ವೈಯಕ್ತಿಕ ಶೌಚಾಲಯ ಬಳಕೆ ಕಡ್ಡಾಯ


Team Udayavani, Oct 26, 2018, 10:26 AM IST

gul-4.jpg

ಯಾದಗಿರಿ: ಸಾಮಾನ್ಯವಾಗಿ ಯಾವುದೇ ಕೆಲಸ ಮಾಡಲು ಕೈ ಉಪಯೋಗ ಆಗುತ್ತವೆ. ಆದ್ದರಿಂದ ಊಟ, ಹಣ್ಣು ಸೇರಿದಂತೆ ಯಾವುದೇ ಪದಾರ್ಥ ಸೇವಿಸುವ ಮೊದಲು ಕೈ ತೊಳೆಯಬೇಕು. ಇದರಿಂದ ಉತ್ತಮ ಆರೋಗ್ಯ ಲಭಿಸುತ್ತದೆ ಎಂದು ಜಿಪಂ ಸಿಇಒ ಕವಿತಾ ಎಸ್‌. ಮನ್ನಿಕೇರಿ ಹೇಳಿದರು.

ಭೀಮಾನದಿ ತೀರದ ಪುಷ್ಕರ ಉತ್ಸವ ಸ್ಥಳದಲ್ಲಿ ಗುರುವಾರ ಜಿಲ್ಲಾ ಪಂಚಾಯತ್‌ ವತಿಯಿಂದ ಸ್ವತ್ಛ ಭಾರತ ಮಿಷನ್‌ ಯೋಜನೆಯಡಿ ಏರ್ಪಡಿಸಿದ್ದ ವಿಶ್ವ ಕೈ ತೊಳೆಯುವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಂದಿನ ಮಕ್ಕಳು ನಮ್ಮ ದೇಶದ ಮುಂದಿನ ಭವಿಷ್ಯವಾಗಿದ್ದಾರೆ. ಹಾಗಾಗಿ, ವಿದ್ಯಾರ್ಥಿಗಳು ಕೈ ತೊಳೆಯುವುದನ್ನು ಹಾಸ್ಯದ ರೂಪದಲ್ಲಿ ತೆಗೆದುಕೊಳ್ಳದೇ ಗಂಭೀರವಾಗಿ ತೆಗೆದುಕೊಂಡು ತಮ್ಮ ಕುಟುಂಬದವರಿಗೂ ತಿಳಿವಳಿಕೆ ನೀಡಬೇಕು ಎಂದು ಸಲಹೆ ನೀಡಿದರು.

ಕೈ ತೊಳೆಯುವ ವಿಧಾನ ಕುಟುಂಬದವರಿಗೆ, ಅಕ್ಕ ಪಕ್ಕದ ಮನೆಯವರಿಗೆ ಹಾಗೂ ತಮ್ಮ ಗ್ರಾಮಗಳ ಸಾರ್ವಜನಿಕರಿಗೆ ತಿಳಿಸಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ವೈಯಕ್ತಿಕ ಶೌಚಾಲಯ ಬಳಸಬೇಕು ಎಂದು ಸಲಹೆ ನೀಡಿದ ಅವರು, ಕಾರ್ಯಕ್ರಮ ಆಯೋಜಿಸಲು ವೇದಿಕೆ ಕಲ್ಪಿಸಿದ ಭೀಮಾ ಪುಷ್ಕರ ಸೇವಾ ಸಮಿತಿಗೆ ಕೃತಜ್ಞತೆ ತಿಳಿಸಿದರು.

ಜಿಲ್ಲಾ ಪಂಚಾಯತ್‌ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕಿಶನ್‌ ರಾಠೊಡ ಮಾತನಾಡಿ, ಮನೆಯಲ್ಲಿ ಶೌಚಕ್ಕೆ ಹೋಗಿ ಬಂದ ಮಗುವನ್ನು ಶುಚಿಗೊಳಿಸುವ ಮಹಿಳೆಯರು ಸಾಬೂನಿನಿಂದ ಕೈ ತೊಳೆಯುವುದಿಲ್ಲ. ನಂತರ ಅದೇ ಕೈಗಳಿಂದ ಅಡುಗೆ ಸಿದ್ಧಪಡಿಸುವುದರಿಂದ ಆಹಾರದಲ್ಲಿ ಕೀಟಾಣು ಸೇರಿಕೊಂಡು ತಮಗಷ್ಟೇ ಅಲ್ಲದೆ, ಕುಟುಂಬದವರಿಗೂ ಕಾಯಿಲೆ ಹರಡುವ ಸಂಭವ ಇರುತ್ತದೆ. ಈ ಬಗ್ಗೆ ಎಚ್ಚರ ವಹಿಸಬೇಕು. ಮನೆ ಸುತ್ತಮುತ್ತ ಎಲ್ಲೆಂದರಲ್ಲಿ ಶೌಚ ಮಾಡುವುದರಿಂದ ಪ್ರಾಣಿ, ಪಕ್ಷಿ, ಕೀಟಗಳಿಂದ ಆ ಶೌಚ ಮನೆಯ ಆಹಾರಗಳನ್ನು ಸೇರಿಕೊಳ್ಳುತ್ತದೆ. ಆದ್ದರಿಂದ ಎಲ್ಲರೂ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡು ಬಳಸಬೇಕು ಎಂದು ಸಲಹೆ ನೀಡಿದರು.

ಸ್ವತ್ಛ ಭಾರತ ಮಿಷನ್‌ ಜಿಲ್ಲಾ ವ್ಯವಸ್ಥಾಪಕ ಪ್ರಶಾಂತ ಪ್ರಾಸ್ತಾವಿಕವಾಗಿ ಮಾತನಾಡಿ, ಸರಿಯಾಗಿ ಕೈ ತೊಳೆಯದೆ ಇರುವುದರಿಂದ ಆಹಾರ ಸೇವನೆಯ ಸಂದರ್ಭದಲ್ಲಿ ಕೀಟಾಣುಗಳು ದೇಹ ಸೇರುತ್ತವೆ. ಇದರಿಂದ ಅತಿಸಾರ, ಭೇದಿ, ಅಪೌಷ್ಟಿಕತೆ ಉಂಟಾಗುತ್ತದೆ. ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಲು 2008 ರಿಂದ ಪ್ರತಿವರ್ಷ ಅಕ್ಟೋಬರ್‌ 15ರಂದು ವಿಶ್ವ ಕೈ ತೊಳೆಯುವ ದಿನ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಪಂ ಅಧ್ಯಕ್ಷ ಬಸರೆಡ್ಡಿಗೌಡ ಮಾಲಿಪಾಟೀಲ ಅನಪುರ ಕೈ ತೊಳೆದುಕೊಳ್ಳುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಲಿಕಾ ಸಂಸ್ಥೆಯ ಧನಲಕ್ಷ್ಮೀ ಮತ್ತು ರೇಖಾ ಅವರು ಸಮಾರಂಭದಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಕೈ ತೊಳೆಯುವ ವಿಧಾನ ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷೆ ಚಂದ್ರಕಲಾ ಶರಣಗೌಡ ಹೊಸಮನಿ, ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ವಸಂತರಾವ್‌ ವಿ. ಕುಲಕರ್ಣಿ, ಭೀಮಾ ಪುಷ್ಕರ ಸೇವಾ ಸಮಿತಿ ಅಧ್ಯಕ್ಷ ಲೀಲಾಕೃಷ್ಣ ಹಾಗೂ ಜಿಪಂ ಸದಸ್ಯರು ಇದ್ದರು.

ಕಾರ್ಯಕ್ರಮದಲ್ಲಿ ಸ್ವತ್ಛ ಭಾರತ ಮಿಷನ್‌ ಸಮಾಲೋಚಕ ವೆಂಕಟೇಶ ಪವಾರ್‌, ಮಹೇಶಕುಮಾರ, ಮಹಾದೇವರೆಡ್ಡಿ, ಶಿವಕುಮಾರ, ನಾರಾಯಣ ಸೇರಿದಂತೆ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಶಿಕ್ಷಕರು ಪಾಲ್ಗೊಂಡಿದ್ದರು. ಆರ್‌.ವಿ. ಶಾಲೆ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಅಮರಯ್ಯ ಸ್ವಾಮಿ ಜಾಲಿಬೆಂಚಿ ನಿರೂಪಿಸಿದರು. 

ಸಮಾರಂಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಬಾಲ್ಯ ವಿವಾಹ ತಡೆಗಟ್ಟುವಿಕೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ, ಸ್ವತ್ಛ ಭಾರತ ಅಭಿಯಾನ, ಮಕ್ಕಳ ಸಹಾಯವಾಣಿ-1098 ಕುರಿತ ಕರಪತ್ರ ವಿತರಿಸಲಾಯಿತು.

ಸರ್ಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳ ಶೌಚಾಲಯದಲ್ಲಿ ಕೈ ತೊಳೆಯಲು ಸಾಬೂನು ವ್ಯವಸ್ಥೆ ಮಾಡಬೇಕು. ಶುಚಿತ್ವ ಜಾಗೃತಿ ಕಾರ್ಯಕ್ರಮ ಕೇವಲ ಹೆಸರಿಗಾಗಿ ಆಯೋಜಿಸಿದಂತೆ ಆಗಬಾರದು, ಜಿಲ್ಲಾದ್ಯಂತ ಬದಲಾವಣೆಗೆ ನಾಂದಿಯಾಗಬೇಕು.
ಕಿಶನ ರಾಠೊಡ, ಜಿಪಂ ಸದಸ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.