ರೈತರ ಸಮಸ್ಯೆಗೆ ಸ್ಪಂದಿಸದಿದ್ದರೆ ಹೋರಾಟ
Team Udayavani, Jan 10, 2019, 11:35 AM IST
ಶಹಾಪುರ: ರೈತರು ಮತ್ತು ಕಾರ್ಮಿಕರನ್ನು ಕಡೆಗಣಿಸಿದ ಪರಿಣಾಮ ಇತ್ತೀಚೆಗೆ ಪಂಚ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿತು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇನ್ನೂ ಬುದ್ಧಿ ಕಲಿತಿಲ್ಲವೆಂದು ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಮುಖಂಡ ಮಲ್ಲಿಕಾರ್ಜುನ ಸತ್ಯಂಪೇಟೆ ಆಕ್ರೋಶ ವ್ಯಕ್ತಪಡಿಸಿದರು.
ಬುಧವಾರ ನಗರದಲ್ಲಿ ಬಿಸಿಯೂಟ, ಅಂಗನವಾಡಿ, ಆಶಾ ಕಾರ್ಯಕರ್ತರು ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು, ರೈತ ಸಂಘಟನೆಗಳ ನೇತೃತ್ವದಲ್ಲಿ ಅಖೀಲ ಭಾರತ್ ಬಂದ್ ಕರೆ ಹಿನ್ನೆಲೆಯಲ್ಲಿ ನಡೆದ ಎರಡನೇ ದಿನ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಇಲ್ಲ. ರೈತರ ಸಾಲ ಮನ್ನಾ ಹೆಸರಲ್ಲಿ ಆಶ್ವಾಸನೆಗಳೇ ನಡೆದಿದ್ದು, ಕಾರ್ಮಿಕರ ರಕ್ಷಣೆಯನ್ನು ಮರೆತು ಬಿಟ್ಟಿದ್ದಾರೆ. ಬರುವ ದಿನಗಳಲ್ಲಿ ಕಾರ್ಮಿಕರ, ರೈತರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಹೋರಾಟ ಇನ್ನೂ ಹೆಚ್ಚಿನ ಸ್ವರೂಪ ಪಡೆಯಲಿದೆ ಎಂದರು.
ಎರಡನೇ ದಿನ ಪ್ರತಿಭಟನೆ ಬಿಸಿ ಸ್ವಲ್ಪ ಕಡಿಮೆಯಾಗಿತ್ತು ಎನ್ನಬಹುದು. ಎಂದಿನಂತೆ ಶಾಲಾ ಕಾಲೇಜು ಜರುಗಿದವು. ಅಂಗಡಿ ಮುಂಗಟ್ಟು ಸೇರಿದಂತೆ ಯಾವುದೇ ಸಂಚಾರ ಸುಗಮವಾಗಿತ್ತು.
ಈ ಸಂದರ್ಭದಲ್ಲಿ ಕ.ಪ್ರಾಂ.ಕೃ.ಕೂ. ಸಂಘ ಜಿಲ್ಲಾಧ್ಯಕ್ಷ ದಾವಲಸಾಬ ನದಾಫ್, ಅಂಗನವಾಡಿ ನೌಕರರ ಸಂಘ ಅಧ್ಯಕ್ಷ ಬಸಲಿಂಗಮ್ಮ ನಾಟೇಕಾರ, ಸಾರಿಗೆ ನೌಕರರ ಸಂಘ ಅಧ್ಯಕ್ಷ ಮಹಾದೇವಪ್ಪ ಪಾಟೀಲ, ಕಟ್ಟಡ ಕಾರ್ಮಿಕರ ಸಂಘ ಸಂಘಟನಾ ಕಾರ್ಯದರ್ಶಿ ಸೈದಪ್ಪ ಎಚ್.ಪಿ, ಮುಖಂಡ ಮಲ್ಲಯ್ಯ ಪೋಲಂಪಲ್ಲಿ, ಮಡಿವಾಳಮ್ಮ ಹೂಗಾರ, ಭೀಮರಡ್ಡಿ, ಕಟ್ಟಡ ಕಾರ್ಮಿಕರ ಸಂಘ ಮಹ್ಮದ್ ಯುಸೂಫ್, ತಾಲೂಕು ಅಧ್ಯಕ್ಷ ಸವಿತಾ ಪೂಜಾರಿ, ಯಮನಮ್ಮ ಕಸನ್, ಶಿವಾನಂದಸ್ವಾಮಿ ಗೋಗಿ, ದೇವಕ್ಕಿ, ಚಂದ್ರರಡ್ಡಿ ಇಬ್ರಾಹಿಂಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್