಾಲಿಪಾಟೀಲ, ಡಾ| ಸಗರಿ, ಡಾ| ರಫಿಕ್, ಶಶಿಧರರಡ್ಡಿ ಹೊಸ್ಸಳ್ಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ