ಬೂದೂರು ಜನರ ಅಳಲು ಕೇಳ್ಳೋರಿಲ್ಲ


Team Udayavani, Oct 6, 2018, 2:50 PM IST

yad-3.jpg

ಗುರುಮಠಕಲ್‌: ಕಾಕಲವಾರ ಗ್ರಾಪಂ ವ್ಯಾಪ್ತಿಯ ಬೂದೂರು ಜನರು ಮೂಲ ಸೌಕರ್ಯಗಳಿಲ್ಲದೇ ತತ್ತರಿಸಿ ಹೋಗಿದ್ದಾರೆ. ಗ್ರಾಮದಲ್ಲಿ ಕುಡಿಯಲು ನೀರು, ನಡೆದಾಡಲು ರಸ್ತೆ, ಮಹಿಳಾ ಶೌಚಾಲಯ, ವಿದ್ಯುತ್‌ ಸೇರಿ ಹಲವು ಸಮಸ್ಯೆಗಳಲ್ಲಿಯೂ ಜೀವನ ಸಾಗಿಸುತ್ತಿದ್ದು, ಅಧಿಕಾರಿ ಹಾಗೂ ಜನಪ್ರತಿನಿಧಿ ಗಳಿಗೆ ಇವರ ಅಳಲು ಕೇಳದಂತಾಗಿದೆ.

ಗ್ರಾಮದಲ್ಲಿ ಮಹಿಳೆಯರಿಗೆ ಶೌಚಾಲಯ ಇಲ್ಲದೇ ಬಯಲಿಗೆ ತೆರಳುವುದು ಅನಿವಾರ್ಯವಾಗಿಬಿಟ್ಟಿದೆ. ಮಳೆಗೆ
ನಿರುಪಯುಕ್ತ ಗಿಡಗಳು ಬೆಳೆದಿರುವುದು ವಿಷ ಜಂತುಗಳ ಭಯಕ್ಕೆ ಮಹಿಳೆಯರು ಆತಂಕ ವ್ಯಕ್ತಪಡಿಸುತ್ತಿದಾರೆ. ಗ್ರಾಮದಲ್ಲಿ ಕನಿಷ್ಠ ಪಕ್ಷ ಮಹಿಳೆಯರಿಗೆ ಶೌಚಾಲಯ ನಿರ್ಮಿಸುವ ಕೆಲಸ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಸಮರ್ಪಕ ರಸ್ತೆಗಳಿಲ್ಲದಿರುವುದು, ಚರಂಡಿ ಅವ್ಯವಸ್ಥೆಯಿಂದ ಕೂಡಿರುವುದರಿಂದ ಗ್ರಾಮದ ಸರಕಾರಿ ಶಾಲೆಗೆ ತೆರಳುವ ಮಾರ್ಗದಲ್ಲಿ ಸಂಪೂರ್ಣ ಚರಂಡಿ ನೀರು ಹರಿದು ನಡೆದಾಡಲು ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಟಾಚಾರಕ್ಕೆ ಎಂಬಂತೆ ಅರ್ಧ ರಸ್ತೆ ನಿರ್ಮಿಸಿ ಬಿಟ್ಟಿರುವುದು ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. 

ಗ್ರಾಮದಲ್ಲಿ ರಸ್ತೆಗಳು ಹಾಗೂ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದು ಮಾರ್ಗದಲ್ಲೆಲ್ಲ ಚರಂಡಿ ನೀರು ಹರಿಯುತ್ತಿದ್ದು, ನಡೆದಾಡಲು ರಸ್ತೆಗಳೇ ಇಲ್ಲದಂತಾಗಿದೆ. ಗ್ರಾಮಸ್ಥರು ಕೊಳಚೆ ನೀರಿನಲ್ಲಿ ನಡೆದಾಡುತ್ತಿದ್ದಾರೆ. ಚರಂಡಿ ನೀರು
ನಿಂತು ಸೊಳ್ಳೆಗಳು ಉತ್ಪತ್ತಿಯಾಗಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಿಸುವಂತಾಗಿದೆ.

ಗ್ರಾಮದ ಹೊರವಲಯದಲ್ಲಿ ಸುಮಾರು 6 ವರ್ಷಗಳ ಹಿಂದೆ ವಿದ್ಯುತ್‌ ಪರಿವರ್ತಕ ಕೂಡಿಸಲಾಗಿದೆ. ಆದರೆ ಗ್ರಾಮಕ್ಕೆ ಬೆಳಕು ನೀಡುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಕ್ಕೆ ಜಿಡ್ಡಾಗಿ ಅಂಟಿರುವ ಸಮಸ್ಯೆಗಳನ್ನು ಶೀಘ್ರವೇ ಸಂಬಂಧಿಸಿದ ಅಧಿಕಾರಿಗಳು ನಿವಾರಿಸಲು ಮುಂದಾಗಬೇಕು ಎಂದು ನರಸಿರೆಡ್ಡಿ ಪಾಟೀಲ, ಆಶಪ್ಪ ಮನ್ನೆ, ರಾಜು ರೆಡ್ಡಿ ಆರಕೇರಿ, ವಿಶ್ವನಾಥ ಬಡಿಗೇರಿ, ನಾಗೇಶ ಆಗ್ರಹಿಸಿದ್ದಾರೆ. 

„ಚನ್ನಕೇಶವುಲು ಗೌಡ

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.