ಸರ್ಕಾರಿ ಆಸ್ಪತ್ರೆಗೆ ಡಿಸಿ ಭೇಟಿ
Team Udayavani, Oct 27, 2018, 3:14 PM IST
ಶಹಾಪುರ: ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಇಲ್ಲಿನ ಅವ್ಯವಸ್ಥೆ ಕಂಡು ತಾಲೂಕು ವೈದ್ಯಾ ಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆ ಸ್ವತ್ಛತೆಯಿಂದ ಕೂಡಿಲ್ಲ.
ಎಲ್ಲೆಂದರಲ್ಲಿ ಅಸ್ತವ್ಯಸ್ತ ಇದೆ. ಸಮರ್ಪಕ ಬೆಡ್ ವ್ಯವಸ್ಥೆ ಇಲ್ಲ. ಹಳೇ ಗಾದಿ ಮಂಚ, ಕುರ್ಚಿಗಳು ಆಸ್ಪತ್ರೆಯ ದುಸ್ಥಿತಿ ಸೂಚಿಸುತ್ತಿವೆ. ಅಲ್ಲದೆ ಸಿಬ್ಬಂದಿ ಕರ್ತವ್ಯ ಲೋಪ ಕಂಡು ಬರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಬಯೋಮೆಟ್ರಿಕ್ ವ್ಯವಸ್ಥೆ ಇಲ್ಲ. ಸಿಸಿ ಕ್ಯಾಮರಾ ಚಾಲನೆಯಲ್ಲಿಲ್ಲ ಅಂದರೆ ಹೇಗೆ? ಸಿಬ್ಬಂದಿ ಬಯೋಮೆಟ್ರಿಕ್ ಮತ್ತು ಸಿಸಿ ಕ್ಯಾಮರಾ ಮೊದಲು ಅಳವಡಿಸಿದ್ದರೆ ದುರಸ್ತಿಗೊಳಿಸಿ ಎಂದು ಇಲ್ಲಿನ ಆರೊಗ್ಯ ಅಧಿಕಾರಿ ಡಾ| ರಮೇಶ ಗುತ್ತೇದಾರ ಅವರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಟಿಎಚ್ಒ ಡಾ| ರಮೇಶ, ಪೌರಾಯುಕ್ತ ಬಸವರಾಜ ಶಿವಪೂಜೆ, ಉಪ ತಹಶೀಲ್ದಾರ್ ಶ್ರೀಧರಾಚಾರ್ಯ ಕುಲಕರ್ಣಿ, ಭಗವಂತ ಅನವಾರ, ಜೆಇ ಬಕ್ಕಪ್ಪ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ವೈದ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ