ಕೊಳೆಗೇರಿ ಪ್ರದೇಶಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ


Team Udayavani, Oct 8, 2018, 3:12 PM IST

yad-2.jpg

ಯಾದಗಿರಿ: ಕೇಂದ್ರ ಸರ್ಕಾರ ಸ್ಮಾರ್ಟ್‌ ಸಿಟಿ ಯೋಜನೆ ಜಾರಿಗೆ ತಂದು ಉಳ್ಳವರಿಗೆ ಸಕಲ ಸೌಕರ್ಯ ಕಲ್ಪಿಸಲು ಎಲ್ಲರಿಂದಲೂ ತೆರಿಗೆ ವಸೂಲಿ ಮಾಡುತ್ತಿದೆ ಎಂದು ಸ್ಲಂ ಜನಾಂದೋಲದ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಹೇಳಿದರು.

ನಗರದ ಎನ್‌ವಿಎಂ ಸಭಾಂಗಣದಲ್ಲಿ ಕರ್ನಾಟಕ ಸ್ಲಂ ಜನಾಂದೋಲನ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆಯಿಂದ ನಗರಾಭಿವೃದ್ಧಿ ಯೋಜನೆಗಳು ಮತ್ತು ವಿವಿಧ ಸರ್ಕಾರದ ವಸತಿ ಯೋಜನೆಗಳು ಹಾಗೂ ಸಂಘಟನೆ ಬಲಿಷ್ಠತೆಗಾಗಿ ಕಾರ್ಯಕರ್ತರಿಗೆ ಜವಾಬ್ದಾರಿ ಕುರಿತು ಆಯೋಜಿಸಿದ್ದ ವಿಭಾಗ ಮಟ್ಟದ ಅಧ್ಯಯನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಕೊಳೆಗೇರಿ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರಗಳು ಯಾವುದೇ ದೂರದೃಷ್ಟಿಯಿಂದ ಕಾರ್ಯಯೋಜನೆ ರೂಪಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರ ಅವರು, ಗ್ರಾಮೀಣ ಭಾಗದಲ್ಲಿ ಜನರು ಹೊಟ್ಟೆ ತುಂಬಿಸಿಕೊಳ್ಳಲು ಕೂಲಿ ಕೆಲಸ ಇಲ್ಲದೆ ಬಹಿಷ್ಕರಿಸಲ್ಪಟ್ಟರುವರು ಗ್ರಾಮದಿಂದ ನಗರಗಳತ್ತ ಮುಖ ಮಾಡುತ್ತಿದ್ದಾರೆ. ದುಡಿತಕ್ಕೆ ಸಮಾನ ಕೂಲಿಯೂ ಸಿಗದಿರುವುಕ್ಕೆ ಸ್ಲಂಗಳ ನಿರ್ಮಾಣವಾಗುತ್ತಿವೆ ಎಂದು ಖಂಡಿಸಿದರು.

ಪ್ರಸಕ್ತ ದೇಶದಲ್ಲಿ ನಗಾರಾಭಿವೃದ್ಧಿಯು ಶೇ. 26ರಷ್ಟು ವೇಗದಲ್ಲಿದೆ. 2030ರ ವೇಳೆಗೆ ದೇಶದಲ್ಲಿ ಶೇ. 50ರಷ್ಟು ವೇಗ ಪಡೆಯಲಿದೆ ಎಂದು ವಿಶ್ವ ಬ್ಯಾಂಕ್‌ ಹೇಳಿದ್ದು, ದೇಶದಲ್ಲಿ 69 ಲಕ್ಷ ಜನರಿಗೆ ಮನೆಯಿಲ್ಲ. ಬಡತನ ಹೆಚ್ಚಳದಿಂದಲೇ ಅಭಿವೃದ್ಧಿ ಕುಂಟಿತವಾಗುತ್ತಿದ್ದು, ಪ್ರಧಾನಿ ಮೋದಿ ಅವರು 2022ರ ವೇಳೆಗೆ ಸರ್ವರಿಗೆ ಸೂರು ಒದಗಿಸುವ ಮಾತು ಹೇಳುತ್ತಾರೆಂದರು.

ನಗರಾಭಿವೃದ್ಧಿ ಯೋಜನೆ ಕುಡಿಯುವ ನೀರು, ಒಳಚರಂಡಿ, ಘನತ್ಯಾಜ್ಯ ನಿರ್ವಹಣೆಯ ಯೋಜನೆಗಳು ಪಕ್ಷ, ರಾಜಕಾರಣಿ, ಅಧಿಕಾರಿಗಳ ಜೇಬು ತುಂಬಲು ಹುಲ್ಲುಗಾವಲು ಪ್ರದೇಶವಾಗಿದೆ ಎಂದರು. ನಮಗೆ ಬೇಕಿರುವ ಸೌಕರ್ಯಗಳನ್ನು ಪಡೆಯುವದಕ್ಕೆ ಹೋರಾಟ ಅಗತ್ಯವಾಗಿದ್ದು, ಕಾರ್ಯಕರ್ತರು ಹೋರಾಟ ರೂಪರೇಷೆಗಳನ್ನು ಅರಿಯಬೇಕಿದೆ ಎಂದರು.

ಯಾದಗಿರಿ ನಗರಸಭೆ ಕಚೇರಿ ವ್ಯವಸ್ಥಾಪಕ ಮಲ್ಲಿಕಾರ್ಜುನ ಎಚ್‌. ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ 52 ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಮನೆ ನಿರ್ಮಿಸಲಾಗಿದೆ. ನಗರದಲ್ಲಿ ಹಲವು ಯೋಜನೆಗಳ ಅನುಷ್ಠಾನ ಮಾಡಿರುವ ಕುರಿತು ಮಾಹಿತಿ ನೀಡಿದರು.
 
ಕೊಳೆಗೇರಿ ಮಂಡಳಿಯ ಅಧಿಕಾರಿ ಮೊ. ಯುಸೂಫ್‌ ಮಾತನಾಡಿ, ಯಾದಗಿರಿ, ಕಲಬುರಗಿ, ಬೀದರ ಹಾಗೂ ರಾಯಚೂರು ವ್ಯಾಪ್ತಿಯಲ್ಲಿ ಒಟ್ಟು 2,752ರಷ್ಟು ಮನೆಗಳು ಪ್ರಧಾನ ಮಂತ್ರಿ ಆವಾಜ ಯೋಜನೆಯಡಿ ಮಂಜೂರಾಗಿದ್ದು, ಕೆಲವೆಡೆ ಕಾಮಗಾರಿ ಪ್ರಾರಂಭವಾಗಿದ್ದರೆ, ಇನ್ನು ಕೆಲವೆಡೆ ಪ್ರಾರಂಭ ಹಂತದಲ್ಲಿದೆ ಎಂದು ವಿವರಿಸಿದರು.

ಬಿಎಸ್‌ಪಿ ಜಿಲ್ಲಾಧ್ಯಕ್ಷ ಎಂ.ಆರ್‌. ಬೇರಿ ಮತನಾಡಿದರು. ಜನಾರ್ಧನ ಅಳ್ಳಿಬಿಂಚಿ, ಹಣಮಂತ ಶಹಾಪೂರಕರ, ರೇಣುಕಾ ಸರಡಗಿ ವೇದಿಕೆಯಲ್ಲಿದ್ದರು. ಗಣೇಶ ಕಾಂಬಳೆ ನಿರೂಪಿಸಿದರು. ಕಲಬುರಗಿ ಮತ್ತು ರಾಯಚೂರಿನ ಹಲವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.