ಮುಂಜಾಗ್ರತೆ ಕ್ರಮ ಅನುಸರಿಸಿದರೆ ಅನಾಹುತದಿಂದ ಪಾರು
Team Udayavani, Mar 11, 2019, 8:02 AM IST
ಕಕ್ಕೇರಾ: ಜನರು ಮುಂಜಾಗ್ರತೆ ಕ್ರಮ ಅನುಸರಿಸಿದಾಗ ಅಗ್ನಿ, ಪ್ರವಾಹ ಅನಾಹುತಗಳಿಂದ ಪಾರಾಗಬಹುದು ಎಂದು ತಹಶೀಲ್ದಾರ್ ಸುರೇಶ ಅಂಕಲಗಿ ಹೇಳಿದರು.
ನೀಲಕಂಠರಾಯನ ಗಡ್ಡಿಯಲ್ಲಿ ಅಗ್ನಿ ಶಾಮಕ ದಳದ ಅಧಿಕಾರಿಗಳಿಂದ ಪ್ರವಾಹ ಸುರಕ್ಷತೆ ಹಾಗೂ ಅಗ್ನಿ ನಂದಿಸುವ ಕುರಿತು ಹಮ್ಮಿಕೊಂಡಿದ್ದ ಅಣುಕು ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಹ ಎದುರಾದಾಗ ಈಜು ಕಾಯಿ ಜತೆಗೆ ಲೈಪ್ ಜಾಕೇಟ್ ಹಾಕಿಕೊಂಡರೆ ಪ್ರವಾಹದಿಂದ ಪಾರಾಗಬಹುದು ಎಂದು ಹೇಳಿದರು.
ಗ್ರಾಮದಲ್ಲಿ ಬೆಂಕಿ ಅವಘಡ ಸಂಭವಿಸಿದರೆ ಒದ್ದೆಯಾದ ಬಟ್ಟೆ ಸುತ್ತಿಕೊಳ್ಳಬೇಕು. ನಂತರ ಅದನ್ನು ನೀರಿನ ಮೂಲಕ ನಂದಿಸುವ ಪ್ರಯತ್ನ ನಡೆಸಬೇಕು. ಅಥವಾ ಅಗ್ನಿ ಶಾಮಕದಳ ಅಧಿಕಾರಿಗಳಿಗೆ ಮಾಹಿತಿ ತಿಳಿಸಬೇಕು ಎಂದು ಹೇಳಿದರು. ಅಗ್ನಿಶಾಮಕ ಇಲಾಖೆ ಪ್ರಭಾರಿ ಅಧಿಕಾರಿ ಸಣ್ಣಮಲ್ಲಯ್ಯ ಮಾತನಾಡಿ, ಇಲ್ಲಿನ ಜನರಿಗೆ ಪ್ರವಾಹ ಬಗ್ಗೆ ಸಾಕಷ್ಟು ಗೊತ್ತಿದೆ. ಈಜುಕಾಯಿ ಜತೆಗೂ ಲೈಫ್
ಜಾಕೇಟ್ ಬಳಸುವುದು ಸುರಕ್ಷತೆಗೆ ಉತ್ತಮವಾಗಿದೆ ಎಂದು ಅವರು ಸುರಕ್ಷತೆ ಕ್ರಮಗಳ ಕುರಿತು ವಿವರಿಸಿದರು.
ನಂತರ ಅಗ್ನಿ ನಂದಿಸುವ ಕುರಿತು ಅಣುಕು ಪ್ರದರ್ಶನ ನಡೆಸಲಾಯಿತು. ಉಪ ತಹಶೀಲ್ದಾರ್ ರೇವಪ್ಪ ತೆಗ್ಗಿನಮನಿ, ಪುರಸಭೆ ಅಧ್ಯಕ್ಷ ದಶರಥ ಆರೇಶಂಕರ, ಬಸವರಾಜ ಶಿವಪೂಜಿ, ತಿರುಪತಿ ಪವಾರ, ನಿಂಗಪ್ಪನಾಯ್ಕ ರಾಠೊಡ, ಪುರಸಭೆ ಮುಖ್ಯಾಧಿಕಾರಿ ಆದಪ್ಪ ಸುರಪುರಕರ್, ಕಂದಾಯ ನಿರೀಕ್ಷಕ ವಿಠ್ಠಲ ಬಂದಾಳ, ಗ್ರಾಮಲೆಕ್ಕಿಗ ಸಂತೋಷ ರಡ್ಡಿ, ಅಗ್ನಿಶಾಮಕದಳದ ಸಿಬ್ಬಂದಿ ಅಶೋಕ, ಸದ್ದಾಂ, ವೆಂಕಟೇಶ, ಕೃಷ್ಣ ದೊರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ