ಸ್ವತ್ಛತೆಗೆ ಆದ್ಯತೆ ನೀಡಿ: ಮುದ್ನಾಳ
Team Udayavani, Sep 24, 2018, 3:42 PM IST
ಯಾದಗಿರಿ: ಪ್ರತಿಯೊಬ್ಬರು ಸ್ವತ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು. ನಗರದ ವಾರ್ಡ್ ನಂ. 17 ಮತ್ತು 18ರಲ್ಲಿ ಸ್ವತ್ಛ ಭಾರತ ಅಭಿಯಾನದಡಿ ಏರ್ಪಡಿಸಿದ್ದ ಸ್ವತ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಸರ್ಕಾರ ಪ್ಲಾಸ್ಟಿಕ್ ನಿಷೇಧಿ ಸಿದ್ದರೂ ಬಳಕೆ ಮಾತ್ರ ನಿಲ್ಲುತ್ತಿಲ್ಲ ಎಂದು ವಿಷಾದ ವ್ಯಕ್ತ ಪಡಿಸಿದ ಅವರು, ಯಾವುದೇ ತ್ಯಾಜ್ಯ ವಸ್ತು ಚರಂಡಿಯಲ್ಲಿ ಹಾಕುವುದರಿಂದ ನೀರು ಸರಳವಾಗಿ ಹರಿಯುವುದು ನಿಂತು ಸೊಳ್ಳೆ ಉತ್ಪತ್ತಿಗೆ ಅವಕಾಶ ನೀಡಿದಂತಾಗುತ್ತದೆ ಎಂದು ತಿಳಿಸಿದರು.
ಮಾಜಿ ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ಮಾತನಾಡಿ, ನಗರ ಸ್ವತ್ಛವಾಗಿಡಲು ನಗರಸಭೆ ಜೊತೆಯಲ್ಲಿ ಸಾರ್ವಜನಿಕರು ಕೈ ಜೋಡಿಸಬೇಕು. ನಗರಸಭೆಯಲ್ಲಿ ಸ್ವತ್ಛತೆಗಾಗಿ ಹೆಚ್ಚಿನ ಒತ್ತು ನೀಡಲು ನಾವೆಲ್ಲರೂ ಕಂಕಣ ಬದ್ಧರಾಗಬೇಕು ಎಂದು ಹೇಳಿದರು.
ಸ್ವತ್ಛತಾ ಅಭಿಯಾನದಲ್ಲಿ ನಗರಸಭೆ ಸದಸ್ಯ ಹಣಮಂತ ಇಟಗಿ, ಮಂಜುನಾಥ ದಾಸನಕೇರಿ, ಬಸಮ್ಮ ಕುರಕುಂಬಳ, ರಾಮು ರಾಠೊಡ, ಸ್ವಾಮಿದೇವ ದಾಸನಕೇರಿ, ಎಸ್.ಪಿ. ನಾಡೇಕರ್, ಮಲ್ಲಿಕಾರ್ಜುನ ಕುರಕುಂಬಳ, ಮಹೇಶ ಕುರುಕುಂಬಳ, ಸಾಯಬಣ್ಣ ಸುಂಗುಲಕರ್, ಶರಣಗೌಡ ಬಾಡಿಯಾಳ, ವೆಂಕಟರೆಡ್ಡಿ ಅಬ್ಬೆತುಮಕೂರು, ದೇವೀಂದ್ರನಾಥ ನಾದ, ಸುರೇಶ ರಾಠೊಡ, ಮಹಾದೇವಪ್ಪ ಗಣಪುರ, ಪೌರಾಯುಕ್ತ ಸಂಗಪ್ಪ ಉಪಾಸೆ, ಮಲ್ಲಿಕಾರ್ಜುನ, ಬಲವಂತ ದಾಸನಕೇರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ