ಪ್ರಾಥಮಿಕ ಶಾಲೆಗೆ ಸಿಇಒ ಭೇಟಿ
Team Udayavani, Dec 6, 2018, 3:00 PM IST
ಶಹಾಪುರ: ವಿದ್ಯಾರ್ಥಿಗಳ ವಿಕಾಸಕ್ಕೆ ಅವರಲ್ಲಿ ಮೌಲ್ಯಯುಕ್ತ ಗುಣ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಈ ದಿಸೆಯಲ್ಲಿ ನಿರಂತರ ಪ್ರಯತ್ನ ಅಗತ್ಯವೆಂದು ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಕವಿತಾ ಮನ್ನಿಕೇರಿ ತಿಳಿಸಿದರು.
ಗಾಂಧಿ ಚೌಕ್ ಬಡಾವಣೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಶಾಲಾ ತರಗತಿ ವೀಕ್ಷಿಸಿದರು. ಅಲ್ಲದೆ ವಿದ್ಯಾರ್ಥಿಗಳಿಗೆ ಹಲವು ಪ್ರಶ್ನೆ ಕೇಳಿದರು. ವರ್ಗ ಕೋಣೆಯಲ್ಲಿನ ಮಾಹಿತಿ ಪಟಗಳನ್ನು ವೀಕ್ಷಿಸಿದರು. ಕಪ್ಪು ಹಲಗೆ ಹೆಚ್ಚಾಗಿ ಬಳಸಬೇಕು ಎಂದು ಶಿಕ್ಷಕರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಸಿ.ಆರ್.ಸಿ, ಜಗಧೀಶ ಗೋಟ್ಲಾ, ಸಿರಾಜ್.ಕೆ. ಮುಖ್ಯಗುರು ಮಲ್ಕಪ್ಪ ಮತ್ತು ಶಿಕ್ಷಕರು ಇದ್ದರು.
ಶಿಸ್ತು ಕಾಣದಿದ್ದರೆ ಕಠಿಣ ಕ್ರಮ ಪಟ್ಟಣದ ದೇವಿ ನಗರದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಜಿಪಂ ಸಿಇಒ ಕವಿತಾ ಮನ್ನಿಕೇರಿ ಅವರು, ಅಂಗನವಾಡಿ ಕೇಂದ್ರ ಪರಿಶೀಲನೆ ನಡೆಸಿದರು. ಕೇಂದ್ರದಲ್ಲಿ ಒಟ್ಟು ಮಕ್ಕಳ ಸಂಖ್ಯೆ 28 ಇದ್ದು, ಅದರಲ್ಲಿ 15 ಮಕ್ಕಳು ಹಾಜರಿರುವುದು ಕಂಡು ಬಂತು. ಅಲ್ಲದೆ ಅಪೌಷ್ಟಿಕತೆ ಹೊಂದಿದ ಮಕ್ಕಳೆಷ್ಟಿದ್ದಾರೆ ಎಂದು ಕೇಳಿದರು. ಅಪೌಷ್ಟಿಕತೆಯಿದ ಕೂಡಿರುವ ಯಾವುದೇ ಮಕ್ಕಳಿಲ್ಲ ಎಂದು ಶಿಕ್ಷಕಿ ಉತ್ತರಿಸಿದರು.
ಮುಖ್ಯವಾಗಿ ಮಕ್ಕಳಲ್ಲಿ ಶಿಸ್ತು ರೂಢಿಸಿ, ಶೈಕ್ಷಣಿಕವಾಗಿ ಬೆಳೆಯಲು ಶಿಸ್ತು ಮುಖ್ಯ. ನೀವು ಸಮವಸ್ತ್ರ ಧರಿಸಿ ಶಿಸ್ತಿನಿಂದ ಮಕ್ಕಳಿಗೂ ಕಲಿಸಿ ಎಂದು ಸಲಹೆ ನೀಡಿದರು. ಯಾವೊಂದು ಮಗುವು ಅಪೌಷ್ಟಿಕತೆಯಿಂದ ಕೂಡಿರಬಾರದು. ಆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ತಿಳಿಸಿದರು. ಇನ್ಮುಂದೆ ಸಮರ್ಪಕವಾಗಿ ಕೇಂದ್ರದಲ್ಲಿ ಶಿಸ್ತು ಕಂಡು ಬರದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ