ಬಾವಿ ಸ್ವತ್ಛತೆಗೆ ನಿರ್ಲಕ್ಷ್ಯ: ನೀರಿಗಾಗಿ ಭಕ್ತರ ಪರದಾಟ


Team Udayavani, Feb 16, 2019, 9:55 AM IST

yad-1.jpg

ಶಹಾಪುರ: ಸಗರ ನಾಡಿನ ಆರಾಧ್ಯ ದೇವತೆ ಎಂದು ಕರೆಯಲ್ಪಡುವ ತಾಲೂಕಿನ ಸಗರ ಗ್ರಾಮ ಸಮೀಪದ ಮಹಲ್‌ ರೋಜಾ ಯಲ್ಲಮ್ಮ ಜಾತ್ರೆ ಇದೇ ಫೆ. 19ರಿಂದ ಒಂದು ವಾರ ಕಾಲ ನಡೆಯುತ್ತಿದ್ದು, ಹರಕೆ ಒಪ್ಪಿಸುವ ಭಕ್ತರಿಗೆ ತಾಲೂಕು ಆಡಳಿತ ಯಾವುದೇ ಮೂಲ ಸೌಕರ್ಯ ಕಲ್ಪಿಸದೆ
ಇರುವ ಕಾರಣ ಬರುವ ಭಕ್ತಾದಿಗಳು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ.

ಈಗಾಗಲೇ ಕಳೆದ ಮೂರು ನಾಲ್ಕು ವಾರದಿಂದ ಪ್ರತಿ ಮಂಗಳವಾರ ಸಾಕಷ್ಟು ಜನರು ದೇವಸ್ಥಾನಕ್ಕೆ ನೈವೇದ್ಯ, ಕಾಯಿ ಕರ್ಪೂರ ಅರ್ಪಿಸಲು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ಫೆ. 19ರಂದು ಪಲ್ಲಕ್ಕಿ ಉತ್ಸವ ಜರುಗಲಿದೆ. ಸಾವಿರಾರು ಜನ ಭಕ್ತರು ಸೇರಲಿದ್ದು, ಇದುವರೆಗೂ ತಾಲೂಕಾಡಳಿತ ಯಾವುದೇ ಮೂಲ ಸೌಲಭ್ಯ ಕಲ್ಪಿಸಲು ಮುಂದಾಗಿಲ್ಲ ಎಂದು ಭಕ್ತಾದಿಗಳು ಆರೋಪಿಸಿದ್ದಾರೆ.

ಸಮೀಪ ಇರುವ ಬಾವಿ ನೀರು ಕಲುಷಿತಗೊಂಡಿದ್ದು, ಅದನ್ನೆ ಇಲ್ಲಿನ ಭಕ್ತಾದಿಗಳು ಮತ್ತು ಜಾತ್ರಾ ನಿಮಿತ್ತ ವಿವಿಧ ಸಾಮಗ್ರಿ ಮಾರಾಟಕ್ಕೆ ಬಂದು ನೆಲಿಸಿರುವ ಮಾರಾಟಗಾರರು ಕಲುಷಿತ ನೀರನ್ನೆ ಬಳಕೆ ಮಾಡುತ್ತಿರುವುದು ವಿಪರ್ಯಾಸವಾಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ಈ ದೇವಸ್ಥಾನ ತಾಲೂಕು ಆಡಳಿತ ವ್ಯವಸ್ಥೆಗೆ ಒಳಪಡುತ್ತದೆ. ಜಾತ್ರೆಗೆ ಮುನ್ನ ಪೂರ್ವ ಸಿದ್ಧತೆ ಮಾಡಿಕೊಳ್ಳದ ತಾಲೂಕು ಆಡಳಿತ ಕಾಟಾಚಾರಕ್ಕೆಂದು ಅಲ್ಲಲ್ಲಿ ಕೊಳವೆ ಬಾವಿ ಕೊರೆದು ಕೈಚಲ್ಲಿದೆ. ಪರ್ಯಾಯ ವ್ಯವಸ್ಥೆ ಮಾಡದಿರುವ ಕಾರಣ ಈ ಬಾರಿ ಭಕ್ತಾದಿಗಳು ಕುಡಿಯುವ ನೀರಿಗಾಗಿ ಜಾತ್ರೆಗೂ ಮುನ್ನ ಪರದಾಡುವಂತಾಗಿದೆ.

ದೇವಸ್ಥಾನ ಹುಂಡೆಯಿಂದ ಮತ್ತು ಜಾತ್ರೆ ನಿಮಿತ್ತ ಮಾರಾಟ ಮಳಿಗೆಗಳಿಂದ ದೇಣಿಗೆ ಲಕ್ಷಾಂತರ ರೂ. ಸಂಗ್ರಹವಾದರೂ ಮೂಲ ಸೌಕರ್ಯ ವ್ಯವಸ್ಥೆ ಮಾಡಲು ತಾಲೂಕು ಆಡಳಿತ ನಿರ್ಲಕ್ಷ್ಯವಹಿಸಿದೆ ಎಂದು ಭಕ್ತಾ ದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವಸ್ಥಾನ ಸಮೀಪದಲ್ಲಿ ಇರುವ ಬಾವಿಗಳಲ್ಲಿ ಇರುವ ನೀರು ದುರ್ವಾಸನೆ ಬೀರುತ್ತಿವೆ. ಬರಗಾಲ ಆವರಿಸಿರುವುದರಿಂದ ನೀರನ ಸೆಲೆ ಬತ್ತಿವೆ ಎನ್ನಲಾಗಿದೆ. ಈಗಲೇ ನೀರಿನ ಬವಣೆಯ ಬಿಸಿ ಭಕ್ತಾದಿಗಳಿಗೆ ತಟ್ಟಿದೆ.

ಇನ್ನೂ ಜಾತ್ರೆ ದಿನ ಮಕ್ಕಳು ವೃದ್ಧಾದಿಯಾಗಿ ಬರುವ ಜನಕ್ಕೆ ನೀರಿಲ್ಲದೆ ತತ್ತರಿಸುವ ಸ್ಥಿತಿ ಬರಲಿದೆ. ಹದಗೆಟ್ಟ ರಸ್ತೆ, ಸ್ವತ್ಛಗೊಳ್ಳದ ಬಾವಿ ನೀರು, ಶೌಚಾಲಯ ವ್ಯವಸ್ಥೆ ಇಲ್ಲದೆ ಜಾತ್ರೆಗೆ ಬಂದ ಜನರು ತೊಂದರೆ ಅನುಭವಿಸುವಂತಾಗಿದೆ. ಈಗಲೇ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಜನರು ಆಗ್ರಹಿಸಿದ್ದಾರೆ. ಕೂಡಲೇ ಜಿಲ್ಲಾಡಳಿತ ಇತ್ತ ಗಮನ ಹರಿಸಬೇಕು ಮತ್ತು ಮೂಲ ಸೌಕರ್ಯ ತಕ್ಷಣಕ್ಕೆ ಕಲ್ಪಿಸುವ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ನೀಡುವ ದೇಣಿಗೆ ಹಣ ಮತ್ತು ಜಾತ್ರೆಯಲ್ಲಿ ವಿವಿಧ ಮಳಿಗೆಗಳು ಟೆಂಟ್‌ ಹಾಕಿ, ಸಿಹಿ ತಿಂಡಿ, ಮಕ್ಕಳ ಆಟಿಕೆ ಇತರೆ ಸಾಮಾಗ್ರಿ ಮಾರಾಟ ಮಾಡುವುವರಿಂದ ದೇಣಿಗೆ ಪಡೆದ ದುಡ್ಡನ್ನು ಲೇಖಾನುದಾನ ಸ್ವತ್ಛತೆಗೆ ಬಳಸಲಾಗುತ್ತಿದೆ. ಜೀರ್ಣೋದ್ಧಾರಕ್ಕೆ ಹಣ ಎಲ್ಲಿಂದ ಬರಬೇಕು.
 ಸಂಗಮೇಶ ಜಿಡಗಾ, ತಹಶೀಲ್ದಾರ್‌

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.