ನಿಂತಲ್ಲೇ ಹಾಳಾಗುತ್ತಿದೆ ಬೋಟ್‌


Team Udayavani, Nov 19, 2018, 1:40 PM IST

yad.jpg

ಯಾದಗಿರಿ: ನಗರದ ಹೃದಯ ಭಾಗದಲ್ಲಿನ ಲುಂಬಿನ ವನ ನೋಡಲು ಬಲು ಚಂದ. ಇರದಲ್ಲಿನ ಕೆರೆ ಪಕ್ಕ ವಿಹಂಗಮ ಬೆಟ್ಟದ ನೋಟ ತನ್ನತ್ತ ಪ್ರವಾಸಿಗರನ್ನು ಕೈಬೀಸಿ ಕರೆಯುವ ಸುಂದರ ವನದಲ್ಲಿ ಓಡಾಡಿ ಜನರ ಮನಸ್ಸಿಗೆ ಖುಷಿ ನೀಡಬೇಕಿದ್ದ ಬೋಟ್‌ವೊಂದು ನಿಂತಲ್ಲೇ ಹಾಳಾಗುತ್ತಿದೆ.

2015ರಲ್ಲಿ ಲುಂಬಿನ ವನವನ್ನು ಅಭಿವೃದ್ಧಿ ಮಾಡಿ ಆಗಿನ ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ ಚಿಂಚನಸೂರ ಲೋಕಾರ್ಪಣೆ ಮಾಡಿದ್ದರು. ಆ ಸಂದರ್ಭದಲ್ಲಿಯೇ ಕೆರೆಯಲ್ಲಿ ಬೋಟಿಂಗ್‌ ವ್ಯವಸ್ಥೆ ಕಲ್ಪಿಸಲು ಪ್ರವಾಸೋದ್ಯಮ ಇಲಾಖೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಗುಜರಾತ ಮೂಲದ ಎ.ಎಚ್‌. ವಾಡಿಯಾ ಬೋಟ್‌ ಬಿಲ್ಡರ್‌ ಕಂಪನಿಯಿಂದ ಬೋಟ್‌ವೊಂದನ್ನು ಖರೀದಿಸಿದೆ. 

ಸುಮಾರು 3 ವರ್ಷಗಳಿಂದ ಬೋಟ್‌ ಕೆರೆಯಲ್ಲಿಯೇ ನಿಂತಿದ್ದು, ವನಕ್ಕೆ ಬರುವ ಜನರ ಕಣ್ಣೆಲ್ಲ ಬೋಟ್‌ ಮೇಲೆಯೇ ನೆಟ್ಟಿದೆ. ನಮಸ್ಸಿನಲ್ಲಿಯೇ ಇದೇನು ಇಲ್ಲಿ ಬೋಟ್‌ ಕೂಡ ಇದೆ. ಇದರಲ್ಲಿ ಒಂದು ಸುತ್ತು ಹಾಕಿದ್ದರೇ ಹೇಗಿರುತ್ತಿತ್ತು ಎನ್ನುವ ಭಾವನೆಯೊಂದಿಗೆ ನಿರಾಸೆಯಿಂದಲೇ ಮರಳುವಂತಾಗಿದೆ.

ಕೆರೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರಿದೆ, ಅಧಿಕಾರಿಗಳು ಕೂಡ ಇಲ್ಲಿ ಬೋಟಿಂಗ್‌ ಅರಂಭಿಸಬೇಕು ಎನ್ನುವ ಉದ್ದೇಶದಿಂದಲೇ ಒಂದು ಬೋಟನ್ನು ಬೋಟಿಂಗ್‌ ಆರಂಭಿಸುವ ಯಾವುದೇ ಸೌಲಭ್ಯಗಳಿಲ್ಲದಿದ್ದರೂ ತಂದಿದ್ದಾರೆ. ಆದರೆ ಅದೇಕೋ ಗೊತ್ತಿಲ್ಲ. ಆದರೆ ಅದಕ್ಕೆ ಸಮರ್ಪಕ ವ್ಯವಸ್ಥೆಗಳನ್ನು ಮಾಡಿಕೊಳ್ಳದೇ ಮೇಲಾಗಿ ಚಲಾಯಿಸಲು ನಾವಿಕನೂ ಇಲ್ಲ. ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡು ಬೋಟಿಂಗ್‌ ಆರಂಭಿಸಬೇಕಿದ್ದ ಅಧಿಕಾರಿಗಳು ಅದನ್ನು ಕೈಬಿಟ್ಟಿದ್ದು, ಒಮ್ಮೆಯೂ ಚಲಿಸದೆ ನಿಂತಲ್ಲೇ ತುಕ್ಕು ಹಿಡಿಯುತ್ತಿದೆ. ಇದರಿಂದ ಸರ್ಕಾರದ ದುಡ್ಡು ಪೋಲಾದಂತಾಗಿದೆ ಎನ್ನುತ್ತಾರೆ ಪ್ರವಾಸಿಗರು.

ಕೆರೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಿರುಪಯುಕ್ತ ಸಸ್ಯಬಳ್ಳಿ ಬೆಳೆದಿದ್ದು, ತೆರೆವುಗೊಳಿಸುವ ಕಾರ್ಯ ಮಾಡಬೇಕಿದೆ. ಕೆರೆಯಲ್ಲಿ ಬೆಳೆದಿರುವ ಸಸ್ಯಬಳ್ಳಿಯನ್ನು ತೆರವುಗೊಳಿಸಿದರೂ ಮತ್ತೆ ಹುಟ್ಟುತ್ತಿದೆ. ಅದನ್ನು ಯಂತ್ರದಿಂದ ತೆರವುಗೊಳಿಸಬೇಕು. ಅದಕ್ಕೆ ಸುಮಾರು 2-3 ಲಕ್ಷ ಖರ್ಚು ಬರುತ್ತದೆ. ಅಷ್ಟು ಹಣ ನಮ್ಮಲ್ಲಿಲ್ಲ ಎನ್ನುತ್ತಾರೆ ಅಧಿಕಾರಿಗಳು.  ಇಲ್ಲಿ ಬೋಟಿಂಗ್‌ ವ್ಯವಸ್ಥೆ ಆರಂಭಿಸುವುದರಿಂದ ಇದನ್ನೊಂದು ಪ್ರಸಿದ್ಧ ತಾಣವನ್ನಾಗಿಸುವ ಜತೆಗೆ ಪ್ರವಾಸೋದ್ಯಮ ಇಲಾಖೆ ಉತ್ತಮ ಆದಾಯ ಪಡೆಯಬಹುದು. ಅಧಿಕಾರಿಗಳು ಕಾಳಜಿವಹಿಸಿ ಬೋಟಿಂಗ್‌ ಆರಂಭಿಸಬೇಕು ಎಂದು ಪ್ರವಾಸಿಗರು ಒತ್ತಾಯಿಸಿದ್ದಾರೆ.

ಆದಾಯಕ್ಕೆ ಕತ್ತರಿ ಹಾಕಿಕೊಂಡ ಇಲಾಖೆ: ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಲುಂಬಿನ ವನಕ್ಕೆ ಪ್ರವೇಶ ಶುಲ್ಕ 5 ರೂಪಾಯಿಯಿದ್ದು, ಮನಸ್ಸಿಗೆ ಮುದ ನೀಡುವ ಪರಿಸರದಲ್ಲಿ ಸಮಯ ಕಳೆಯಲು ನಿತ್ಯ ನೂರಾರು ಜನರು ಬರುತ್ತಾರೆ.
 
ಜತೆಗೆ ಬೋಟಿಂಗ್‌ ಆರಂಭಿಸಿ ಪ್ರತ್ಯೇಕವಾಗಿ 50ರಿಂದ 100 ರೂ. ವರೆಗೆ ಖರ್ಚು ಮಾಡಿ ಬೋಟಿಂಗ್‌ ಮಾಡುವುದಕ್ಕೂ ಜನರು ಆಸೆ ವ್ಯಕ್ತಪಡಿಸುತ್ತಿದ್ದು, ಅಧಿಕಾರಿಗಳು ಬೋಟಿಂಗ್‌ ಆರಂಭಿಸಿ ಆದಾಯ ಹೆಚ್ಚಿಸಿಕೊಳ್ಳಲು ವಿಫುಲ ಅವಕಾಶಗಳಿಗೆ ಆದರೇ ಮನಸ್ಸು ಮಾಡಬೇಕಷ್ಟೆ.

ವನದ ಕೆರೆಯಲ್ಲಿ ಬೋಟ್‌ವೊಂದು ನಿಂತಿದೆ. ಜಿಲ್ಲೆಯಲ್ಲಿ ಎಲ್ಲಿಯೂ ಬೋಟಿಂಗ್‌ ಮಾಡುವ ಅವಕಾಶವಿಲ್ಲ ಇಲ್ಲಿಯಾದರೂ ಶೀಘ್ರದಲ್ಲಿ ಬೋಟಿಂಗ್‌ ಆರಂಭಿಸಿದರೆ ಹೆಚ್ಚಿನ ಜನ ಬರುವುದರಿಂದ ಆದಾಯವೂ ಹೆಚ್ಚುತ್ತದೆ. ಈ ಬಗ್ಗೆ ಅಧಿಕಾರಿಗಳು ಕಾಳಜಿವಹಿಸಬೇಕು.
 ಸುರೇಶ, ಪ್ರವಾಸಿಗ

ನಮಗೂ ಬೋಟಿಂಗ್‌ ಆರಂಭಿಸಬೇಕು ಎಂಬ ಆಸಕ್ತಿಯಿದೆ. ಆದರೇ ಬೋಟ್‌ ನಿಲ್ಲಿಸುವುದು ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಕೈಗೊಳ್ಳಬೇಕು. ಕೆರೆ ಅಭಿವೃದ್ಧಿಗೆ 50 ಲಕ್ಷ ರೂ. ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆಗೊಂಡಿದೆ. ಹಣ ಬಿಡುಗಡೆಯಾದ ಬಳಿಕ ಸಕಲ ವ್ಯವಸ್ಥೆ ಮಾಡಬಹುದು.
 ರಜನಿಕಾಂತ, ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ.

ಅನೀಲ ಬಸೂದೆ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.