ಕಾಲುವೆ ಕಾಮಗಾರಿಯಲ್ಲಿ ಅವ್ಯವಹಾರ


Team Udayavani, Feb 11, 2019, 10:55 AM IST

yad-2.jpg

ಸುರಪುರ: ಹಸನಾಪುರ ಕಾಡಾ ಉಪ ವಿಭಾಗ-2ರಲ್ಲಿ ನೀರಾವರಿ ಕಾಲುವೆಗಳ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶೋಷಿತ ಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಹಸನಾಪುರ ರಾಜಾ ನಾಲ್ವಡಿ ವೆಂಕಟಪ್ಪ ನಾಯಕ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಪೊಲೀಸರ ಮಧ್ಯಸ್ಥಿಕೆಯಿಂದ ರಸ್ತೆ ತಡೆ ಕೈಬಿಟ್ಟು ಪ್ರತಿಭಟನೆ ಮುಂದುವರಿಸಿದರು. ಇಲಾಖೆ ಅಧಿಕಾರಿಗಳ ವಿರುದ್ಧ ದಿಕ್ಕಾರ ಘೋಷಣೆ ಕೂಗಿದರು.

ಹೋರಾಟ ನೇತೃತ್ವ ವಹಿಸಿದ್ದ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ಹಸನಾಪುರದ ಸಬ್‌ ಡಿವಿಜನ್‌-2ರ ಅಧಿಕಾರಿಗಳು ಸರ್ಕಾರಿ ಯೋಜನೆಗಳನ್ನು ನಿಯಮನುಸಾರವಾಗಿ ಮಾಡುತ್ತಿಲ್ಲ. ರೈತರಿಗೆ ಸಿಗಬೇಕಾಗಿದ್ದ ನೀರಾವರಿ ಸೌಲಭ್ಯ ಸಮರ್ಪಕ ತಲುಪಿಸುತ್ತಿಲ್ಲ ಎಂದು ಆರೋಪಿಸಿದರು.

ಎಫ್‌ಐಸಿ ಕಾಲುವೆ ಕಾಮಗಾರಿ, ಬಸಿ ಗಾಲುವೆ, ಚೆಕ್‌ ಡ್ಯಾಂ ನಿರ್ಮಾಣ ಸೇರಿದಂತೆ ಇತರೆ ಕಾಮಗಾರಿ ಸರಿಯಾಗಿ ಮಾಡುತ್ತಿಲ್ಲ. ರಸ್ತೆ ಕಾಮಗಾರಿಗಳಲ್ಲಿ ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಕಳಪೆ ಮಟ್ಟದ ಕಾಮಗಾರಿ ಮಾಡಿ ಬೋಗಸ್‌ ಬಿಲ್‌ ತೆಗೆದುಕೊಂಡಿದ್ದಾರೆ. ಅಗತ್ಯ ಇರುವ ಕೆಲ ಕಾಮಗಾರಿಗಳ ಟೆಂಡರ್‌ ಕರೆಯದೇ ಸರ್ಕಾರದ ಆದೇಶ ಗಾಳಿಗೆ ತೂರಿ ಮನಸ್ಸಿಗೆ ಬಂದಂತೆ ವರ್ತಿಸುತ್ತಿದ್ದಾರೆಂದು ದೂರಿದರು. ಒಕ್ಕೂಟದ 5 ಬೇಡಿಕೆ ಈಡೇರಿಸಿ ಅನುಕೂಲ ಮಾಡಿಕೊಡಬೇಕು. ನಿರ್ಲಕ್ಷ್ಯ ವಹಿಸಿದ್ದಲ್ಲಿ ಕಚೇರಿ ಎದುರು ಅಮರಣಾಂತ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಕೆಬಿಜೆಎನ್ನೆಲ್‌ ವ್ಯವಸ್ಥಾಪಕ ನಿರ್ದೇಶಕರಿಗೆ ಬರೆದ ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ್‌ ಮೂಲಕ ಸಲ್ಲಿಸಲಾಯಿತು. ಕಂದಾಯ ನಿರೀಕ್ಷಕ ಗುರುಬಸಪ್ಪ ಮನವಿ ಸ್ವೀಕರಿಸಿದರು. ಒಕ್ಕೂಟದ ಮುಖಂಡರಾದ ಗೋಪಾಲ ಬಾಗಲಕೋಟೆ, ಮಾನಯ್ಯ ದೊರೆ, ದೇವಪ್ಪ ದೇವರಮನಿ, ಬಸವರಾಜ ಕವಡಿಮಟ್ಟಿ, ಕೇಶಣ್ಣ ದೊರೆ, ತಿರುಪತಿ ದೊರೆ ಇದ್ದರು.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.