ವಿದ್ಯಾರ್ಥಿಗಳಿಗೆ ಪುಸ್ತಕ ಭಾಗ್ಯ


Team Udayavani, Jul 20, 2018, 6:00 AM IST

x-16.jpg

ಎಸ್‌ಡಿಎಂ ಕಾಲೇಜಿನ ಬಿಬಿಎ ವಿಭಾಗ “ಪೇಪರ್‌ ಪೂಲ್‌ಕಾಂಪೇಯ್ನ’ ಎಂಬ ಹೊಸ ಸಮಾಜಮುಖಿ ಕಾರ್ಯವನ್ನು ಕೈಗೊಂಡು, ಆವಶ್ಯಕತೆ ಇರುವವರ ಮುಖದಲ್ಲಿ ಮಂದಹಾಸವನ್ನು ಮೂಡಿಸುವಲ್ಲಿ ಯಶಸ್ವಿಯಾಯಿತು. ಪುಸ್ತಕದ ಅಗತ್ಯ ಇದ್ದ ಸೌಲಭ್ಯ ವಂಚಿತ ಮಕ್ಕಳ ಬಾಳಿನಲ್ಲಿ ಹೊಸ ಆಶಾಕಿರಣವನ್ನು  ಸೃಷ್ಟಿಸಿ, ಆದರ್ಶ ಸೇವೆಯನ್ನು ಮಾಡಿ ಆದರ್ಶಪ್ರಾಯರಾಗಿದ್ದಾರೆ ಎಸ್‌ಡಿಎಂ ಕಾಲೇಜಿನ ಬಿಬಿಎ ವಿದ್ಯಾರ್ಥಿಗಳು. 

ಏನಿದು ಪೇಪರ್‌ ಪೂಲ್‌ ಕಾಂಪೇಯ್ನ ?
ಸಾಮಾನ್ಯವಾಗಿ ನಾವೆಲ್ಲ ಉಪಯೋಗಿಸಿದ ನೋಟು ಪುಸ್ತಕಗಳಲ್ಲಿ ಕಾಗದ ಉಳಿದರೆ ಅದನ್ನು ಹಾಗೆಯೇ ಬಿಟ್ಟು ವ್ಯರ್ಥ ಮಾಡುತ್ತೇವೆ. ಅದನ್ನು ಮರಳಿ ಬಳಸುವ ಗೋಜಿಗೆ ಹೋಗುವುದಿಲ್ಲ. ಈ ಶೈಕ್ಷಣಿಕ ವರ್ಷ ಮುಕ್ತಾಯವಾಗುತ್ತಿದ್ದಂತೆ, ಅವುಗಳನ್ನು ಒಂದು ಮೂಲೆಯಲ್ಲಿ ಬಿಸಾಡಿ, ಮತ್ತೆ ಮುಂದಿನ ವರ್ಷ ಹೊಸ ಪುಸ್ತಕಗಳನ್ನು ಕೊಳ್ಳುತ್ತಾರೆ ವಿದ್ಯಾರ್ಥಿಗಳು. ಹೀಗೆ, ಬಳಕೆಯಾಗದೇ ಉಳಿದ ಕಾಗದಗಳನ್ನು ಸಂಗ್ರಹಿಸಿ ಅವುಗಳಿಂದ ಪುಸ್ತಕಗಳನ್ನು ತಯಾರಿಸುವ ಜವಾಬ್ದಾರಿಯನ್ನು ವಹಿಸಿಕೊಂಡರು ತೃತೀಯ ಬಿಬಿಎ ವಿದ್ಯಾರ್ಥಿಗಳು.

ಕಾರ್ಯರೂಪಕ್ಕೆ ತಂದಾಗ 
ಈ ಯೋಜನೆಯ ರೂವಾರಿ ಬಿಬಿಎ ವಿಭಾಗದ ಅಧ್ಯಾಪಕ ಶರಶ್ಚಂದ್ರ. ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಆಲೋಚನೆಯಿಂದ ವ್ಯಾಟ್ಸಾಪ್‌ ಗ್ರೂಪ್‌ಗ್ಳಲ್ಲಿ ನಿರಂತರವಾಗಿ ಸಂದೇಶಗಳನ್ನು ರವಾನಿಸಿದರು. ಪ್ರಾರಂಭದಲ್ಲಿ ಈ ಯೋಜನೆಯ ಗುರಿ ಇದ್ದದ್ದು 4000 ಕಾಗದದ ಹಾಳೆಗಳನ್ನು ಸಂಗ್ರಹಿಸಬೇಕೆಂದು. ಆದರೆ, ವಿದ್ಯಾರ್ಥಿಗಳ ಸ್ವಆಸಕ್ತಿಯಿಂದ ಸುಮಾರು 24,900 ಕಾಗದ ಸಂಗ್ರಹವಾಯಿತು. ಆನಂತರ ಗಾತ್ರದ ಆಧಾರದ ಮೇಲೆ ಕಾಗದಗಳನ್ನು ವರ್ಗೀಕರಿಸಿ, ಮಂಜುಶ್ರೀ ಪ್ರಿಂಟರ್ ಸಹಯೋಗದೊಂದಿಗೆ 240 ಪುಸ್ತಕಗಳನ್ನು ತಯಾರಿಸಲಾಯಿತು.

ಶಾಲೆಯ ಆಯ್ಕೆ 
ಪುಸ್ತಕಗಳು ತಯಾರಾದ ಮೇಲೆ  ಯಾವ ಶಾಲೆಯ ವಿದ್ಯಾರ್ಥಿಗಳಿಗೆ ಹಂಚಬೇಕೆಂಬ ಸವಾಲು ಬಿಬಿಎ ವಿಭಾಗಕ್ಕೆ ಎದುರಾಯಿತು. ನಂತರ ಬೆಳ್ತಂಗಡಿ ಆಸುಪಾಸಿನ ಸರಕಾರಿ ಶಾಲೆಗಳನ್ನು ಭೇಟಿ ಮಾಡಿ, ಮಾಹಿತಿಗಳನ್ನು ಸಂಗ್ರಹಿಸಿ, ಹೆಚ್ಚಿನ ಅಗತ್ಯತೆ ಇರುವ ಶಾಲೆಯನ್ನು ಪಟ್ಟಿ ಮಾಡಲಾಯಿತು.ಅಲ್ಲಿನ ಪರಿಸ್ಥಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ ಕೊನೆಗೆ ನಾರಾವಿ ಸಮೀಪದ ಕುತ್ಲೂರು ಸರಕಾರಿ ಶಾಲೆಯನ್ನು ಪುಸ್ತಕ ವಿತರಣೆಗೆ ಆಯ್ಕೆ ಮಾಡಲಾಯಿತು.ಇಲ್ಲಿನ 46 ಅವಕಾಶ ವಂಚಿತ ಬಡ ವಿದ್ಯಾರ್ಥಿಗಳಿಗೆ ಈ ಪುಸ್ತಕಗಳನ್ನು ವಿತರಿಸಲಾಯಿತು. ಪ್ರತಿಯೊಬ್ಬ ವಿದ್ಯಾರ್ಥಿಗೆ ತಲಾ ಐದು ನೋಟುಪುಸ್ತಕಗಳು, ಜಾಮಿಟ್ರಿ ಬಾಕ್ಸ್‌, ಪೆನ್ನು, ಪೆನ್ಸಿಲ್‌, ರಬ್ಬರ್‌, ಶಾರ್ಪ್‌ನರ್‌ ಸೇರಿದಂತೆ ಪ್ರಾಥಮಿಕ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಸಾಮಗ್ರಿಗಳನ್ನು ಈ ಮೂಲಕ ಪೂರೈಸಲಾಯಿತು.

ಕೇವಲ ಹೆಸರಿಗಾಗಿ ಮಾಡುವ ಇತರ ಕಾರ್ಯಗಳಿಗಿಂತಲೂ ಇಂತಹ ಕಾರ್ಯಗಳನ್ನು ಮಾಡಿದರೆ ಸಾರ್ಥಕತೆಯ ಭಾವ ನಮ್ಮನ್ನು ಆವರಿಸುತ್ತದೆ. ಜೊತೆಗೆ ಸಮಾಜದಲ್ಲಿ ನಿಜಕ್ಕೂ ಅಗತ್ಯ ಇರುವ ಕೈಗಳಿಗೆ ಸಹಾಯಹಸ್ತವನ್ನು ಚಾಚಿ ಒಳಿತನ್ನು ಮಾಡಿದಂತಾಗುತ್ತದೆ. ಈ ಸತ್ಕಾರ್ಯಕ್ಕೆ ಎಸ್‌ಡಿಎಂ ಸಂಸ್ಥೆಗಳ ಕಾರ್ಯದರ್ಶಿಯಾದ ಡಾ. ಬಿ. ಯಶೋವರ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಮ್ಮ ಶಾಲೆಯಲ್ಲಿ ಉಚಿತ ಶಿಕ್ಷಣ, ಬಿಸಿ ಊಟದ ವ್ಯವಸ್ಥೆ ಇದ್ದರೂ ಪೋಷಕರಿಗೆ ವಿದ್ಯಾರ್ಥಿಗಳ ಪುಸ್ತಕದ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಮಾಡಿದ ಈ ಕಾರ್ಯವು ನಿಜಕ್ಕೂ ಶ್ಲಾಘನೀಯ ಎಂದು. 

ಕೃಷ್ಣಪ್ಪ ನಾೖಕ್‌, ಮುಖ್ಯೋಪಾಧ್ಯಾಯರು, ಸ.ಉ.ಪ್ರಾ.ಶಾಲೆ, ಕುತ್ಲೂರು ಹೇಳಿದ್ದಾರೆ ಕಲಿಕೆಯ ಸಂದರ್ಭದಲ್ಲಿಯೇ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿಯ ಬೀಜವನ್ನು ಬಿತ್ತಿದರೆ, ಮುಂದೆ ಅವರು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ. ನಮ್ಮ ಕೈಲಾದಷ್ಟು ಸಹಾಯ ಮಾಡಬೇಕೆಂಬ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಂಡೆವು. ಈ ಯೋಜನೆ ಯಶಸ್ವಿಯಾಗಿದೆ ಎಂದು ಹೇಳಲು ಹೆಮ್ಮೆ ಪಡುತ್ತೇನೆ.

ಪ್ರಜ್ಞಾ  ಹೆಬ್ಟಾರ್‌,  ಅಂತಿಮ ಪತ್ರಿಕೋದ್ಯಮ ಎಸ್‌ಡಿಎಂ ಕಾಲೇಜು, ಉಜಿರೆ

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.