ಮೂಲ ಸೌಕರ್ಯಗಳಿಗೆ ಆದ್ಯತೆ
Team Udayavani, Mar 6, 2019, 9:39 AM IST
ಸುರಪುರ: ನೀರು ಶೌಚಾಲಯ ಸೇರಿದಂತೆ ನಗರದ ಜನತೆಗೆ ಮೂಲ ಸೌಕರ್ಯ ಒದಗಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅನುಷ್ಠಾನ ಅಧಿಕಾರಿಗಳು ಕೈ ಜೋಡಿಸಿ ನಗರದ ಅಭಿವೃದ್ಧಿಗೆ ಸಹಕರಿಸಬೇ ಎಂದು ಶಾಸಕ ರಾಜುಗೌಡ ಹೇಳಿದರು.
ನಗರದಲ್ಲಿ ಸೋಮವಾರ ವಿವಿಧ ವಾರ್ಡಗಳಲ್ಲಿ 1 ಕೋಟಿ ವೆಚ್ಚದ 6 ನೂತನ ಕುಡಿಯುವ ಶುದ್ಧ ನೀರು ಘಟಕಗಳ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಬೇಸಿಗೆ ಆರಂಭವಾಗಿದೆ. ನದಿಯಲ್ಲಿ ಸರಿಯಾಗಿ ನೀರಿಲ್ಲ. ಇರುವಷ್ಟು ನೀರನ್ನು ನಗರಸಭೆಯವರು ಸಮರ್ಪಕವಾಗಿ ಸರಬರಾಜು ಮಾಡುತ್ತಿಲ್ಲ. ಹೀಗಾಗಿ ಜನತೆ ನೀರಿಗಾಗಿ ತತ್ತರಿಸುತ್ತಿದ್ದಾರೆ. ಜನರ ತಾಳ್ಮೆ ಪರೀಕ್ಷಿಸ ಬೇಡಿ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆ ಇಂಜಿನಿಯರ್ ಹಣಮಂತಪ್ಪ ಅಂಬ್ಲಿ ಅವರಿಗೆ ಕಡಕ್ಕಾಗಿ ಎಚ್ಚರಿಕೆ ನೀಡಿದರು.
ನಗರದ ಜನತೆಗೆ ಶುದ್ಧ ನೀರು ಕೊಡಬೇಕು ಎನುವ ಉದ್ದೇಶದಿಂದ ಸಾಕಷ್ಟು ಪ್ರಯತ್ನ ಪಟ್ಟು ಅನುದಾನ ತಂದಿದ್ದೇನೆ. ಇದನ್ನು ವ್ಯರ್ಥ ಆಗಲಿಕ್ಕೆ ಬಿಡುವುದಿಲ್ಲ ಎಂದು ತಾಕೀತು ಮಾಡಿದರು.
ಇಲಾಖೆ ಎಇಇ ಹಣಮಂತಪ್ಪ ಅಂಬಲಿ ಮಾತನಾಡಿ, ಮುಂಜುಮದಾರಗಲ್ಲಿ ಕುಂಬಾರ ಪೇಟ. ಕೆಂಗೂರಿ ವೃತ್ತ, ತರಕಾರಿ ಮಾರುಕಟ್ಟೆ, ತಿಮ್ಮಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರ ರಂಗಂಪೇಟ ತರಕಾರಿ ಮಾರುಕಟ್ಟೆ 6 ಕಡೆ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಾಹಿತಿ ನೀಡಿದರು.
ನಗರಸಭೆ ಪೌರಾಯುಕ್ತ ಏಜಾಜ್ ಹುಸೇನ್, ತಾಪಂ ಅಧ್ಯಕ್ಷೆ ಅನುಸೂಬಾಯಿ ತಿರುಪತಿ ಚವ್ಹಾಣ, ಯಲ್ಲಪ್ಪ ಕುರುಕುಂದಿ, ಹನುಮಪ್ಪ ನಾಯಕ ತಾತಾ, ವೇಣುಮಾಧವ ನಾಯಕ ಮರಿಲಿಂಗಪ್ಪ ನಾಯಕ ಕರ್ನಾಳ, ಗ್ಯಾನಚಂದ ಜೈನ್, ಎಚ್.ಸಿ. ಪಾಟೀಲ, ದುರ್ಗಪ್ಪ ಗೋಗಿಕೇರಾ, ವಿಷ್ಣು ಗುತ್ತೇದಾರ್, ನರಸಿಂಹಕಾಂತ ಪಂಚಮಗಿರಿ, ಶಿವಕುಮಾರ ಕಟ್ಟಿಮನಿ, ಅಯ್ಯಣ್ಣ ಪೂಜಾರಿ, ಶಂಕರ ನಾಯಕ, ವಿರೂಪಾಕ್ಷಿ ಕರ್ನಾಳ, ಈಶ್ವರ ನಾಯಕ, ಶ್ರೀನಿವಾಸ ದರಬಾರಿ, ಬಸವರಾಜ ಕೊಡೇಕಲ್, ಮಲ್ಲೇಶಿ ಪಾಟೀಲ ನಾಗರಾಳ, ಭೀಮಾಶಂಕರ ಬಿಲ್ಲವ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ