ಪುಟರಾಜ ಗವಾಯಿಗಳ ಕೊಡುಗೆ ಅಪಾರ
Team Udayavani, Sep 25, 2018, 3:38 PM IST
ಶಹಾಪುರ: ಪಂಡಿತ ಪಂಚಾಕ್ಷರಿ ಗವಾಯಿಗಳು ಅದ್ಭುತ ಸಾಧನೆ ಮೂಲಕ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಫಕೀರೇಶ್ವರ ಮಠದ ಗುರುಪಾದ ಶ್ರೀಗಳು ಹೇಳಿದರು. ನಗರದ ಫಕೀರೇಶ್ವರ ಮಠದ ಆವರಣದಲ್ಲಿ ಶ್ರೀಗುರು ಕೃಪಾ ಸಂಗೀತ ಸಾಂಸ್ಕೃತಿಕ ಕಲಾ ಸಂಸ್ಥೆ ಉದ್ಘಾಟನೆ ಮತ್ತು ಗದುಗಿನ ಗಾನಯೋಗಿ ಪಂಡಿತ ಪಂಚಾಕ್ಷರಿ ಅವರ 74ನೇ ಪುಣ್ಯಸ್ಮರಣೆ ಹಾಗೂ ಡಾ| ಪುಟ್ಟರಾಜ ಗವಾಯಿ ಅವರ 8ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಅಂಧ ಗುರು ಅಂಧ ಶಿಷ್ಯರಿಬ್ಬರೂ ಸಂಗೀತ ಮೂಲಕ ಜಗತ್ತನ್ನೆ ಬೆಳಗುತ್ತಾರೆ ಎಂದು ಗೊತ್ತಿರಲಿಲ್ಲ. ಪುಟ್ಟಯ್ಯನವರು 8 ವರ್ಷದ ಬಾಲಕನಿರುವಾಗ ಪಂಡಿತ ಪಂಚಾಕ್ಷರಿ ಮಡಿಲಿಗೆ ಒಪ್ಪಿಸಿದರಂತೆ, ಅಂಧ ಗುರು ಅಂಧ ಶಿಷ್ಯನನ್ನು ಪಡೆದು ಸಂಗೀತ ಮೂಲಕ ಜನರನ್ನು ಗೆಲ್ಲುತ್ತಾರೆ. ಇದು ಸರ್ವರಿಗೂ ಮಾದರಿಯಾಗಿದೆ ಎಂದರು.
ಪುಟ್ಟರಾಜರು ಕರ್ನಾಟಕ, ಹಿಂದೂಸ್ಥಾನಿ, ಟಬಲಾ, ಹಾರ್ಮೋನಿಯಂ, ಸಾರಂಗಿ ಮತ್ತು ಶಹನಾಯಿಗಳಲ್ಲಿ ಪರಿಣತ ಪಡೆದರು. ಮುಂದೆ ಅವರ ಸಂಗೀತ ಲೋಕ ಕಂಡು ಜನ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ ಅವರ ನಿತ್ಯ ಶ್ರದ್ಧಾ ಭಕ್ತಿ ಅವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ. ಶರಣ ಸಂತರಂತೆ ಅವರ ಬದುಕಾಗಿತ್ತು. ಹೀಗಾಗಿ ಜನ ಅವರನ್ನು ಕಂಡು ಭಕ್ತಿಪೂರ್ವಕ ಕೈ ಮುಗಿಯುತ್ತಿದ್ದರು ಎಂದರು.
ಈ ಸಂದರ್ಭದಲ್ಲಿ ಚ.ಬ. ಸಂಸ್ಥಾನ ಬಸವಯ್ಯ ಶರಣರು ನೇತೃತ್ವ ವಹಿಸಿದ್ದರು. ವೀರಶೈವ ಸಮಾಜದ ಬಸವರಾಜೇಂದ್ರ ದೇಶಮುಖ ಅಧ್ಯಕ್ಷತೆ ವಹಿಸಿದ್ದರು. ಡಾ| ಶರಣು ಗದ್ದುಗೆ ಪ್ರಾಸ್ತವಿಕವಾಗಿ ಮಾತನಾಡಿದರು. ಮುಖಂಡ ಮಲ್ಲಣ ಮಡ್ಡಿ, ಚಂದ್ರಶೇಖರ ಆರಬೋಳ, ಸಿದ್ಲಿಂಗಪ್ಪ ಆನೇಗುಂದಿ, ಬಸವರಾಜ ಹಿರೇಮಠ, ಗುಂಡಪ್ಪ ತುಂಬಗಿ, ಅಡಿವೆಪ್ಪ ಜಾಕಾ, ಬಸವರಾಜ ಆನೇಗುಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ