ಜಂಗಮರಿಗೆ ನ್ಯಾಯ ಕಲ್ಪಿಸಲು ಆಗ್ರಹ


Team Udayavani, Jan 14, 2019, 11:09 AM IST

yad-1.jpg

ಯಾದಗಿರಿ: ಜಿಲ್ಲೆಯಲ್ಲಿ ಅನಾದಿ ಕಾಲದಿಂದಲೂ ಇರುವ ಬೇಡ, ಜಂಗಮರಿಗೆ ಜಾತಿ ಪ್ರಮಾಣ ಪತ್ರ ನೀಡಲು ವಿನಾಕಾರಣ ಕಿರುಕುಳ ನೀಡಲಾಗುತ್ತಿದ್ದು, ಇದನ್ನು ತಡೆದು ತಕ್ಷಣ ಸರ್ಕಾರದ ಆದೇಶಗಳಂತೆ ಜಾತಿ ಪ್ರಮಾಣ ಪತ್ರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಬೇಡ ಜಂಗಮ ಕ್ಷೇಮಾಭಿವೃದ್ಧಿ ವೇದಿಕೆ ಕಾರ್ಯಾಧ್ಯಕ್ಷ ವೈಜನಾಥ ಹಿರೇಮಠ ಒತ್ತಾಯಿಸಿದರು.

ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ಬನದ ವೀರೇಶ್ವರ ಕಲ್ಯಾಣ ಮಂಟಪದಿಂದ ಹೊರಟ ಬೈಕ್‌ ರ್ಯಾಲಿ ತಹಶೀಲ್ದಾರ್‌ ಕಚೇರಿ ಎದುರು ಜಮಾಯಿಸಿದ್ದ ನಂತರ ನಡೆದ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.

ಬೇಡ ಜಂಗಮರು ಎಂದರೆ ಯಾರು ಎಂದು ತಿಳಿಯಲು ಸರ್ಕಾರ ನಿಯೋಜಿಸಿದ್ದ ಡಾ| ಸೂರ್ಯನಾಥ ಕಾಮತ್‌ ಅವರ ನೇತೃತ್ವದ ಸಮಿತಿ ವಡಗೇರಾಗೆ ಭೇಟಿ ನೀಡಿತ್ತು. ಇಲ್ಲಿಯೂ ಪರಿಶೀಲನೆ ನಡೆಸಿ, ಇಲ್ಲಿ ಬೇಡ ಜಂಗಮರಿದ್ದಾರೆ ಎಂದು ವರದಿ ನೀಡಿದೆ. ಹಿರೇಮಠ, ಸಾಲಿಮಠ, ಮಠಪತಿ ಎಂದು ಗುರ್ತಿಸಿಕೊಂಡಿದ್ದಾರೋ ಅವರೇ ಬೇಡ ಜಂಗಮರು ಎಂದು ಈ ಸಮಿತಿ ವರದಿ ಹೇಳಿದೆ. ಆದರೆ ವಡಗೇರಾ ತಹಸೀಲ್ದಾರ್‌ ಇಲ್ಲಿ ಬೇಡ ಜಂಗಮರು ಇಲ್ಲ ಎಂದು ಹಿಂಬರಹ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

1901ರಲ್ಲಿಯೇ ನಿಜಾಮ ಸರ್ಕಾರದಲ್ಲಿ ಬೇಡ ಜಂಗಮರು ಸೌಲತ್ತು ಪಡೆಯುತ್ತಿದ್ದರು. ತದನಂತರ 1950ರಲ್ಲಿ ಡಾ| ಅಂಬೇಡ್ಕರ್‌ ಅವರು ಸಹ ಅಧ್ಯಯನ ಮಾಡಿ ಬೇಡ ಜಂಗಮರನ್ನು ಪರಿಶಿಷ್ಟ ಜಾತಿಯಲ್ಲಿ ಸೇರಿಸಿ ಸೌಲತ್ತು ಕೊಡಲು ಶಿಫಾರಸು ಮಾಡಿದ್ದರೂ ಸಹ ಇಂದಿಗೆ 65 ವರ್ಷಗಳೇ ಕಳೆದರೂ ಬೇಡ ಜಂಗಮರಿಗೆ ಈ ಸೌಲತ್ತು ಬಳಸಿಕೊಳ್ಳಲು ಕೆಲವು ಪಟ್ಟ ಭದ್ರ ಹಿತಾಸಕ್ತಿಗಳು ಬಿಡುತ್ತಿಲ್ಲ ಎಂದರು.

ಬಳಿಕ ವಡಗೇರಾ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬೇಡ ಜಂಗಮ ಅಭಿವೃದ್ಧಿ ವೇದಿಕೆ ಜಿಲ್ಲಾಧ್ಯಕ್ಷ ಶರಣ ಬಸವ ಸ್ವಾಮಿ ಬದ್ದೇಪಲ್ಲಿ ಮನವಿ ಸಲ್ಲಿಸಿದರು. ಬಿ.ಬಿ. ಸ್ವಾಮಿ, ಪಂಪಯ್ಯ ಸ್ವಾಮಿ ವಡಗೇರಾ, ಗೌರಿಶಂಕರ ಹಿರೇಮಠ, ಸೊಮಶೇಖರಯ್ಯ ಸ್ವಾಮಿ ರುದ್ರಮುನಿ ಬೆಂಡೆಬೆಂಬಳಿ, ಸೋಮಶೇಖರ ರೊಟ್ನಡಿಗಿ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.