ಗೂಂಡಾ ಸರ್ಕಾರಕ್ಕೆ ಪಾಠ ಕಲಿಸಿ
Team Udayavani, Sep 22, 2018, 5:39 PM IST
ಯಾದಗಿರಿ: ಗೂಂಡಾ ಸರ್ಕಾರಕ್ಕೆ ಪಾಠ ಕಲಿಸಬೇಕಾಗುತ್ತದೆ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡ ಪ್ರತಿಭಟನಾ ರ್ಯಾಲಿ ಮೂಲಕ ಸುಭಾಷ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಟೈರ್ಗೆ ಬೆಂಕಿ ಹಚ್ಚಿ ಸಿಎಂ ಕುಮಾರಸ್ವಾಮಿ ಹೇಳಿಕೆ, ಬಿಎಸ್ವೈ ಮನೆ ಎದುರು ನಡೆದ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ ಖಂಡಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ರಾಜ್ಯದ ಜನರು ದಂಗೆ ಏಳಿ ಎಂದು ಪ್ರಚೋದನೆ ನೀಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಮನೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿದ್ದು, ಇದಕ್ಕೆ ಮುಖ್ಯಮಂತ್ರಿ
ಅವರ ಪ್ರಚೋದನೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರವನ್ನು ಬಿಜೆಪಿಯವರ ಬೀಳಿಸಲು ಪ್ರಯತ್ನಿಸುತ್ತಿಲ್ಲ. ಅವರ ಶಾಸಕರ ಮೇಲೆಯೇ ಅವರಿಗೆ ನಂಬಿಕೆ ಇಲ್ಲ, ಹಾಗಾಗಿ ಬಿಜೆಪಿ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ. ಒಬ್ಬ ರಾಜ್ಯದ ಮುಖ್ಯಮಂತ್ರಿಯಾಗಿ ಇಂತಹ ಕೀಳು ಮಾತುಗಳನ್ನಾಡಬಾರದು ಎಂದು ದೂರಿದರು.
ಇದಕ್ಕೂ ಮುನ್ನ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಮಾತನಾಡಿ, ಕಾನೂನು ಸುವ್ಯವಸ್ಥೆ ಬಿಗಡಾಸಲು
ಕಾರಣರಾದ ಮುಖ್ಯಮಂತ್ರಿ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜ್ಯದ ಜನತೆಯಲ್ಲಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
ರಾಜ್ಯ ಉಪಾಧ್ಯಕ್ಷೆ ನಾಗರತ್ನಾ ಕುಪ್ಪಿ, ರಾಜ್ಯಕಾರ್ಯಕಾರಣಿ ಸದಸ್ಯ ಡಾ| ಶರಣಭೂಪಾಲರಡ್ಡಿ ನಾಯ್ಕಲ್, ನಗರಸಭೆ
ಸದಸ್ಯೆ ಲಲಿತಾ ಅನಪುರ, ಹಣಮಂತ ಇಟಗಿ, ಅಂಬಯ್ಯ ಶಾಬಾದಿ, ಸುರೇಶ ಅಂಬಿಗೇರ, ವಿಲಾಸ ಪಾಟೀಲ, ಮಾರುತಿ ಕಲಾಲ, ಹಸದ್ಬಿನ್ ಚಾಹುಷ್, ಎಸ್.ಪಿ. ನಾಡೇಕಾರ್, ಸ್ವಾಮಿದೇವ ದಾಸನಕೇರಿ, ದೇವಿಂದ್ರನಾಥ ನಾದ, ಶರಣಗೌಡ ಬಾಡಿಯಾಳ, ಸುರೇಶ ಆಕಳ, ಬಸವರಾಜ ಪಾಟೀಲ ಬಿಳಾØರ, ರವಿ ಬಾಪುರೆ, ವೆಂಕಟರಡ್ಡಿ ಅಬ್ಬೆತುಮಕೂರ, ಮಹೇಶ ಕುರಕುಂಬಳ, ದೇವೀಂದ್ರ ಯರಗೋಳ, ಸಿದ್ದು ಪೂಜಾರಿ, ಶಿವು ದೊಡ್ಮನಿ, ಶಿವು ಅಲ್ಲಿಪೂರ, ರಮೇಶ ದೊಡ್ಮನಿ , ಶರಣಗೌಡ ಕಾಳೆಬೆಳಗುಂದಿ, ಯಲ್ಲಾಲಿಂಗರಡ್ಡಿ ತಳಕ, ನಾಗಪ್ಪ ಗಚ್ಚಿನ್, ರವಿ ಮುದ್ನಾಳ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು