ಸಾಲ ಮನ್ನಾಗೆ ಆಗ್ರಹಿಸಿ ರೈತರ ಧರಣಿ


Team Udayavani, Nov 17, 2018, 4:19 PM IST

yad-1.jpg

ಶಹಾಪುರ: ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿರುವ ರೈತರ ಸಾಲವನ್ನು ಯಾವುದೇ ಷರತ್ತು ಇಲ್ಲದೆ ಮನ್ನಾ ಮಾಡಬೇಕೆಂದು ಆಗ್ರಹಿಸಿ ಇಲ್ಲಿನ ಕೃಷಿ ಪ್ರಾಂತ ರೈತ ಸಂಘ ಎಸ್‌ಬಿಐ ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿ ಸ್ಥಳಕ್ಕೆ ಆಗಮಿಸಿದ ಉಪ ತಹಶೀಲ್ದಾರ್‌ ಶ್ರೀಧರಾಚಾರ್ಯರಿಗೆ ಮನವಿ ಸಲ್ಲಿಸಿತು.

ರೈತ ಮುಖಂಡ ಚನ್ನಪ್ಪ ಆನೇಗುಂದಿ ಮಾತನಾಡಿ, ರೈತರು ಪಡೆದ 2 ಲಕ್ಷ.ರೂ. ಸಾಲವನ್ನು ಯಾವುದೇ ಷರತ್ತುಗಳಿಲ್ಲದೆ ಮನ್ನಾ ಮಾಡಬೇಕು. ರೈತರು ಕಳೆದ ನಾಲ್ಕು ವರ್ಷದಿಂದ ಸತತ ಬರದಿಂದ ಒಂದಿಲ್ಲೊಂದು ಸಮಸ್ಯೆಗಳಿಂದ ನರಳುತ್ತಿದ್ದಾರೆ. ಕಾರಣ ಕೇವಲ ಡಿಸಿಸಿ ಬ್ಯಾಂಕ್‌ನಲ್ಲಿನ ಸಾಲ ಮನ್ನಾ ಮಾಡಿದರೆ ಸಾಲದು, ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿರುವ ಕನಿಷ್ಟ 2 ಲಕ್ಷ ರೂ. ವರೆಗಿನ ಸಾಲವು ಮನ್ನಾ ಮಾಡಬೇಕು. ರೈತರಿಗೆ ವಿತರಿಸಬೇಕಾದ ಸಾಲವನ್ನು ನೀಡಬೇಕು ಎಂದು ಆಗ್ರಹಿಸಿದರು. 

ಯಾದಗಿರಿ ಜಿಲ್ಲಾ ಡಿಸಿಸಿ ಬ್ಯಾಂಕ್‌ನಲ್ಲಿ ಸುಳ್ಳು ಕಾಗದ ಪತ್ರ ಸೃಷ್ಟಿ ಮಾಡಿ ಸರ್ಕಾರದ ಹಣ ಲೂಟಿ ಮಾಡುವ ಹುನ್ನಾರ ನಡೆಸಿದ್ದು, ಕೂಡಲೇ ಅದನ್ನು ತಡೆಗಟ್ಟಬೇಕು ಮತ್ತು ಸಮಗ್ರ ತನಿಖೆ ಕೈಗೊಂಡು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಚನ್ನಪ್ಪ ಆನೇಗುಂದಿ, ಎಸ್‌. ಎಂ. ಸಾಗರ, ಬಸವರಾಜ ಭಜಂತ್ರಿ, ಭೀಮರಾಯ ಪೂಜಾರಿ, ಶರಬಣ್ಣ ಪೂಜಾರಿ, ಮಲ್ಲಣಗೌಡ ಪಾಟೀಲ, ಮಾಳಪ್ಪ ಪೂಜಾರಿ ಇದ್ದರು.  ಡಿಸಿಸಿ ಬ್ಯಾಂಕ್‌ಗೆ ರೈತ ಸಂಘ ಹಸಿರು ಸೇನೆ ಬೀಗ

‌ಹಾಪುರ: ರೈತರಿಗೆ ಸಾಲ ನೀಡುವಲ್ಲಿ ವಿಳಂಬತೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಘಟಕ ಇಲ್ಲಿನ ಡಿಸಿಸಿ ಬ್ಯಾಂಕ್‌ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿತು.
 
ಸಂಘದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಸತ್ಯಂಪೇಟೆ ಮಾತನಾಡಿ, ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಮಾಡಿದ ಬೆಳೆಗೆ ಸಮರ್ಪಕ ನೀರು ದೊರೆಯದ ಕಾರಣ ಬೆಳೆ ಬಾಡಿ ಹೋಗಿರುವ ಸಂಕಷ್ಟ ಒಂದಡೆಯಾದರೆ, ರೈತರಿಗೆ ಸಾಲ ನೀಡುವ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್‌ ಅಧಿಕಾರಿಗಳು ಸಾಲ ನೀಡುವಲ್ಲಿ ವಿಳಂಬ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ತಾಲೂಕಿನ ಕೊಳ್ಳೂರ (ಎಂ) ಗ್ರಾಮದ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್‌ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು, ಮೇಲಧಿಕಾರಿಗಳು ಈ ಕುರಿತು ತನಿಖೆ ನಡೆಸಬೇಕು ಮತ್ತು ಸಾಲ ಮನ್ನಾ ಮಾಡಲಾದ ರೈತರಿಗೂ ಮರು ಸಾಲ ಕೂಡಲೇ ನೀಡುವ ವ್ಯವಸ್ಥೆಯಾಗಬೇಕು. ಸಮರ್ಪಕವಾಗಿ ಬರ ಪರಹಾರ ಒದಗಿಸಬೇಕು. ರೈತರು ಬೆಳೆದ ಎಲ್ಲಾ ಆಹಾರ ಧಾನ್ಯಗಳನ್ನು ಸರ್ಕಾರವೇ ಖರೀದಿ ಮಾಡಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸ್ಥಳಕ್ಕೆ ಆಗಮಿಸಿದ್ದ ಉಪ ತಹಶೀಲ್ದಾರ್‌ ಶ್ರೀಧರಾಚಾರ್ಯ ಅವರಿಗೆ ರೈತರು ಮನವಿ ಸಲ್ಲಿಸಿದರು. ಮುಂಚಿತವಾಗಿ ನಗರದ ಚರಬಸವೇಶ್ವರ ಕಮಾನದಿಂದ ಡಿಸಿಸಿ ಬ್ಯಾಂಕ್‌ ವರೆಗೂ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಂಘದ ನಾಗರತ್ನಾ ಪಾಟೀಲ ಯಕ್ಷಿಂತಿ, ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಬಾವಿ, ಮಹಿಳಾ ಘಟಕ ತಾಲೂಕು ಅಧ್ಯಕ್ಷ ಚಂದ್ರಕಲಾ ವಡಿಗೇರಾ ಸೇರಿದಂತೆ ಪ್ರಮುಖರಾದ ದೇವಿಂದ್ರಪ್ಪ ಮಾಲಗತ್ತಿ, ಮಲ್ಲಣ್ಣ ಚಿಂತಿ, ಹಣಮಂತ ಕೊಂಗಂಡಿ, ಶರಣರಡ್ಡಿ ಹತ್ತಿಗೂಡೂರ, ಹಣಮಂತ್ರಾಯ ಮಡಿವಾಳ, ಶರಣು ಮಂದ್ರವಾಡ, ಮಲ್ಲಣ್ಣ ನೀಲಹಳ್ಳಿ, ರಾಘು ಟಿ. ವಡಿಗೇರಾ, ಭೀಮರಾಯ ಯಡ್ಡಹಳ್ಳಿ, ವೆಂಕಟೇಶ ಬಳಿಚಕ್ರ, ರಮೇಶ ಕೊಂಗಂಡಿ, ಪರಮಣ್ಣ ಮೇಟಿ, ಸಾಬಣ್ಣ ಪೂಜಾರಿ ಇದ್ದರು. 

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.