ಸಂಸರ ಬದುಕು “ಬಿಂಬ’ ಮೂಲಕ ಅನಾವರಣ: ಬೊಂಬಾಟ್ ಟ್ರೈಲರ್ ವೀಕ್ಷಿಸಿ
Team Udayavani, Sep 8, 2018, 5:08 PM IST
ಒಂದೇ ಶಾಟ್, ಒಬ್ಬ ಕಲಾವಿದ, ಒಂದೇ ಸ್ಥಳ …ಇದೆಲ್ಲಾ “ಬಿಂಬ… ಆ ತೊಂಬತ್ತು ನಿಮಿಷಗಳು’ ಚಿತ್ರದ ಹೊಸ ಪ್ರಯೋಗ. ಹೌದು, ಕನ್ನಡದಲ್ಲಿ ಈಗಾಗಲೇ ಸಾಕಷ್ಟು ಪ್ರಯೋಗಾತ್ಮಕ ಸಿನಿಮಾಗಳು ಬಂದಿವೆ. ಆ ಸಾಲಿಗೆ “ಬಿಂಬ … ಆ ತೊಂಬತ್ತು ನಿಮಿಷಗಳು’ ಹೊಸ ಸೇರ್ಪಡೆ. ಎಂ.ಎಂ .ಮೂವೀಸ್ ಬ್ಯಾನರ್ನಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ಜಿ. ಮೂರ್ತಿ ಮತ್ತು ಕೆ.ವಿ. ಶ್ರೀನಿವಾಸ ಪ್ರಭು ನಿರ್ದೇಶಕರು. ಚಿತ್ರಕ್ಕೆ ಶ್ರೀನಿವಾಸ ಪ್ರಭು ಕೇಂದ್ರಬಿಂದು. ಇಲ್ಲಿ ಅವರೊಬ್ಬರೇ ಕಲಾವಿದರು ಎಂಬುದು ವಿಶೇಷ. ಇದು ಸ್ವಾತಂತ್ರ್ಯ ಪೂರ್ವದಲ್ಲಿದ್ದಂತಹ ಕನ್ನಡದ ಶ್ರೇಷ್ಠ ನಾಟಕಕಾರ, ಸಾಹಿತಿ ಸಂಸ ಅವರ ಬದುಕಿನ ಚಿತ್ರಣ. ಈ ಹಿಂದೆ ಸಂಸರ ಕುರಿತು ಶ್ರೀನಿವಾಸ ಪ್ರಭು ಏಕ ವ್ಯಕ್ತಿ ಪ್ರದರ್ಶನ ಮಾಡಿದ್ದರು. ಆ ನಾಟಕವೇ ಈಗ “ಬಿಂಬ… ಆ ತೊಂಬತ್ತು ನಿಮಿಷಗಳು’ ಚಿತ್ರವಾಗಿದೆ. ಇಲ್ಲಿ ಸಂಸರ ಪಾತ್ರವನ್ನು ಶ್ರೀನಿವಾಸ್ ಪ್ರಭು ನಿರ್ವಹಿಸಿದ್ದಾರೆ. ಸಂಸರು ಆತ್ಮಹತ್ಯೆಗೆ ಮುನ್ನ ಒಂದಷ್ಟು ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತಾರೆ. ಒಂದೂಮುಕ್ಕಾಲು ಗಂಟೆ ಅವಧಿಯ ಈ ಚಿತ್ರವನ್ನು ಒಂದೇ ಶಾಟ್, ಒಂದೇ ಸ್ಥಳದಲ್ಲಿ ಚಿತ್ರೀಕರಿಸಲಾಗಿದೆ. ಕೆಲವೇ ಗಂಟೆಗಳಲ್ಲಿ ಚಿತ್ರೀಕರಣ ಮುಗಿದು ಹೋಗಿದ್ದರೂ, ಚಿತ್ರೀಕರಣ ಸಂದರ್ಭದಲ್ಲಿ ಏನೇನಾಯಿತು ಎಂದು ತಿಳಿಯುವುದಕ್ಕೆ ಈ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ