ಬೆಳೆ ಸಮೀಕ್ಷೆ ನ್ಯೂನತೆ ಸರಿಪಡಿಸಲು ರೈತರ ಒತ್ತಾಯ
Team Udayavani, Jan 11, 2019, 10:47 AM IST
ಸುರಪುರ: ಕರ್ನಾಟಕ ರಾಜ್ಯ ರಹಿತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ರೈತರು ಬೆಳೆ ಸಮೀಕ್ಷೆಯಲ್ಲಿ ಆಗಿರುವ ನ್ಯೂನತೆ ಸರಿಪಡಿಸುವಂತೆ ಆಗ್ರಹಿಸಿ ಗ್ರೇಡ್-2 ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ರೈತ ಸಂಘದ ಮುಖಂಡ ಹಣಮಂತ್ರಾಯ ಮಡಿವಾಳ ಮಾತನಾಡಿ, ಬೆಳೆ ಸಮೀಕ್ಷೆ ವರದಿಯಲ್ಲಿ ಸಾಕಷ್ಟು ತಪ್ಪುಗಳು ಇವೆ. ಪಹಣಿಯಲ್ಲಿ ಬೇರೆ ಬೆಳೆ ನಮೂದು ಮಾಡಲಾಗಿದೆ. ಇದಕ್ಕೆ ಕಂದಾಯ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಿಗರ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ಆರೋಪಿಸಿದರು.
ಈಗಾಗಲೇ ಕಂದಾಯ ಇಲಾಖೆಯಿಂದ ಮಾಡಿರುವ ಬೆಳೆ ಸಮೀಕ್ಷೆಗೂ ವಾಸ್ತವಿಕ ಬೆಳೆಗೂ ತಾಳೆಯಾಗುತ್ತಿಲ್ಲ. ಇನ್ನೂ ಕೆಲ ಪಹಣಿಗಳಲ್ಲಿ ರೈತರ ಹೆಸರು ಮತ್ತು ಸರ್ವೇ ನಂಬರಿಗೂ ಹೊಂದಾಣಿಕೆ ಇಲ್ಲಾ. ಯಾರದೋ ಹೊಲ ಇನಾರದೋ ಹೆಸರು ನಮೂದಾಗಿವೆ. ಇದರಿಂದ ಬೆಳೆ ನಷ್ಟ ಪರಿಹಾರ ಮತ್ತು ತೊಗರಿ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಲು ರೈತರು ಪರದಾಡುವಂತಾಗಿದೆ ಎಂದು ದೂರಿದರು.
ತೊಗರಿ ಹೆಸರು ನೋಂದಣಿಗೆ ಇದೇ ತಿಂಗಳು 14 ಕೊನೆ ದಿನದ ಗಡುವು ನೀಡಾಲಾಗಿದೆ. ನೋಂದಣಿ ಇಲ್ಲದೆ ತೊಗರಿ ಖರೀದಿಸುವಂತ್ತಿಲ್ಲ. ದೃಢೀಕರಣಕ್ಕಾಗಿ ಬೆಳೆ ಸಮೀಕ್ಷೆಯಲ್ಲಿ ತಪ್ಪಾಗಿರುವ ರೈತರ ಬೆಳೆ ತಿದ್ದುಪಡಿ ಮಾಡಿಕೊಳ್ಳಲು ಹೆಣಗಾಡುತ್ತಿದ್ದಾರೆ. ತಿದ್ದುಪಡಿಗೆ ಕೆಲ ಷರತ್ತುಗಳನ್ನು ವಿಧಿಸಿರುವುದರಿಂದ ಬೇಗ ತಿದ್ದುಪಡಿ ಆಗುತ್ತಿಲ್ಲ. ಇದರಿಂದ ರೈತರು ಆತಂಕಗೊಂಡಿದ್ದಾರೆ ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ಸೊಫೀಯಾ ಸುಲ್ತಾನ್ ರೈತರೊಂದಿಗೆ ಚರ್ಚಿಸಿ ಬಹಳಷ್ಟು ತಪ್ಪುಗಳಾಗಿವೆ. ತಿದ್ದುಪಡಿ ಜವಾಬ್ದಾರಿ ತಹಶೀಲ್ದಾರ್ಗೆ ವಹಿಸಲಾಗಿದೆ. ಗ್ರಾಮ ಲೆಕ್ಕಿಗರು ಸಮಸ್ಯೆ ಸರಿಪಡಿಸಿ ಜಿಪಿಆರ್ಎಸ್ ಮಾಡಿಕೊಟ್ಟರೆ ತಹಶೀಲ್ದಾರರು ತಮ್ಮ ಲಾಗಿನ್ನಲ್ಲಿ ತಿದ್ದುಪಡಿ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.
ಸಿಐಟಿಯು ಮುಖಂಡ ದೇವಿಂದ್ರಪ್ಪ ಪತ್ತಾರ ರೈತ ಸಂಘದ ಮುಖಂಡರಾದ ವೆಂಕಟೇಶ ಮಾಲಿ ಪಾಟೀಲ, ಶಿವನಗೌಡ ಪೊಲೀಸ್ ಪಾಟೀಲ, ವೆಂಕೋಬ ದೊರೆ, ರಾಮು ನಾಯಕ ಕುಪಗಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ