ಮಹರ್ಷಿ ಜಯಂತಿ: ಪೂರ್ವಭಾವಿ ಸಭೆ
Team Udayavani, Feb 9, 2019, 11:15 AM IST
ಹುಣಸಗಿ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಫೆ. 12ರಂದು ನಡೆಯಲಿರುವ ಸವಿತಾ ಮಹರ್ಷಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ಹುಣಸಗಿ ತಹಶೀಲ್ದಾರ್ ಶ್ರೀಧರ ಮುಂದಿನಮನಿ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆ ಉದ್ದೇಶಿಸಿ ಮಾತನಾಡಿದ ತಹಶೀಲ್ದಾರ್ ಶ್ರೀಧರ ಮುಂದಿನಮನಿ ಮಾತನಾಡಿ, ಸವಿತಾ ಮಹರ್ಷಿ ಜಯಂತಿಯನ್ನು ಅತ್ಯಂತ ಶಿಸ್ತು ಬದ್ಧವಾಗಿ ಆಚರಿಸಲಾಗುವುದು. ಸವಿತಾ ಸಮಾಜದ ಬಾಂಧವರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ನಂತರ ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಅಶೋಕ ಮಾಳನೂರ ಮಾತನಾಡಿ, ಮಂಗಳವಾರ ನಡೆಯಲಿರುವ ಸವಿತಾ ಮಹರ್ಷಿ ಜಯಂತಿಯನ್ನು ಹುಣಸಗಿ ಸವಿತಾ ಸಮಾಜದ ವತಿಯಿಂದ ಸವಿತಾ ಮಹರ್ಷಿ ವೃತ್ತದಿಂದ ಪ್ರಾರಂಭವಾಗಿ ಮಹಾಂತಸ್ವಾಮಿ, ವಾಲ್ಮೀಕಿ ವೃತ್ತ, ಕಿತ್ತೂರ ರಾಣಿ ಚನ್ನಮ್ಮ, ಸಂಗೋಳಿ ರಾಯಣ್ಣ ಅಂಬೇಡ್ಕರ್ ವೃತ್ತದ ಮೂಲಕ ಅದ್ಧೂರಿ ಮೇರವಣಿಗೆ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಆಗಮಿಸಲಿದೆ. ನಂತರ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಣೆ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಪಿಎಸ್ಐ ಸುನೀಲ್ ಮೂಲಿಮನಿ, ವೈದ್ಯಾಧಿಕಾರಿ ಸಂತೋಷ ಆಲಗೂರ, ಸಿಆರ್ಪಿ ವೀರೇಶ ಹಡಪದ, ಮೂರಾರ್ಜಿ ವಸತಿ ಶಾಲೆಯ ಮುಖ್ಯ ಗುರುಗಳಾದ ಅಶೋಕ ರಾಜನಕೋಳೂರ, ನಿಂಗಪ್ಪ ಸಿಂದಗೇರಿ, ಅಶೋಕ ವಠಾರ, ಅಶೋಕ ಶಹಾಪುರ, ನಿಂಗಣ್ಣ ವಡಗೇರಿ, ಪ್ರಭು ತಿರ್ಥ, ಸಂಗು ಬಾಚಿಮಟ್ಟಿ, ಚಂದ್ರಶೇಖರ ಅನವಾರ, ಚಂದ್ರಶೇಖರ ಬಾಚಿಮಟ್ಟಿ, ವೀರೇಶ ಹುಣಸಗಿ, ಶರಣಪ್ಪ ಹಳ್ಳಿ, ಮಲ್ಲಣ್ಣ ಗುಳಬಾಳ, ದೇವಪ್ಪ ಹುಣಸಗಿ, ಚಂದ್ರಶೇಖರ ವಠಾರ, ಭೀಮಣ್ಣ ನಾಟೇಕಾರ, ನಂದಪ್ಪ ಪೀರಾಪೂರ, ರುದ್ರಪ್ಪ ಮೇಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ