ಭೀಮಾನದಿ ಪುಷ್ಕರದಲ್ಲಿ ಮಿಂದೆದ್ದ ಸಾರ್ವಜನಿಕರು
Team Udayavani, Oct 20, 2018, 4:55 PM IST
ಯಾದಗಿರಿ: ನಗರಕ್ಕೆ ಹತ್ತಿರ ಇರುವ ಗುಲಸರಂ ಬ್ರಿಡ್ಜ್ ಕಂ ಬ್ಯಾರೇಜ್ನಲ್ಲಿ ನಡೆಯುತ್ತಿರುವ ಭೀಮಾನದಿ ಪುಷ್ಕರ ಮೇಳದಿಂದ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡುವ ಜೊತೆಗೆ ಅವರಲ್ಲಿ ಸಾಮರಸ್ಯ ಮೂಡಿದೆ ಎಂದು ಮಾಜಿ ಶಾಸಕ ಡಾ|ವೀರಬಸವಂತರೆಡ್ಡಿ ಮುದ್ನಾಳ ಹೇಳಿದರು.
ಶುಕ್ರವಾರ ಪುಷ್ಕರ ಮೇಳಕ್ಕೆ ದಂಪತಿ ಸಮೇತ ಭೇಟಿ ನೀಡಿ, ಜಿಲ್ಲಾ ಕಮ್ಮ ಜನ ಸೇವಾ ಸಮಿತಿ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಮಿತಿಯವರು ಮೇಳದಲ್ಲಿ ಪ್ರತಿಯೊಂದು ಹಂತದಲ್ಲಿ ಶಿಸ್ತು, ಪರಿಸರ ಸ್ವತ್ಛತೆ ಜೊತೆಗೆ ದಾಸೋಹ ನಿರ್ವಹಣೆ ಮಾಡಿರುವುದು ಇತರರಿಗೆ
ಮಾರ್ಗದರ್ಶನವಾಗಿದೆ ಎಂದು ಶ್ಲಾಘಿಸಿದರು.
ನೆರೆ ರಾಜ್ಯದ ಭಕ್ತರು ಭಾಗಿ: ವಿಜಯ ದಶಮಿ ಹಿನ್ನೆಲೆಯಲ್ಲಿ ರಾಜ್ಯ, ಹೊರ ರಾಜ್ಯದ ನೂರಾರು ಭಕ್ತರು ಭೀಮಾ ಪುಷ್ಕರದಲ್ಲಿ ಪುಣ್ಯಸ್ನಾನ ಮಾಡಿದರು. ಹಬ್ಬದ ದಿನವಾಗಿದ್ದರಿಂದ ನೆರೆಯ ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದ ಭಕ್ತರು ಗಂಗೆಯಲ್ಲಿ ಮಿಂದೆದ್ದರು.
ಈ ಸಂದರ್ಭದಲ್ಲಿ ಡಾ| ಸಂಗಮ್ಮರಡ್ಡಿ ಮುದ್ನಾಳ, ಲಿಲಾಕೃಷ್ಣರಾವ್, ವೈ. ಪ್ರಸಾದ, ಪೂರ್ಣಬಾಬು ನಾಯ್ಕಲ್, ವಾಣಿ ಶಿರಿಷಾ, ಲಲಿತಾದೇವಿ, ಶ್ರೀಲತಾ, ಕವಿತಾ, ಜ್ಯೋತಿ, ಶ್ರೀನಿವಾಸ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ