ಅವ್ಯವಸೆ ಆಗರ ಭೂಮಾಪನ ಕಚೇರಿ


Team Udayavani, Dec 22, 2018, 3:48 PM IST

yad-1.jpg

ಯಾದಗಿರಿ: ಜಿಲ್ಲಾ ಕೇಂದ್ರದಲ್ಲಿರುವ ಯಾದಗಿರಿ ತಾಲೂಕು ಭೂಮಾಪನ ಇಲಾಖೆ ಕಚೇರಿ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಪಟ್ಟಿದ್ದು, ತಾಲೂಕಿನ 160ಕ್ಕೂ ಹೆಚ್ಚು ಗ್ರಾಮೀಣ ಮತ್ತು ನಗರದ ಪ್ರದೇಶಗಳ ಭೂದಾಖಲೆಗಳಿರುವ ಕಚೇರಿಯಲ್ಲಿ ಅವುಗಳನ್ನು ಸಮರ್ಪಕವಾಗಿ ಇಡಲು ವ್ಯವಸ್ಥೆ ಇಲ್ಲದಿರುವುದೇ ವಿಪರ್ಯಾಸ.

ಇಲ್ಲಿನ ತಹಶೀಲ್ದಾರ್‌ ಕಾರ್ಯಾಲಯ ಆವರಣದಲ್ಲಿ ಸಹಾಯಕ ಭೂಮಾಪನ ಇಲಾಖೆ ಕಚೇರಿ ಕಾರ್ಯನಿರ್ವಹಿಸುತ್ತಿದೆ. ಕಚೇರಿಗೆ 10*10 ಅಳತೆಯ ಎರಡು ಕೊಠಡಿಗಳು ಮಾತ್ರ ಇದ್ದು, ಒಂದು ಕೊಠಡಿ ದಾಖಲೆಗಳಿಗೆ ಮೀಸಲಾಗಿದ್ದರೆ, ಇನ್ನೊಂದು ಕೋಣೆಯಲ್ಲಿ ಇಲಾಖೆಯ 47 ಸರ್ವೇಯರ್‌ಗಳು ಕುಳಿತುಕೊಳ್ಳಲೂ ಜಾಗವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸುಮಾರು ವರ್ಷಗಳಿಂದ ಇಂತಹ ಅವ್ಯವಸ್ಥೆಯಲ್ಲಿಯೇ ಕಚೇರಿ ನಡೆಯುತ್ತಿದೆ.

ಇಲ್ಲಿ ಅಧಿಕಾರಿಗೂ ಕುಳಿತುಕೊಳ್ಳಲು ಸ್ಥಳವಿರಲಿಲ್ಲ. ಇತ್ತೀಚೆಗೆ ಬಂದಿರುವ ಅಧಿಕಾರಿ ತಹಶೀಲ್ದಾರ್‌ ಕಚೇರಿಯಲ್ಲಿ ಕುಳಿತುಕೊಳ್ಳಲು ಸ್ಥಳ ಮಾಡಿಕೊಂಡಿದ್ದಾರೆ. ತಾಲೂಕಿನ ಸಾವಿರಾರು ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ರಕ್ಷಿಸುವ ಕಚೇರಿಗೆ ಉತ್ತಮ ಕಟ್ಟಡ ಇಲ್ಲದಿರುವುದು ಒಂದು ದೊಡ್ಡ ದುರಂತವೇ ಸರಿ.

ಇಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿ ಕೆಲವರು ಕಚೇರಿ ಒಳಗಿದ್ದರೆ, ಮತ್ತೆ ಕೆಲವರು ಹೊರಗೇ  ತುಕೊಳ್ಳುವಂತಾಗಿದೆ. ಕಚೇರಿಗೆ ಬೇಕಿರುವ ಇಂಟರ್‌ನೆಟ್‌, ಕುಡಿಯುವ ನೀರು ಹಾಗೂ ಇನ್ನಿತರ ಮೂಲ ಸೌಕರ್ಯಗಳು ಇಲ್ಲದಿರುವುದು ಸೋಜಿಗದ ಸಂಗತಿಯಾಗಿದ್ದು, ಜಿಲ್ಲಾಡಳಿತ ಗಮನಹರಿಸಿ ಸರ್ಕಾರಿ ಮತ್ತು ಸಾರ್ವಜನಿಕರ ಆಸ್ತಿ ದಾಖಲೆಗಳ ರಕ್ಷಣೆ ಹಿತದೃಷ್ಟಿಯಿಂದ ಭೂಮಾಪನ ಇಲಾಖೆಗೆ ವ್ಯವಸ್ಥೆತ ಕಟ್ಟಡದ ಸೌಕರ್ಯ ಕಲ್ಪಿಸಲು ಮುಂದಾಗಬೇಕಿದೆ.

ಭೂ ಮಾಪನ ಇಲಾಖೆ ಕಚೇರಿಗೆ ಎರಡು ಕೊಠಡಿಗಳಿವೆ, ಒಂದರಲ್ಲಿ ದಾಖಲೆಗಳಿದ್ದು, ಇನ್ನೊಂದರಲ್ಲಿ ಸಿಬ್ಬಂದಿ ಕುಳಿತುಕೊಳ್ಳುತ್ತಾರೆ. ಇಕ್ಕಟ್ಟಾದ ಸ್ಥಳದಲ್ಲಿ ಕೆಲಸ ನಿರ್ವಹಿಸುವಂತಾಗಿದೆ. ಹೆಚ್ಚಿನ ಸ್ಥಳದ ಅಗತ್ಯವಿದೆ.  ಶ್ರೀನಿವಾಸ ಮೂರ್ತಿ, ಸಹಾಯಕ ನಿರ್ದೇಶಕರು, ಭೂಮಾಪನ ಇಲಾಖೆ ತಾಲೂಕಿನ ಸಂಪೂರ್ಣ ದಾಖಲೆಗಳಿರುವ ಪ್ರಮುಖ ಕಚೇರಿ ಸ್ಥಿತಿ ಹೀಗಿದೆ ಎಂದರೆ ನಂಬಲು ಅಸಾಧ್ಯ. ಇಲ್ಲಿನ ಸಿಬ್ಬಂದಿಗೆ ಯಾವುದೇ ಸೌಕರ್ಯಗಳಿಲ್ಲ. ಸಾರ್ವಜನಿಕರ ಗೋಳು ಕೇಳುವವರೇ ಇಲ್ಲದಂತಾಗಿದೆ. ಶೀಘ್ರವೇ ಭೂಮಾಪನ ಇಲಾಖೆಗೆ ವ್ಯವಸ್ಥಿತ ಕಚೇರಿಯನ್ನು ಒದಗಿಸಬೇಕು. 
 ಶಿವರಾಜ ದಾಸನಕೇರಿ, ಸ್ಥಳೀಯ ನಿವಾಸಿ 

„ಅನೀಲ ಬಸೂದೆ

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.