ಸೌಲಭ್ಯ ಕಲ್ಪಿಸದ ತಾಲೂಕಾಡಳಿತ
Team Udayavani, Feb 8, 2019, 11:58 AM IST
ಶಹಾಪುರ: ತಾಲೂಕಿನ ಸಗರ ಗ್ರಾಮದ ಗ್ರಾಮ ದೇವತೆ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ವರ್ಷದಲ್ಲಿ ಎರಡು ಬಾರಿ ನಡೆಯುವುದು ವಿಶೇಷವಾಗಿದೆ. ಅದರಂತೆ ಫೆ. 19ರಂದು ಜಾತ್ರೆ ಆರಂಭವಾಗಲಿದೆ.
ಆದರೆ ದೇವಸ್ಥಾನ ಮುಜರಾಯಿ ಖಾತೆಗೆ ಒಳಪಟ್ಟಿದ್ದು, ತಾಲೂಕು ಆಡಳಿತದ ತಹಶೀಲ್ದಾರರು ದೇವಸ್ಥಾನ ಕಮಿಟಿ ಅಧ್ಯಕ್ಷರಾಗಿದ್ದಾರೆ. ಇನ್ನೂ ಕೆಲವೇ ದಿನಗಳಲ್ಲಿ ಜಾತ್ರೆ ಆರಂಭವಾಗಲಿದೆ. ಜವಾಬ್ದಾರಿ ಹೊಂದಿದ ತಾಲೂಕು ಆಡಳಿತ ಇದುವರೆಗೂ ಜಾತ್ರಾ ಅಂಗವಾಗಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾತ್ರೆಗೆ ಸಹಸ್ರಾರು ಭಕ್ತಾದಿಗಳು ಆಗಮಿಸಲಿದ್ದು, ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕಿದೆ. ಆದರೆ ಇದುವರೆಗೂ ತಹಶೀಲ್ದಾರರು ಯಾವುದೇ ಕ್ರಮ ಕೈಗೊಂಡಿಲ್ಲ. ಜಾತ್ರೆ ವೇಳೆ ಬರುವ ಜನರು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಭಕ್ತಾದಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಬೆಟ್ಟದ ಮೇಲಿರುವ ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆಯಲು ಸಮರ್ಪಕ ರಸ್ತೆ ಇಲ್ಲ. ಮೆಟ್ಟಿಲುಗಳು ನೆಲಕ್ಕುರುಳಿವೆ. ರಸ್ತೆ ಹದಗೆಟ್ಟಿದೆ. ಕಳೆದ ವರ್ಷವೇ ರಸ್ತೆ ಮೆಟ್ಟಿಲು ನೆಲಕ್ಕೆ ಉರುಳಿ ಜನರು ಪರದಾಡುವಂತಾಗಿದೆ. ಇದನ್ನು ಅರಿತ ದೇವಸ್ಥಾನ ಕಮಿಟಿ ಹಾಗೂ ತಾಲೂಕು ಆಡಳಿತ ಇದುವರೆಗೂ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳದಿವುರು ಭಕ್ತಾದಿಗಳ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.
ವರ್ಷದಲ್ಲಿ ಎರಡು ಬಾರಿ ಜಾತ್ರೆ: ಪ್ರತಿವರ್ಷ ಭಾರತ ಹುಣ್ಣಿಮೆ ಮುನ್ನವೇ ಬರುವ ಮಂಗಳವಾರ ಹಾಗೂ ಪ್ರತಿ ಸಲ ಹೋಳಿ ಹುಣ್ಣಿಮೆ ಮುನ್ನ ಬರುವ ಶುಕ್ರವಾರ ಹೀಗೆ ಎರಡು ಬಾರಿ ಜಾತ್ರೆ ನಡೆಯುವುದು ಇಲ್ಲಿನ ವಿಶೇಷ. ಎರಡು ಬಾರಿ ಜಾತ್ರೆಯಲ್ಲಿ ಅಸಂಖ್ಯಾತ ಜನ ಸೇರಲಿದೆ. ಮಹಾರಾಷ್ಟ್ರದಿಂದ ಭಕ್ತಾದಿಗಳು ಜಾತ್ರೆಗೆ ಆಗಮಿಸುತ್ತಾರೆ. ಮುಜರಾಯಿ ಖಾತೆ ಅಧಿಕಾರಿಗಳ ಪ್ರಕಾರ 25 ಲಕ್ಷ ರೂ. ಅನುದಾನ ಇದ್ದು, ಅಭಿವೃದ್ಧಿ ಕಾರ್ಯಕ್ಕೆ ಇಷ್ಟೊಂದು ಹಣ ಸಾಲುವುದಿಲ್ಲ ಎಂಬ ನೆಪ ಹೇಳುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ