ಜನನ-ಮರಣ ನೋಂದಣಿ ಅತ್ಯವಶ್ಯ


Team Udayavani, Feb 10, 2019, 11:37 AM IST

yad-3.jpg

ಯಾದಗಿರಿ: ಸರ್ಕಾರಿ ಸೌಲಭ್ಯಗಳು ಪಡೆಯಲು ಜನನ-ಮರಣ ನೋಂದಣಿ ಮಾಡಿಸುವುದು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಹೇಳಿದರು. ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಶುಕ್ರವಾರ ಆರ್ಥಿಕ ಮತ್ತು ಸಾಂಖ್ಯೀಕ ನಿರ್ದೇಶನಾಲಯ ಆಶ್ರಯದಲ್ಲಿ ಜನನ-ಮರಣ ನೋಂದಣಿ ನಿಯಮಗಳು ಮತ್ತು ಇ-ಜನ್ಮ ತಂತ್ರಾಂಶ ನಿರ್ವಹಣೆ ಕುರಿತ ಆಯೋಜಿಸಿದ್ದ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ವಿದ್ಯಾಭ್ಯಾಸ, ಉದ್ಯೋಗ ಹಾಗೂ ವಿವಿಧ ಸಂದರ್ಭಗಳಲ್ಲಿ ಜನನ ಪ್ರಮಾಣ ಪತ್ರ ಬೇಕಾಗುತ್ತದೆ. ಪ್ರಸ್ತುತ ರೈತರ ಸಾಲ ಮನ್ನಾ ಪ್ರಕ್ರಿಯೆ ನಡೆಯುತ್ತಿದ್ದು, ಸಾಲ ಹೊಂದಿದ ರೈತರು ಮರಣ ಹೊಂದಿದಲ್ಲಿ ಸಾಲ ಮನ್ನಾಕ್ಕಾಗಿ ಅವರ ಮರಣ ಪ್ರಮಾಣ ಪತ್ರ ಕಡ್ಡಾಯವಾಗಿ ಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಜನನ ಮತ್ತು ಮರಣ ಪ್ರಮಾಣ ಪತ್ರಗಳ ಉಪಯೋಗಗಳನ್ನು ಅರಿತು ಜನನ ಮತ್ತು ಮರಣ ಸಂಭವಿಸಿದ 21 ದಿನಗಳೊಳಗಾಗಿ ನೋಂದಣಿ ಮಾಡಿಸಬೇಕು ಎಂದು ಸಲಹೆ ನೀಡಿದರು.

ಮರಣ ಹೊಂದಿದವರ ಹೆಸರಿನಲ್ಲಿ ಪಿಂಚಣಿ, ಮಾಸಾಶನ ಹೋಗುತ್ತಿದೆ ಎಂಬ ದೂರು ಬರುತ್ತವೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ನಗರಸಭೆ, ಪುರಸಭೆ ಅಧಿಕಾರಿಗಳು ಜನರಿಗೆ ತಿಳಿವಳಿಕೆ ನೀಡಿ, ಮರಣ ನೋಂದಣಿ ಮಾಡಿಸಲು ಹೇಳಬೇಕು. ಇಲ್ಲವಾದಲ್ಲಿ ಪ್ರಕರಣಗಳ ತನಿಖೆ ನಡೆದಾಗ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಆನ್‌ಲೈನ್‌ ನೋಂದಣಿ ಇರುವುದರಿಂದ ತಾಂತ್ರಿಕ ತರಬೇತಿ ಪಡೆಯುವುದು ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ಆಯೋಜಿಸಿರುವ ತರಬೇತಿಯ ಸದುಪಯೋಗ ಪಡೆದು ಅನುಷ್ಠಾನಕ್ಕೆ ತರಬೇಕು ಎಂದು ಅವರು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಹಬೀಬ್‌ ಉಸ್ಮಾನ್‌ ಪಟೇಲ್‌ ಮಾತನಾಡಿದರು. ಆರ್ಥಿಕ ಮತ್ತು ಸಾಂಖ್ಯೀಕ ನಿರ್ದೇಶನಾಲಯದ ಇ-ಜನ್ಮ ಸಂಯೋಜನಾಧಿಕಾರಿ ಮಧುಕುಮಾರ ಅವರು ಜನನ-ಮರಣ ನೋಂದಣಿ ನಿಯಮಗಳು ಮತ್ತು ಇ-ಜನ್ಮ ತಂತ್ರಾಂಶ ನಿರ್ವಹಣೆ ಕುರಿತು ತರಬೇತಿ ನೀಡಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಇಂಜಿನಿಯರ್‌ ಬಂಡೆಪ್ಪ ಆಕಳ ಉಪಸ್ಥಿತರಿದ್ದರು. ತರಬೇತಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ, ನಗರಸಭೆ, ಪುರಸಭೆ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ನಾಡಕಚೇರಿ ಸಿಬ್ಬಂದಿಗಳು ಭಾಗವಹಿಸಿದ್ದರು.

ಶಿವಕುಮಾರ ಹೈಯಾಳ ಪ್ರಾರ್ಥಿಸಿದರು. ಡಿಟಿಐ ಉಪ ಪ್ರಾಚಾರ್ಯ ಗುರು ಪಾಟೀಲ ಸ್ವಾಗತಿಸಿದರು. ಗ್ರಾಮ ಲೆಕ್ಕಾಧಿಕಾರಿ ಚನ್ನಬಸ್ಸು ನಿರೂಪಿಸಿದರು. ಜಿಲ್ಲಾ ಸಂಖ್ಯಾ ಸಂಗ್ರಹಣಾ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ ವಂದಿಸಿದರು.

21 ದಿನದೊಳಗೆ ನೋಂದಣಿ ಮಾಡಿಸಿ
ಜನನ ಅಥವಾ ಮರಣ ಘಟನೆ ಸಂಭವಿಸಿದ 21 ದಿನಗಳ ಒಳಗಾಗಿ ನೋಂದಣಿ ಮಾಡಿದಲ್ಲಿ ಯಾವುದೇ ಶುಲ್ಕ ಇರುವುದಿಲ್ಲ. 21 ದಿನಗಳ ನಂತರ 30 ದಿನಗಳ ಒಳಗಾಗಿ 2 ರೂ. ತಡ ಶುಲ್ಕದೊಂದಿಗೆ ನೋಂದಣಿ ಮಾಡಿಸಬಹುದು. 30 ದಿನಗಳ ನಂತರ 1 ವರ್ಷದೊಳಗಾಗಿ ಅಧಿಸೂಚಿತ ಪ್ರಾಧಿಕಾರದ ಲಿಖೀತ ಅನುಮತಿಯಿಂದ ಮತ್ತು ಒಬ್ಬ ಪ್ರಮಾಣೀಕರಣ ಅಧಿಕಾರಿ (ನೋಟರಿ ಪಬ್ಲಿಕ್‌) ಅಥವಾ ಈ ಕುರಿತು ರಾಜ್ಯ ಸರ್ಕಾರದಿಂದ ಅಧಿಕೃತನಾದ ಇತರೆ ಯಾವುದೇ ಒಬ್ಬ ಅಧಿಕಾರಿ ಮುಂದೆ ಮಾಡಿದ ಅಫಿಡವಿಟ್ ಹಾಜರುಪಡಿಸಿದ ಬಳಿಕ 5 ರೂ. ಗಳ ತಡ ಶುಲ್ಕವನ್ನು ಪಾವತಿಸಿ ನೋಂದಾಯಿಸಬಹುದು.
•ಸುನೀಲ ಬಿಸ್ವಾಸ್‌, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.