ಮೂಲ ಸೌಕರ್ಯ ವಂಚಿತ ಕೇಶ್ವಾರ


Team Udayavani, Oct 8, 2018, 2:54 PM IST

yad-1.jpg

ಗುರುಮಠಕಲ್‌: ಸಮೀಪದ ಕೇಶ್ವಾರ ಗ್ರಾಮದಲ್ಲಿ ಸ್ವತ್ಛತೆ ಮರೀಚಿಕೆಯಾಗಿದ್ದು, ಗ್ರಾಮದಲ್ಲಿ ಸಂಚರಿಸಲು ಕಷ್ಟದ ವಾತಾವರಣ ನಿರ್ಮಾಣವಾಗಿದ್ದರಿಂದ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಹಲವು ದಿನಗಳಿಂದ ಚರಂಡಿ ತುಂಬಿವೆ. ಕಸ ತೆಗೆದು ಖಾಲಿ ಮಾಡಿ ಅಂತ ಹೇಳಿದರೂ ಯಾರೊಬ್ಬರೂ ಮನವಿಗೆ ಸ್ಪಂದಿಸುತ್ತಿಲ್ಲ. ಗಬ್ಬು ವಾಸನೆ, ಸೊಳ್ಳೆಗಳ ಕಾಟದಿಂದ ರೋಗಗಳು ಹರಡುವ ಆತಂಕದಲ್ಲಿ ಜೀವಿನ ಕಳೆಯುತ್ತಿದ್ದೇವೆ. ಯಾರು ಸ್ಪಂದಿಸದ ಕಾರಣ ಕೊನೆಗೆ ನಾವೇ ಚರಂಡಿ ಸ್ವತ್ಛಗೊಳಿಸಿಕೊಂಡಿದ್ದೇವೆ. ಆದರೆ ಚರಂಡಿಯಿಂದ ತೆಗೆದ ಹೂಳು ಮತ್ತೆ ಚರಂಡಿಗೇ ಬೀಳುತ್ತಿದೆ ಎನ್ನುತ್ತಾರೆ ಗ್ರಾಮಸ್ಥರಾದ ಬಸಪ್ಪ ಅರಿಕೇರಿ.

ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯೇ ಚರಂಡಿಯಾಗಿದೆ. ಹಲವಾರು ಬಾರಿ ಈ ಕುರಿತು ಗ್ರಾಪಂ ಗಮನಕ್ಕೆ ತಂದಿದ್ದೇವೆ. ಆದರೆ ಮನವಿ ಮಾಡಿದ ಪ್ರತಿ ಬಾರಿಯೂ ಕುಂಟು ನೆಪ ಹೇಳುತ್ತಾರೆ. ರಸ್ತೆಯೇ ಕೆಸರು ಗದ್ದೆಯಾಗಿದ್ದು, ಚಿಕ್ಕ ಮಕ್ಕಳು ಇದರಿಂದ ಸದಾ ಅನಾರೋಗ್ಯದ ಸಮಸ್ಯೆಯಿಂದ ಬಳಲು ಕಾರಣ ಆಗುತ್ತಿದೆ. ನಮ್ಮ ಕಷ್ಟ ಯಾರು ಆಲಿಸುತ್ತಿಲ್ಲ ಎಂದು ಗ್ರಾಮದ ಮಹದೇವಮ್ಮ ಅಳಲು ತೋಡಿಕೊಂಡಿದ್ದಾರೆ.

ಗ್ರಾಮದ ಪುಟಪಾಕ್‌ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯದ ಸುತ್ತಲೂ ಮುಳ್ಳು ಪೊದೆ ತುಂಬಿದ್ದು, ಬಳಕೆಗೆ
ಬಾರದಂತಹ ಸ್ಥಿತಿಗೆ ತಲುಪಿರುವುದರಿಂದ ಮಹಿಳೆಯರು ಬಯಲಿನಲ್ಲಿಯೇ ಶೌಚ ಹೋಗುವ ಅನಿವಾರ್ಯತೆಯಲ್ಲಿದ್ದಾರೆ. ನಮ್ಮ ಸಮಸ್ಯೆ ಯಾರೂ ಕೇಳವರು ಇಲ್ಲ ಎಂದು ಗ್ರಾಮಸ್ಥರಾದ ಅನಂತಮ್ಮ, ಲಕ್ಷ್ಮಮ್ಮ, ಯಲ್ಲಮ್ಮ ಹಾಗೂ ನವಿತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಕೇಶ್ವಾರ ತಾಂಡಾ ರಸ್ತೆಗಿರುವ ಭಾಗದ ಮನೆಗಳಿಗೆ ವಿದ್ಯುತ್‌ ಕಂಬಗಳಿಲ್ಲದೆ ಸಂಪರ್ಕದ ಸಮಸ್ಯೆ ಇದೆ. ಈ ಕುರಿತು ಗ್ರಾಪಂಗೆ ಮನವಿ ಮಾಡಿದರೆ ಜೆಸ್ಕಾಂ ಅಧಿಕಾರಿಗಳನ್ನು ಕೇಳುವಂತೆ ಹೇಳುತ್ತಾರೆ. ಜೆಸ್ಕಾಂ ಅಧಿಕಾರಿಗಳು ಗ್ರಾಪಂಗೆ ಕೇಳುವಂತೆ ಹೇಳುತ್ತಾರೆ. ಅತ್ತ ಅವರೂ ಸ್ಪಂದಿಸುವುದಿಲ್ಲ. ಇತ್ತ ಇವರೂ ಕ್ಯಾರೆ ಎನ್ನುವುದಿಲ್ಲ.
 ತಿಪ್ಪಣ್ಣ, ಸ್ಥಳೀಯ ಸಿವಾಸಿ

ಮನವಿ ಮಾಡಿ ಆರು ತಿಂಗಳಾದರೂ ಚರಂಡಿಗಳಲ್ಲಿ ತುಂಬಿದ್ದ ಕಸ, ಕೆಸರನ್ನು ಸ್ವತ್ಛ ಮಾಡುತ್ತಿಲ್ಲ. ಸೊಳ್ಳೆಗಳ ಕಾಟ, ಗಬ್ಬುವಾಸನೆಯಿಂದ ಜೀವನ ಸಾಕಾಗಿದೆ.
 ಅನಂತಮ್ಮ, ಸ್ಥಳೀಯ ನಿವಾಸಿ

ಮನೆಗಳಲ್ಲಿ ಶೌಚಾಲಯ ಇದ್ದರೂ ಜನರು ಬಯಲಿಗೆ ಹೋಗುವುದು ಮುಂದುವರೆದಿದೆ. ಜನರಲ್ಲಿ ಜಾಗೃತಿ ಮೂಡುವವರೆಗೂ ಹೀಗೆ ಆಗುತ್ತದೆ. ಗ್ರಾಮಕ್ಕೊಂದು ಹೊಸ ನೀರಿನ ಟ್ಯಾಂಕ್‌ ಕಟ್ಟಿಸಿಕೊಡುವಂತೆ ಗ್ರಾಪಂಗೆ ಮನವಿ ಸಲ್ಲಿಸಲಾಗಿದೆ. 
 ಬ್ರಹ್ಮಾನಂದರೆಡ್ಡಿ, ಗ್ರಾಪಂ ಸದಸೆ

„ಚನ್ನಕೇಶವುಲು ಗೌಡ

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.