ಮೇವು ಸಂಗ್ರಹಕ್ಕೆ ಮುಂದಾದ ಜಿಲ್ಲಾಡಳಿತ
Team Udayavani, Nov 20, 2018, 4:16 PM IST
ಯಾದಗಿರಿ: ಜಿಲ್ಲೆಯಲ್ಲಿ ಬರದ ಸ್ಥಿತಿ ಆವರಿಸಿದ್ದು, ಈಗಾಗಲೇ ಭತ್ತದ ಮೇವನ್ನು ಸುಡದಂತೆ ರೈತರಿಗೆ ಸೂಚಿಸಲಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆಯಾದಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳು ಮೇವನ್ನು ಸಂಗ್ರಹಿಸುತ್ತಿದ್ದಾರೆ.
ಜಿಲ್ಲಾಡಳಿತ ಆದೇಶದ ಮೇರೆಗೆ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯವರು ಯಾದಗಿರಿ ಕೆ. ಸೀಮಾಂತರದಲ್ಲಿನ ರೈತರಿಂದ ಭತ್ತದ ಮೇವನ್ನು ಉಚಿತವಾಗಿ ಪಡೆದು ಬೇಲಗಳನ್ನು ಮಾಡಿಸಿ ಸಂಗ್ರಹಿಸುತ್ತಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಸೋಮವಾರ ಭೇಟಿ ಪರಿಶೀಲನೆ ನಡೆಸಿದರು. ಬರ ಆವರಿಸಿದರೂ ಜಿಲ್ಲಾಡಳಿತ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಅನುಕೂಲ ಮಾಡುತ್ತಿಲ್ಲ ಎಂಬ ಮಾತು ಕೇಳಿ ಬರುತ್ತಿದ್ದ ಸಂದರ್ಭದಲ್ಲಿ ರೈತರು ಕೂಡ ತಮ್ಮ ಜಾನುವಾರುಗಳನ್ನು ಮಾರಾಟಕ್ಕೆ ಮುಂದಾಗುತ್ತಿದ್ದರು, ಜಾನುವಾರುಗಳ ಮೇವಿನ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಮೇವು ಸಂಗ್ರಹಕ್ಕೆ ಮುಂದಾಗಿದ್ದು, ಈಗಾಗಲೇ ಸುಮಾರು 5-6 ದಿನಗಳಿಂದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ| ಶರಣಭೂಪಾಲರೆಡ್ಡಿ ನೇತೃತ್ವದಲ್ಲಿ ಸಂಗ್ರಹ ಕಾರ್ಯ ನಡೆದಿದೆ.
ಈವೆರೆಗೆ ಅಂದಾಜು 50-60 ಟನ್ ಮೇವು ಸಂಗ್ರಹವಾಗಿದ್ದು, ಗುರುಮಠಕಲ್ ಮತ್ತು ಸುರಪುರದಲ್ಲಿ ಸಂಗ್ರಹಿಸಿಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅಲ್ಲದೇ ಪಶು ಇಲಾಖೆ ಕೂಡ ಭತ್ತ ಬೆಳೆದ ಜಮೀನಿನ ಮಾಲಿಕರು ಮೇವನ್ನು ಸುಡಬಾರದು ಎಂದು ರೈತರಲ್ಲಿ ಮನವಿ ಮಾಡಿದೆ.
ರೈತರು ಮೇವನ್ನು ಗದ್ದೆಗಳಲ್ಲಿ ಸುಡದೆ ಅವಶ್ಯ ಇರುವ ರೈತರು ಸಂಗ್ರಹಿಸಲು ಕೋರಿದಲ್ಲಿ ಉಚಿತವಾಗಿ ನೀಡಬೇಕು. ಈ ಮೂಲಕ ಮುಂಬರುವ ದಿನಗಳಲ್ಲಿ ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಹಕರಿಸಬೇಕು. ಎಂ. ಕೂರ್ಮರಾವ್, ಜಿಲ್ಲಾಧಿಕಾರಿ ಪ್ರಾಮಾಣಿಕವಾಗಿ ರೈತರು, ಜಾನುವಾರುಗಳಿಗೆ ಸಹಕಾರಿಯಾಗಬೇಕು. ಅಗತ್ಯ ಇರುವ ಕಡೆಗಳಲ್ಲಿ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ, ಗೋವು ಶಾಲೆಗಳ ನಿರ್ಮಾಣ ಹಾಗೂ ಮೇವು ಬ್ಯಾಂಕ್ ಸ್ಥಾಪನೆ ಮಾಡಬೇಕು. ಈಗಾಗಲೇ ರೈತರು ಜಾನುವಾರುಗಳ ಮಾರಾಟಕ್ಕೆ ಮುಂದಾಗುತ್ತಿದ್ದು, ಪಂಚಾಯಿತಿ ಮಟ್ಟದಲ್ಲಿ ತಲಾವೊಂದರಂತೆ ಮೇವು ಬ್ಯಾಂಕ್ ಆರಂಭಿಸಿ ಸಿಬ್ಬಂಧಿಗಳನ್ನು ನೇಮಿಸುವುದು ಸೂಕ್ತ. ನಿಂಗಣ್ಣ ಜಡಿ, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?