ಪ್ರಿಯತಮ ಕರುಣೆಯ ತೋರೆಯ !


Team Udayavani, Jul 14, 2017, 3:25 AM IST

holding-sari.jpg

ಹಸಿರು ಜರತಾರಿ ಸೀರೆ, ರವಿಕೆ, ಹಸಿರು ಗಾಜಿನ ಬಳೆಗಳನ್ನು ಧರಿಸಿ ಪಚ್ಚೆ ಹಾರ, ಕಿವಿಯೋಲೆಯ ಹಾಕಿಕೊಂಡು ಗೆಳತಿ ಗಾನಕೋಗಿಲೆಯ ಬಳಿ ಸಂದೇಶ ಕಳಿಸಿಹಳು, “ಪ್ರಿಯತಮ ಕರುಣೆಯ ತೋರೆಯ…’

ಚೈತ್ರಾಳ ಪಾರ್ಲರಿನಲ್ಲಿ ಸಕಲ ಸೌಂದರ್ಯವರ್ಧಕ ಧಾರಣೆ ನಡೆದಿದೆ. ಹುಬ್ಬು ತೀಡಿದಷ್ಟು ಸಮಾಧಾನವಿಲ್ಲ ಅವಳಿಗೆ. ವಿಶೇಷ ಪಪ್ಪಾಯ, ಅರಸಿನ, ಲೋಳೆಸರ, ಮುಲ್ತಾನಿ ಮಿಟ್ಟಿ ಪ್ಯಾಕ್‌ಗಳನ್ನು ಹಾಕಿ ಮಾಲಿಶ್‌ ಮಾಡಿ ಮುಖವೆಲ್ಲ ಪಳಪಳ ಹೊಳೆಯುತ್ತಿದೆ.ಅವಳಿಗೇನು ಕಡಿಮೆ ಅವಳದೇ ಎಕರೆಗಟ್ಟಲೆ ತೋಟ. ಇನ್ನೂ ಬಿಡದೇ ಎಳನೀರು, ಜೇನು, ಕೆನೆ, ಎಣ್ಣೆಯ ಮಾಲಿಶ್‌ ಮಾಡಿ ಮೈಯೆಲ್ಲ ಚೈತನ್ಯಯುತವಾಯಿತು.ಮೆನಿಕ್ಯೂರ್‌, ಪೆಡಿಕ್ಯೂರ್‌ ಮಾಡಿ ಕೈಕಾಲುಗಳು ಲಕಲಕನೆ ಹೊಳೆಯುತ್ತಿವೆ. ಬೀಟ್‌ರೂಟ್‌, ತಾಜಾ ಚಹಾದ ಎಲೆಗಳು, ಮೆಹೆಂದಿಗಳನ್ನು ಕಲಸಿ ಕೂದಲಿಗೆ ಹಚ್ಚಿ, ಇನ್ನೂ ಆಕೆಯ ಸ್ನಾನಕ್ಕೋ ಹಾಲಿನ ಹೊಳೆಯೇ ಹರಿದಿದೆ.

ಲೋಳೆಸರದ ಶಾಂಪೂವಿನಿಂದ ಕೂದಲನ್ನು ತೊಳೆದು, ಗುಲಾಬಿ ಸಾಬೂನಿನಿಂದ ಮೈತೊಳೆದು, ಬಿಸಿನೀರ ಶಾಖ, ಲೋಬಾನದ ಹೊಗೆಯನ್ನು ನೀಡಿ ಅವಳ ನೆಚ್ಚಿನ ಹಸಿರು ರೇಷ್ಮೆ ಸೀರೆಯ ಉಟ್ಟು, ಬೆಂಡೋಲೆ, ನೆಕ್ಲೇಸು, ಮೂಗುತಿ, ಬಳೆ, ಸೊಂಟಕ್ಕೆ ಡಾಬು, ಕೈಗೆ ವಂಕಿಯನ್ನು ಧರಿಸಿ ಮದುಮಗಳಂತೆ ಕಂಗೊಳಿಸುತ್ತ, ನಿಂತಿಹಳು ಮಹಾರಾಣಿ ಭೂಮಿಕಾದೇವಿ.

ಇಷ್ಟು ದಿನಗಳ ವಿರಹವನ್ನು ತಾಳಲಾರದೇ ಕೋಗಿಲೆಯ ಬಳಿ ಆತನಿಗೆ ಕಳುಹಿಸಿದ ಸಂದೇಶ ಆತನಿಗೆ ತಲುಪಿತೇ ಎನ್ನುವ ಅನುಮಾನ. ಕೋಗಿಲೆಯ ಬಳಿ ಕೇಳಲು, ಕುಹೂ ಕುಹೂ ಎಂದು ಹೂಂಕಾರ ಸೂಚಿಸಿದರೂ, ಆಕೆಗೆ ಸಮಾಧಾನವಿಲ್ಲ. ತನ್ನ ಕೆಲಸ ಕಾರ್ಯದ ನಡುವೆ ನನ್ನ ಸಂದೇಶ ಮರೆತನೇನೋ, ಅವನ ಸ್ವಾಗತಕ್ಕಾಗಿ ತಾನು ನಡೆಸಿದ ತಯಾರಿ ಕಡಿಮೆಯಾಯಿತೇ ಎನ್ನುವ ಅನುಮಾನ ಬೇರೆ.ಅವನ ಸ್ವಾಗತಕ್ಕಾಗಿ ಪನ್ನೀರು ಸಿದ್ಧವಿದೆಯೇ ಎಂದು ಇನ್ನೊಮ್ಮೆ ಖಚಿತಪಡಿಸಿಕೊಂಡಳು. ಅವನಿಗಾಗಿ ಮಾಡಿಟ್ಟ ಅವನಿಷ್ಟದ ಖಾದ್ಯಗಳ ಬೆಂಡೆಹುಳಿ, ಬದನೆ ಎಣ್ಣೆಗಾಯಿ, ಮೆಣಸಿನಕಾಯಿ ಬಜೆ, ಪಲ್ಯಗಳು, ಬೇಳೆಸಾರು, ಪ್ಯಾರಿಶ್‌ ಚಿತ್ರಾನ್ನ , ಗೋಧಿ ಹುಗ್ಗಿಯಂತೂ ಆತನಿಗೆ ಪಂಚಪ್ರಾಣ, ಕೇಸರಿಬಾತು ಅಬ್ಟಾ ಎಷ್ಟು ಘಮಘಮ ಪರಿಮಳ ಸೋಕಿ ಅವನು ಏಳು ಸಮುದ್ರದ ದೂರದಲ್ಲಿದ್ದರೂ ಓಡಿ ಬರುವುದು ಖಚಿತ! ಮತ್ತೂಮ್ಮೆ ಬಿಸಿಯಾಗಿವೆಯೇ ಎಂದು ಖಚಿತ ಪಡಿಸಿಕೊಂಡಳು. 

ಅನ್ನವನ್ನಂತೂ ಬಿಸಿಯಾಗಿಯೇ ಬಡಿಸಬೇಕೆಂದು ಹಾಲಲ್ಲಿ ಬೇಯಿಸಲಿಟ್ಟಿದ್ದಳು.ಅಷ್ಟು ಪ್ರೀತಿಸುವವಳು ಅವನ ಎಲ್ಲ ಸೀಕ್ರೆಟುಗಳನ್ನು ಬಲ್ಲವಳು, ಅವನ ಗೆಳೆಯ ಚಾತಕನನ್ನೇ ಕರೆದಳು. ಚಾತಕನು ಕರೆದರೆ ಅವನು ಎಲ್ಲಿದ್ದರೂ ಓಡಿ ಬರುವನೆಂದು ಅರಿತವಳು. ಚಾತಕನು ಕರೆದನು. ವರುಣನು ಬಂದನು. ಪ್ರಿಯಕರನ ಭವ್ಯ ಸ್ವಾಗತವ ಕಣ್ಣು ತುಂಬಿಕೊಳ್ಳಲು ಜೀವರಾಶಿಗಳೆಲ್ಲ ನೆರೆದು, ಪ್ರೀತಿಯ ವಾಲಗ ಊದಿ ಅವರ ಏಕಾಂತಕ್ಕೆ ಭಂಗಬಂದಿತೆಂದು ತಮ್ಮ ತಮ್ಮ ಗೂಡನ್ನು ಸೇರಿದವು.   

– ಸಾವಿತ್ರಿ ಶ್ಯಾನಭಾಗ್‌

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.